News Karnataka Kannada
Saturday, April 27 2024
ಮೈಸೂರು

ಶಂಕಿತ ಉಗ್ರರ ಬಂಧನ: ಮೈಸೂರಿನಲ್ಲಿ ಕಟ್ಟೆಚ್ಚರ ಮತಷ್ಟು ಚುರುಕುಗೊಳಿಸಿದ ಖಾಕಿ ಪಡೆ

Mysuru Police
Photo Credit : News Kannada

ಮೈಸೂರು: ಬೆಂಗಳೂರಿನಲ್ಲಿ ಕಳೆದ ದಿನ ಶಂಕಿತ ಉಗ್ರರ ಬಂಧನ ಮಾಡಲಾದ ಹಿನ್ನೆಲೆ ರಾಜ್ಯದೆಲ್ಲೆಡೆ ಹೈ ಅಲರ್ಟ್​ ಮಾಡಲಾಗಿದೆ. ಅದರಂತೆ ಸಾಂಸ್ಕೃತಿಕ ನಗರಿ ಮೈಸೂರಿ ನಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದ್ದು, ನಗರದ ಉದಯಗಿರಿ ಠಾಣಾ ಪೊಲೀಸರಿಂದ ನೈಟ್ ಬೀಟ್ ಮತ್ತಷ್ಟು ಚುರುಕುಗೊಳಿಸಲು ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಅವರು ಸೂಚನೆ ನೀಡಿದ್ದಾರೆ. ಜೊತೆಗೆ ಮೈಸೂರಲ್ಲಿ ಕಿಡಿಗೇಡಿಗಳ ಚಟುವಟಿಕೆಗೆ ಬ್ರೇಕ್ ಹಾಕಲು, ಯಾರೇ ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ ವಶಕ್ಕೆ ಪಡೆದು ವಿಚಾರಣೆ ನಡೆಸುವಂತೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ದೊಡ್ಡ ಮಟ್ಟದಲ್ಲಿ ವಿಧ್ವಂಸಕ ಕೃತ್ಯವೆಸಗಲು ಪ್ಲ್ಯಾನ್​ ಮಾಡಿದ್ದ ಐವರು ಶಂಕಿತ ಉಗ್ರರನ್ನ ಕಳೆದ ದಿನ (ಜು.19) ಸಿಸಿಬಿ ಪೊಲೀಸರು ಬಂಧಿಸಿದ್ದರು. ಐವರು ಆರೋಪಿಗಳಾದ ಸುಹೇಲ್, ಉಮರ್, ಜಾಹಿದ್, ಮುದಾಸಿರ್ ಹಾಗೂ ಫೈಜರ್ ನಗರದ ವಿವಿದೆಡೆ ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸುತ್ತಿದ್ದರು. ಈ ಪ್ರಕರಣದ ಪ್ರಮುಖ ಆರೋಪಿ ಜುನೈದ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಈತನೇ ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗುವ ಉಗ್ರರ ಸಂಚಿನ ಕಿಂಗ್ ಪಿನ್.

ಸದ್ಯ ಬಂಧಿತ ಉಗ್ರರಿಂದ 7 ಕಂಟ್ರಿ ಮೇಡ್ ಪಿಸ್ತೂಲ್‌ಗಳು. 45 ಜೀವಂತ ಗುಂಡುಗಳು, ವಾಕಿ ಟಾಕಿ ಸೆಟ್ಸ್, ಒಂದು ಡ್ರ್ಯಾಗರ್ ಹಾಗೂ 12 ಮೊಬೈಲ್ ಫೋನ್‌ಗಳನ್ನು ಬೆಂಗಳೂರು ನಗರ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಗ್ರ ಸಂಚಿನ ಪ್ರಮುಖ ಆರೋಪಿ ಜುನೈದ್ ದುಬೈನಲ್ಲಿ ಇದ್ದಾನೆ ಎನ್ನಲಾಗಿದೆ. ಈ ಕುರಿತು ಮತಷ್ಟು ತನಿಖೆ ಆರಂಭಗೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು