Categories: ಮೈಸೂರು

ಉಪನ್ಯಾಸಕನ ಪರಿಸರ ಪ್ರೇಮ… ಸಸ್ಯಕಾಶಿಯಾದ ಕಾಲೇಜು ಆವರಣ…

ನಂಜನಗೂಡು: ವಿಧ್ಯಾರ್ಥಿಗಳ ಪ್ರಗತಿಗೆ ಕಾಲೇಜಿನ ಉತ್ತಮ ವಾತಾವರಣ ಸಹಕಾರಿ ಎಂಬ ಮಾತಿಗೆ ನಂಜನಗೂಡು ತಾಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಾಕ್ಷಿಯಾಗಿದೆ.

ಬರಡು ಬಯಲಾಗಿದ್ದ ಕಾಲೇಜಿನ ಆವರಣವೀಗ ಸಸ್ಯಕಾಶಿಯಾಗಿದೆ. ಕಾಲೇಜು ಉಪನ್ಯಾಸ ಹಾಗೂ ಎನ್.ಎಸ್.ಎಸ್.ಅಧಿಕಾರಿಯೂ ಆಗಿರುವ ವೆಂಕಟರಮಣ ಮತ್ತು ವಿದ್ಯಾರ್ಥಿಗಳು, ಪ್ರಾಶುಪಾಲರಾದ ಡಾ.ಟಿ.ಆರ್. ಸಿದ್ದರಾಜು ಮತ್ತು ಸಹದ್ಯೋಗಿಗಳ ಸಹಕಾರದಿಂದ ಬರಡು ನೆಲವೀಗ ಕೆಲವೇ ವರ್ಷಗಳಲ್ಲಿ ಹಸಿರಿನಿಂದ ಕಂಗೊಳಿಸುತ್ತಿದೆ. ಎಲ್ಲರ ಪರಿಶ್ರಮದಿಂದಾಗಿ ಕಾಲೇಜಿನ ಆವರಣ ಮಲೆನಾಡಿನ ವಾತಾವರಣವನ್ನ ಸೃಷ್ಟಿಸಿದೆ.

ಕಾಲೇಜಿನ ವಿಧ್ಯಾರ್ಥಿಗಳ ಪಠ್ಯೇತರ ಚಟುವಟಿಕೆಗಳ ಬೆಳವಣಿಗೆಗಾಗಿ ಮೀಸಲಾಗಿದ್ದ ಜಾಗ ಬರಡಾಗಿತ್ತು. ಆಟದ ಮೈದಾನ ಹೊರತುಪಡಿಸಿ ಉಳಿದ ಜಾಗವನ್ನ ಹಸಿರೀಕರಣ ಮಾಡಲು ಕನ್ನಡ ಉಪನ್ಯಾಸಕರಾದ ವೆಂಕಟರಮಣ ನಿರ್ಧರಿಸಿ ಕಾರ್ಯೋನ್ಮುಖರಾದರು. ಈ ವಿಚಾರದಲ್ಲಿ ಸಹದ್ಯೋಗಿಗಳು ಅಪಹಾಸ್ಯ ಮಾಡಿದ್ದೂ ಉಂಟು. ಇದ್ಯಾವುದನ್ನ ಲೆಕ್ಕಿಸದ ವೆಂಕಟರಮಣ ಸವಾಲಾಗಿ ಸ್ವೀಕರಿಸಿ ವಿದ್ಯಾರ್ಥಿಗಳ ನೆರವು ಹಾಗೂ ಪ್ರಾಂಶುಪಾಲರಾದ ಡಾ.ಟಿ.ಆರ್. ಸಿದ್ದರಾಜು ರವರ ಮಾರ್ಗದರ್ಶನ ಪಡೆದು ಕಾಲೇಜು ಆವರಣವನ್ನ ಹಸಿರುವಲಯವಾಗಿ ಪರಿವರ್ತಿಸಲು ಪಣತೊಟ್ಟರು. ಕೆಲವು ವರ್ಷಗಳ ಕಠಿಣ ಪರಿಶ್ರಮ ಇದೀಗ ಕಾಲೇಜು ಆವರಣ ಹಸಿರಿನಿಂದ ಕಂಗೊಳಿಸುತ್ತಿದೆ. ಕನ್ನಡ ಪಾಠದಲ್ಲಿ ವಿದ್ಯಾರ್ಥಿಗಳ ಮನಸ್ಸನ್ನ ಗೆದ್ದ ಉಪನ್ಯಾಸಕ ವೆಂಕಟರಮಣ ಕಾಲೇಜು ಆವರಣದಲ್ಲಿ ಉತ್ತಮ ವಾತಾವರಣ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬೆಳವಣಿಗೆಗೆ ತಮ್ಮ ಸ್ವಂತ ಹಣ ವಿನಯೋಗಿಸಿದ್ದಾರೆ. ಕಾಲೇಜಿನಿಂದಾಗಲಿ ದಾನಿಗಳಿಂದಾಗಲಿ ನಯಾಪೈಸೆ ನೆರವು ಪಡೆದಿಲ್ಲ. ಸ್ವಂತ ಖರ್ಚಿನಲ್ಲಿ ಸುಮಾರು ಎರಡು ಎಕ್ರೆ ಬರಡು ನೆಲದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು, ನೀರೆರೆದಿದ್ದಾರೆ. ಪ್ರಾಣಿ, ಪಕ್ಷಿಗಳಿಗೂ ಅನುಕೂಲವಾಗುವಂತೆ ಹಾಗೂ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಮಾಡಲು ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಮಾಡಿ, ಸಸ್ಯಕಾಶಿಯನ್ನಾಗಿ ಪರಿವರ್ತಿಸಿದ್ದಾರೆ.

ಸುಮಾರು 6 ವರ್ಷಗಳ ಪರಿಶ್ರಮ ಫಲ ನೀಡಿದೆ. ಹಸಿರುವಲಯವಾಗಿರುವ ಕಾಲೇಜು ಆವರಣವನ್ನ ವಿಧ್ಯಾರ್ಥಿಗಳು ಖುಷಿಯಿಂದ ತಮ್ಮ ಪಠ್ಯೇತರ ಚಟುವಟಿಕೆಗಳಿಗೂ ಬಳಸಿಕೊಳ್ಳುತ್ತಿದ್ದಾರೆ. ಕನ್ನಡ ಉಪನ್ಯಾಸಕ ವೆಂಕಟರಮಣ ರವರ ಪ್ರಕೃತಿ ಪ್ರೇಮಕ್ಕೆ ಇಡೀ ಕಾಲೇಜು ಫಿದಾ ಆಗಿದೆ. ದೊಡ್ಡಕವಲಂದೆ ಜನರೂ ಸಹ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago