ನಂಜನಗೂಡು: ತಾಲ್ಲೂಕಿನ ಹುಲ್ಲಹಳ್ಳಿ ಪಟ್ಟಣದ ಶ್ರೀ ಮಹದೇವ ತಾತ ಬಡಾವಣೆಯಲ್ಲಿರುವ ಶ್ರೀ ಅಲಮೇಲು ಮಂಗಮ್ಮ ಸಮೇತ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಇಂದು ವೈಕುಂಠ ಏಕಾದಶಿ ಪ್ರಯುಕ್ತ ಶ್ರೀ ವೆಂಕಟೇಶ್ವರ ಸ್ವಾಮಿ ವೈಕುಂಠ ವೈಭವ ಕಾರ್ಯಕ್ರಮವು ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ನಡೆಯಿತು.
ನಿನ್ನೆಯಿಂದಲೇ ದೇವಾಲಯದಲ್ಲಿ ಹೋಮ ಹವನಗಳು ನಡೆದು ಇಂದು ಬೆಳಿಗ್ಗೆಯಿಂದಲೇ ಶ್ರೀ ಅಲಮೇಲು ಮಂಗಮ್ಮ ಹಾಗೂ ಶ್ರೀ ವೆಂಕಟೇಶ್ವರ ಸ್ವಾಮಿ ಅವರಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ನಡೆಸಲಾಯಿತು.
ದೇವಾಲಯಕ್ಕೆ ಹುಲ್ಲಹಳ್ಳಿ ಹಾಗೂ ಸುತ್ತಮುತ್ತಲಿನ ಸಾವಿರಾರು ಭಕ್ತರು ಆಗಮಿಸಿ, ದೇವರ ದರ್ಶನ ಪಡೆದು ತಮ್ಮ ಭಕ್ತಿ ಭಾವ ಮೆರೆದರು. ಇದೇ ಸಂದರ್ಭ ದೇವಾಲಯದ ವತಿಯಿಂದ ನಿರ್ಮಿಸಲಾಗಿದ್ದ ವೈಕುಂಠ ದ್ವಾರವನ್ನು ಪ್ರವೇಶಿಸಿ ಸುವ ಮೂಲಕ ವೈಕುಂಠ ಏಕಾದಶಿಯನ್ನು ಏಕಾಗ್ರತೆಯಿಂದ ಆಚರಿಸಿದ ಭಕ್ತರು ಶ್ರೀ ವೆಂಕಟೇಶ್ವರನಿಗೆ ತಮ್ಮ ಭಕ್ತಿ ನಮನ ಸಲ್ಲಿಸಿದರು.
ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಯದ ಒಳ ಹಾಗು ಹೊರ ಆವರಣಗಳನ್ನು ಬಣ್ಣ ಬಣ್ಣದ ಹೂ ಹಾಗು ವಿದ್ಯುತ್ ದೀಪಗಳಿಂದ ಭವ್ಯವಾಗಿ ಅಲಂಕಾರಿಕ ಲಾಗಿತ್ತು. ಬಂದ ಎಲ್ಲಾ ಭಕ್ತರಿಗೆ ದೇವಾಲಯದ ವತಿಯಿಂದ ಲಾಡು ಸೇರಿದಂತೆ ಪ್ರಸಾದ ವಿನಿಯೋಗ ಮಾಡಲಾಯಿತು. ದೇವಾಲಯದ ಸಂಸ್ಥಾಪಕ ಸದಸ್ಯರಾದ ವಕೀಲ ಶ್ರೀನಿವಾಸರೆಡ್ಡಿ, ದೇವಾಲಯದ ಸಂಸ್ಥಾಪಕರಾದ ಶ್ರೀ ವಿಜಯಲಕ್ಷ್ಮಿ, ನಾರಾಯಣರೆಡ್ಡಿ, ಡಾ.ಕುಮಾರ್, ಸೇರಿದಂತೆ ಕುಟುಂಬ ವರ್ಗದವರು ಉಪಸ್ಥಿತರಿದ್ದರು.