ನಂಜನಗೂಡು: ವರುಣನ ಅಬ್ಬರಕ್ಕೆ ಕೆರೆಕಟ್ಟೆಗಳು ಭರ್ತಿಯಾಗಿದ್ದು, ನಂಜನಗೂಡು ತಾಲ್ಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಸುತ್ತೂರು, ತಾಯೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದ್ದು, ಈ ಭಾಗದ ಕೆರೆಕಟ್ಟೆಗಳು ತುಂಬಿ ಹರಿದಿವೆ.
ಕೆರೆಕಟ್ಟೆಗಳು ತುಂಬಿ ಹರಿದ ಪರಿಣಾಮ ರೈತರು ಬೆಳೆದ ಬೆಳೆಗಳಿಗೆ ನೀರು ನುಗ್ಗಿ ಅಪಾರ ಹಾನಿ ಉಂಟಾಗಿದೆ. ಅಡ್ಡ ಹಳ್ಳಗಳು, ಸಣ್ಣಪುಟ್ಟ ಕೆರೆಗಳು , ಕಾಲುವೆಗಳು, ಸಣ್ಣಕೆರೆಗಳು ಭರ್ತಿಯಾಗಿವೆ. ಸೇತುವೆ ಮೇಲೆ ನೀರು ಹರಿದ ಪರಿಣಾಮ ವಾಹನ ಸವಾರರಿಗೆ ಸಂಚರಿಸಲು ತುಂಬಾ ತೊಂದರೆಯಾಗಿತ್ತು.
ಈ ಭಾಗದಲ್ಲಿ ಕಳೆದ ಮೂರು ನಾಲ್ಕು ತಿಂಗಳಿಂದ ಬೇಸಿಗೆಯಿಂದ ಜನ-ಜಾನುವಾರುಗಳಿಗೆ ರೈತರಿಗೆ ಮಳೆಯಿಲ್ಲದೆ ಬಿಸಿಲಿನಲ್ಲಿ ಬೆಂದು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ರಾತ್ರಿ ಸುರಿದ ಧಾರಾಕಾರ ಮಳೆಗೆ ರೈತರು ಸಂತಸಕೊಂಡಿದ್ದಾರೆ. ಈಗಾಗಲೇ ಕೃಷಿ ಚಟುವಟಿಕೆಯನ್ನು ನಡೆಸುತ್ತಿದ್ದೇವೆ ಬಿತ್ತನೆ ಕಾರ್ಯದಲ್ಲಿ ರೈತರು ತೊಡಗಿದ್ದೇವೆ ಎಂದು ಗ್ರಾಮದ ರೈತ ಶಿವಣ್ಣ ಹರ್ಷ ವ್ಯಕ್ತಪಡಿಸಿದ್ದಾರೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…