ಮೈಸೂರು: ಮನೆಗಳ್ಳರಿಗೆ ಸಾಥ್ ನೀಡಿದ್ದ ಮೈಸೂರಿನ ಅಶೋಕಪುರಂ ಠಾಣೆ ಹೆಡ್ಕಾನ್ಸ್ಟೇಬಲ್ ರಾಜು ಎಂಬಾತನನ್ನು ಬಂಧಿಸಿರುವ ಘಟನೆ ನಡೆದಿದೆ.
ಕದ್ದ ಚಿನ್ನಾಭರಣ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಮೈಸೂರಿನ ಮಂಡಿ ಠಾಣೆ ಪೊಲೀಸರು ಹೆಡ್ಕಾನ್ಸ್ಟೇಬಲ್ ರಾಜು ಸೇರಿದಂತೆ ಕಳ್ಳರಾದ ನಜರುಲ್ಲಾ ಬಾಬು ಹಾಗೂ ಅಲೀಂ ಎಂಬ ಮೂವರನ್ನು ಅರೆಸ್ಟ್ ಮಾಡಲಾಗಿದೆ.
ಮೈಸೂರಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಗಳವು ಮಾಡಿದ್ದ ನಜರುಲ್ಲಾ ಬಾಬು, ಅಲೀಂ. ಸುಮಾರು 400 ಗ್ರಾಂ ಚಿನ್ನಾಭರಣ ಕದ್ದಿದ್ದರು. ಜೊತೆಗೆ ಕದ್ದಿದ್ದ 400 ಗ್ರಾಂ ಚಿನ್ನದಲ್ಲಿ 300 ಗ್ರಾಂನ್ನು ಹೆಚ್ಸಿ ರಾಜುಗೆ ನೀಡಿದ್ದರು.
ಉಳಿದ 100 ಗ್ರಾಂ ಚಿನ್ನಾಭರಣ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದರು. ಬಳಿಕ ನಜರುಲ್ಲಾ ಬಾಬು, ಅಲೀಂನನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಹೆಡ್ಕಾನ್ಸ್ಟೇಬಲ್ ರಾಜು ಬಗ್ಗೆ ಕಳ್ಳರು ಬಾಯ್ಬಿಟ್ಟಿದ್ದು, ಈ ಹಿನ್ನಲೆ ಅಶೋಕಪುರಂ ಠಾಣೆ ಹೆಡ್ಕಾನ್ಸ್ಟೇಬಲ್ ರಾಜು ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

