ಮೈಸೂರು : ತಮ್ಮ ಮೇಲೆ ಕ್ರಮ ಕೈಗೊಳ್ಳಲು ಧಮ್ ಬೇಕು ಎಂಬ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಹೇಳಿಕೆ ವಿಚಾರವಾಗಿ ಮೈಸೂರಿನಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಅವರು ದೊಡ್ಡವರು ಇದ್ದಾರೆ ಪಾರ್ಟಿಯಲ್ಲಿ ಆ ಬಗ್ಗೆ ತೀರ್ಮಾನ ಕೈ ಗೊಳ್ಳುತ್ತೇವೆ. ನಮ್ಮ ಶಕ್ತಿ ಅಮೇಲೆ ತೋರಿಸ್ತಿವಿ ಎಂದರು.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ವಿಚಾರವಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಒಂದು ತಿಂಗಳಿನಿಂದ ಈ ಸಮಸ್ಯೆ ಇದೆ. ಜನರು ಹಳ್ಳಿ ಹಳ್ಳಿಯನ್ನ ಬಿಟ್ಟು ಹೋಗುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಈ ಸಮಸ್ಯೆ ಇದೆ. ಮೈಕ್ರೋ ಫೈನಾನ್ಸ್ ಜನ ಸಾಮಾನ್ಯರ ಮೇಲೆ ಕಿರುಕುಳ ಕೊಡುತ್ತಿದ್ದಾರೆ. ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದರು.
ಜನರಿಗೆ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಮಾಡುತ್ತಿಲ್ಲ. ಬಾಣಂತಿರಯರ ಸಾವು ಆಗಿದೆ. ಏನು ಕ್ರಮ ಆಗಿದೆ. ಕಳಪೆ ಔಷಧಿಯ ಬಗ್ಗೆ ಏನು ಕ್ರಮ ತೆಗದುಕೊಂಡಿದ್ದೀರಾ, ಕೇವಲ ಕುರ್ಚಿಗಾಗಿ ಚರ್ಚೆ ಆಗುತ್ತಿದೆ. ಎಷ್ಟು ದಿನ ಇರ್ತೀರಾ ಅನ್ನುವುದು ಮುಖ್ಯವಲ್ಲ. ದೇವರಾಜ ಅರಸು ಅವರಿಗೆ ಸರಿ ಸಮಾನಗಿ ಅಂಥ ಸಿದ್ದರಾಮಯ್ಯ ಹೇಳ್ತಾರೆ. ಇನ್ನೂ ಐದು ವರ್ಷ ನೀವೇ ಅಧಿಕಾರದಲ್ಲಿರಿ. ಜನರಿಗೆ ಕೊಡುತ್ತಿರುವ ಸಾಲದ ಹೊರೆಯನ್ನ ಕಡಿಮೆ ಮಾಡಿ ಎಂದರು.
2 ಸಾವಿರದಿಂದ ಬಡವರನ್ನ ಹಾರ್ಥಿಕವಾಗಿ ಬೆಳಸುತ್ತೇವೆ ಅಂತೀರುವುದು ಇದೇನಾ. ಮೈಕ್ರೋ ಫೈನಾನ್ಸ್ ಯಾವುದೇ ಅನುಮತಿ ಪಡೆಯದೆ ಅಣಬೆ ರೀತಿ ಹುಟ್ಟಿದ್ದಾವೆ. ಯಾವ ರೀತಿ ಅವರ ಮೇಲೆ ಕಡಿವಾಷ ಹಾಕಿದ್ದೀರಿ. ಸರ್ಕಾರಕ್ಕೆ ಈ ಬಗ್ಗೆ ಮನವಿ ಮಾಡಿದ್ದೇನೆ. 2018ರಲ್ಲಿ ಖುಣಮುಕ್ತ ಕಾಯ್ದೆ ಜಾರಿಗೆ ತಂದಿದ್ದೇನೆ. ವಿಧಾನಸಭೆಯಲ್ಲಿ ಬಿಲ್ ಸಹ ಪಾಸ್ ಆಗಿದೆ. ರಾಷ್ಟ್ರಪತಿಗಳ ಬಳಿಗೆ ನಾನೇ ಹೋಗಿ ಅಂಕಿತ ತೆಗದುಕೊಂಡು ಬಂದೆ. ಆದರೆ ಬಿಲ್ ಏನಾಯ್ತು.
ಬಂಡೆಪ್ಪ ಕಾಂಶಪ್ಪೂರು ಕೇರಳಕ್ಕೆ ಕಳುಹಿಸಿ ಈ ಬಗ್ಗೆ ಸಾಕಷ್ಟು ಮಾಹಿತಿ ಕೆಲ ಹಾಕಿದೆ. ಮಂಡ್ಯ ಜಿಲ್ಲೆಯಲ್ಲಿ 60 ರಲ್ಲಿ 14ಕ್ಕೆ ಮಾತ್ರ ಲೈಸೆನ್ಸ್ ಪಡೆದಿರುವ ಮೈಕ್ರೋ ಫೈನಾನ್ಸ್ ಇದೆ. ದಾವೋಸ್ ಗೆ ಹೋಗಲು ಬಜೆಟ್ ಪ್ರಿಪರೇಷನ್ ಮಾಡುತ್ತಿದ್ದೇನೆ ಎಂದು ಸಿಎಂ ಹೇಳಿದ್ದಾರೆ. ಎಲ್ಲ ರಾಜ್ಯದ ಪ್ರಮುಖರು ದಾವೋಸ್ ಗೆ ಹೋಗಿ ಬಂಡಾವಳ ತರುತ್ತಿದ್ದಾರೆ. ನೀವು ಏನ್ ಮಾಡುತ್ತಾ ಇದ್ದೀರಾ. ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.