ಮೈಸೂರು: ಪಂಚರಾಜ್ಯ ಚುನಾವಣೆಗಳ ಪೈಕಿ 4 ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಈ ಪೈಕಿ ಕೇವಲ ತೆಲಂಗಾಣದಲ್ಲಿ ಕಾಂಗ್ರೆಸ್ ಜಯಗಳಿಸಿದೆ. ಈ ನಡುವೆ ಕಾಳಿ ಮಠದ ರಿಷಿ ಕುಮಾರ್ ಸ್ವಾಮೀಜಿ ಅವರು ವಿವಾದಾತ್ಮಕ ಹೇಳಿಕೆ ನೀಡಿರುವ ಮತ್ತೊಂದು ವಿಡಿಯೋ ವೈರಲ್ ಆಗಿದೆ.
ಈ ವಿಡಿಯೋದಲ್ಲಿ ರಿಷಿಕುಮಾರ್ ಸ್ವಾಮೀಜಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ರಾಹುಲ್ ಗಾಂಧಿ ಓರ್ವ ಬುದ್ಧಿಮಾಂದ್ಯ ಎಂದಿದ್ದಾರೆ.
ರಿಷಿ ಕುಮಾರ್ ಸ್ವಾಮೀಜಿ ವಿಡಿಯೋದಲ್ಲಿ ರಾಹುಲ್ ಗಾಂಧಿಯವರನ್ನು ಮಹಾಭಾರತದ ಧೃತರಾಷ್ಟ್ರಗೆ ಹೋಲಿಸಿದ್ದಾರೆ. ಧೃತರಾಷ್ಟ್ರ ಒಬ್ಬ ಅಂಗವಿಕಲ ಕಣ್ಣು ಕಾಣುತ್ತಿರಲಿಲ್ಲ. ಆತನನ್ನು ದೇಶದ ರಾಜ ಮಾಡಲಾಗಿತ್ತು. ಇದರಿಂದ ಮಹಾಭಾರತವೇ ನಡೆದು ಹೋಯಿತು. ಆಗ ಆಗಿದ್ದೇ ಸಾಕು. ಈಗ ಒಬ್ಬ ಬುದ್ಧಿಮಾಂದ್ಯನನ್ನು ಪ್ರಧಾನಿ ಮಾಡಲು ಸಾಧ್ಯವಿಲ್ಲ. ಸನಾತನ ಧರ್ಮದಲ್ಲಿ ಇದಕ್ಕೆ ಅವಕಾಶವಿಲ್ಲ. ರಾಹುಲ್ ಗಾಂಧಿ ಬಗ್ಗೆ ನನಗೆ ಅನುಕಂಪವಿದೆ.
ಆ ದೇವರು ರಾಹುಲ್ ಗಾಂಧಿಗೆ ಯಾಕೆ ಬುದ್ದಿ ಕೊಡಲಿಲ್ಲ? ಮುಂದಿನ ಜನ್ಮದಲ್ಲಿ ಆತನಿಗೆ ದೇವರು ಬುದ್ದಿ ಶಕ್ತಿ ಕೊಡಲಿ. ಆದರೆ ರಾಹುಲ್ ಗಾಂಧಿ ಈಗ ಬುದ್ಧಿಮಾಂದ್ಯ. ಆದರೆ ಅವರ ತಾಯಿಗೆ ಆತನನನ್ನು ಕಂಡರೆ ಇಷ್ಟ. ನನ್ನ ಮಗ ಎಲ್ಲರಿಗಿಂತ ಬುದ್ದಿವಂತ ಅಂದುಕೊಂಡಿದ್ದಾರೆ ಅದು ಎಲ್ಲಾ ತಾಯಂದಿರಿಗೂ ಸಹಜ ಅಂತ ವ್ಯಂಗ್ಯವಾಡಿರುವ ವಿಡಿಯೋ ವೈರಲ್ ಆಗಿದೆ.
ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…
ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…
ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್ಗಳು…
ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…
ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.