News Karnataka Kannada
Sunday, April 28 2024
ಮೈಸೂರು

ಆರೋಗ್ಯ ಶಿಬಿರಗಳ ಸದುಪಯೋಗ ಪಡೆಯಿರಿ : ಬಸವರಾಜು

Take advantage of health camps: Basavaraju
Photo Credit : By Author

ಮೈಸೂರು: ಗ್ರಾಮೀಣ ಭಾಗದ ಜನರು ತಮ್ಮ ಗ್ರಾಮಗಳಲ್ಲಿ ನಡೆಯುವ ಆರೋಗ್ಯ ಶಿಬಿರಗಳ ಸದುಪಯೋಗ ಪಡೆದುಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜೀವಿಕ ಸಂಸ್ಥೆಯ ಜಿಲ್ಲಾ ಸಂಚಾಲಕ ಬಸವರಾಜು ತಿಳಿಸಿದರು.

ಸರಗೂರು ತಾಲ್ಲೂಕು ಪಂಚಾಯಿತಿ, ಆರೋಗ್ಯ ಇಲಾಖೆ, ಜೀವಿಕ ಸಂಸ್ಥೆ ಮತ್ತು ಗ್ರಾಮ ಪಂಚಾಯಿತಿಗಳ ಸಹಯೋಗದಲ್ಲಿ ತಾಲ್ಲೂಕಿನ ಹಂಚೀಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಸಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಜೀತವಿಮುಕ್ತರ ಆರೋಗ್ಯ ತಪಾಸಣಾ ಶಿಬಿರಗೆ ಚಾಲನೆ ನೀಡಿ ಅವರು ಮಾತನಾಡಿದರು.

ಜೀತವಿಮುಕ್ತರು ಹಾಗೂ ಗ್ರಾಮದ ಎಲ್ಲಾ ಜನರಿಗೂ ಆರೋಗ್ಯ ತಪಾಸಣೆ ನಡೆಸುವ ಉದ್ದೇಶದಿಂದ ಈ ಶಿಬಿರ ಆಯೋಜಿಸಲಾಗಿದ್ದು, ಇದನ್ನು ಪ್ರತಿಯೊಬ್ಬರು ಸದುಪಯೋಗ ಪಡಿಸಿಕೊಳ್ಳಬೇಕು, ಏಕೆಂದರೆ ಇಂದಿನ ಕಾಲದಲ್ಲಿ ತುಂಬಾ ಖಾಯಿಲೆಗಳು ನಮಗೆ ಗೊತ್ತಿಲ್ಲದೆ ನಮ್ಮ ದೇಹ ಸೇರುತ್ತಿವೆ. ಕೊರೋನಾ ಎಂಬ ಮಹಾಮಾರಿ ಜನಜೀವನವನ್ನು ಹೇಗೆ ಅಸ್ತವ್ಯಸ್ತ ಮಾಡಿದೆ ಎಂಬುದು ತಿಳಿದಿದೆ. ಅದಕ್ಕೋಸ್ಕರ ಗ್ರಾಮಗಳಲ್ಲಿ ಆರೋಗ್ಯ ಶಿಬಿರ ಆಯೋಜಿಸಿದಾಗ ಅದರ ಉಪಯೋಗ ಪಡೆದುಕೊಳ್ಳಿ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿಗಳಿoದ ಪ್ರತಿ ಕುಟುಂಬಕ್ಕೂ ಶೌಚಾಲಯ ನಿರ್ಮಿಸಲಾಗಿದೆ. ಆದರೂ ಶೌಚಾಲಯ ಬಳಸುತ್ತಿಲ್ಲ. ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡುವುದು ಹೆಚ್ಚುತ್ತದೆ. ಎಲ್ಲರೂ ಕಡ್ಡಾಯವಾಗಿ ಶೌಚಾಲಯ ಬಳಸಿ ಎಂದು ಕಿವಿಮಾತು ಹೇಳಿದರು.

ಶಿಬಿರದಲ್ಲಿ ಹಂಚೀಪುರ, ಬಿದರಹಳ್ಳಿ, ಇಟ್ನಾ, ಹೆಗ್ಗನೂರು, ಸಾಗರೆ, ಮನುಗನಹಳ್ಳಿ ಮತ್ತು ಕೊತ್ತೇಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಜೀತವಿಮುಕ್ತರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಲಾಯಿತು.

ಈ ವೇಳೆ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಸುಷ್ಮಾ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ವಿವಿಧ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು