News Karnataka Kannada
Monday, May 06 2024
ಮೈಸೂರು

ರಾಹುಲ್‌ ಗಾಂಧಿ ಬುದ್ಧಿಮಾಂದ್ಯ ಎಂದ ಸ್ವಾಮೀಜಿ ಯಾರು ಗೊತ್ತಾ?

swamiji called Rahul Gandhi mentally retarded
Photo Credit : News Kannada

ಮೈಸೂರು: ಪಂಚರಾಜ್ಯ ಚುನಾವಣೆಗಳ ಪೈಕಿ 4 ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಈ ಪೈಕಿ ಕೇವಲ ತೆಲಂಗಾಣದಲ್ಲಿ ಕಾಂಗ್ರೆಸ್‌ ಜಯಗಳಿಸಿದೆ. ಈ ನಡುವೆ ಕಾಳಿ ಮಠದ ರಿಷಿ ಕುಮಾರ್​ ಸ್ವಾಮೀಜಿ ಅವರು ವಿವಾದಾತ್ಮಕ ಹೇಳಿಕೆ ನೀಡಿರುವ ಮತ್ತೊಂದು ವಿಡಿಯೋ ವೈರಲ್ ಆಗಿದೆ.

ಈ ವಿಡಿಯೋದಲ್ಲಿ ರಿಷಿಕುಮಾರ್ ಸ್ವಾಮೀಜಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ರಾಹುಲ್ ಗಾಂಧಿ ಓರ್ವ ಬುದ್ಧಿಮಾಂದ್ಯ ಎಂದಿದ್ದಾರೆ.

ರಿಷಿ ಕುಮಾರ್​ ಸ್ವಾಮೀಜಿ ವಿಡಿಯೋದಲ್ಲಿ ರಾಹುಲ್ ಗಾಂಧಿಯವರನ್ನು ಮಹಾಭಾರತದ ಧೃತರಾಷ್ಟ್ರಗೆ ಹೋಲಿಸಿದ್ದಾರೆ. ಧೃತರಾಷ್ಟ್ರ ಒಬ್ಬ ಅಂಗವಿಕಲ ಕಣ್ಣು ಕಾಣುತ್ತಿರಲಿಲ್ಲ. ಆತನನ್ನು ದೇಶದ ರಾಜ ಮಾಡಲಾಗಿತ್ತು. ಇದರಿಂದ ಮಹಾಭಾರತವೇ ನಡೆದು ಹೋಯಿತು. ಆಗ ಆಗಿದ್ದೇ ಸಾಕು. ಈಗ ಒಬ್ಬ ಬುದ್ಧಿಮಾಂದ್ಯನನ್ನು ಪ್ರಧಾನಿ ಮಾಡಲು ಸಾಧ್ಯವಿಲ್ಲ. ಸನಾತನ ಧರ್ಮದಲ್ಲಿ ಇದಕ್ಕೆ ಅವಕಾಶವಿಲ್ಲ. ರಾಹುಲ್ ಗಾಂಧಿ ಬಗ್ಗೆ ನನಗೆ ಅನುಕಂಪವಿದೆ.

ಆ ದೇವರು ರಾಹುಲ್ ಗಾಂಧಿಗೆ ಯಾಕೆ ಬುದ್ದಿ ಕೊಡಲಿಲ್ಲ? ಮುಂದಿನ ಜನ್ಮದಲ್ಲಿ ಆತನಿಗೆ ದೇವರು ಬುದ್ದಿ ಶಕ್ತಿ ಕೊಡಲಿ. ಆದರೆ ರಾಹುಲ್ ಗಾಂಧಿ ಈಗ ಬುದ್ಧಿಮಾಂದ್ಯ. ಆದರೆ ಅವರ ತಾಯಿಗೆ ಆತನನನ್ನು ಕಂಡರೆ ಇಷ್ಟ. ನನ್ನ ಮಗ ಎಲ್ಲರಿಗಿಂತ ಬುದ್ದಿವಂತ ಅಂದುಕೊಂಡಿದ್ದಾರೆ ಅದು ಎಲ್ಲಾ ತಾಯಂದಿರಿಗೂ ಸಹಜ ಅಂತ ವ್ಯಂಗ್ಯವಾಡಿರುವ ವಿಡಿಯೋ ವೈರಲ್‌ ಆಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು