ಮೈಸೂರು : ನಂಜನಗೂಡು ತಾಲ್ಲೂಕಿನ ಮುಳ್ಳೂರು ಗ್ರಾಮದ ಸರ್ಕಾರಿ ಭೂಮಿಯಲ್ಲಿ ಬಾರಿ ಗಾತ್ರದ ಬೆಲೆಬಾಳುವ ಮರಗಳು ಬೆಳೆದು ನಿಂತಿದವು ಇದನ್ನು ಬಂಡವಾಳ ಮಾಡಿಕೊಳ್ಳುವ ಸಲುವಾಗಿ ಸರ್ಕಾರಿ ಭೂಮಿಯ ಸಮೀಪದ ಜಮೀನಿನನ್ನು ಒತ್ತುವರಿ ಮಾಡಿಕೊಂಡು ಬೃಹತ್ ಗಾತ್ರದ ಮರಗಳನ್ನು ಕಟಾವು ಮಾಡಿ, ಮಾರಾಟ ಮಾಡಲಾಗಿದೆ .
ರಾತ್ರೋರಾತ್ರಿ ನಾಸಿರ್ ಎಂಬಾತ ತನ್ನ ಸಹಪಾಠಿಗಳ ಜೊತೆ ಸೇರಿ ಬೆಲೆಬಾಳುವ ಬಾರಿ ಗಾತ್ರದ ಮರಗಳನ್ನು ನೆಲಕ್ಕುರುಳಿಸಿ ಎಸ್ಕೇಪ್ ಮಾಡಲು ಮುಂದಾಗಿದ್ದಾನೆ. ಇದನ್ನು ಗಮನಿಸಿದ ಅಂಬೇಡ್ಕರ್ ಸೇನೆಯ ತಾಲ್ಲೂಕು ಅಧ್ಯಕ್ಷ ಮುಳ್ಳೂರು ಸ್ವಾಮಿ ಮತ್ತು ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಕೂಡಲೇ ನಂಜನಗೂಡು ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಚಾರ ಮುಟ್ಟಿಸಿದ್ದಾರೆ .
ಲಕ್ಷಾಂತರ ಬೆಳೆ ಬಾಳುವ ಹತ್ತಕ್ಕೂ ಹೆಚ್ಚು ಮರಗಳನ್ನು ಕಟಾವು ಮಾಡಲಾಗಿತ್ತು. ಇದನ್ನು ಕೂಡಲೇ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಲು ಸಂಘಟಕರು ಆಗ್ರಹಿಸಿದ್ದಾರೆ. ಈಗಾಗಲೇ ಗೀಕಳ್ಳಿ ಗ್ರಾಮದ ಪುಟ್ಟಸ್ವಾಮಿ ಮತ್ತು ನಗರ್ಲೆ ಗ್ರಾಮದ ದಲ್ಲಾಳಿ ನಾಸೀರ್ ಎಂಬಾತನ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಆದರೂ ತಡ ರಾತ್ರಿ ಮರಗಳನ್ನು ಕಟಾವು ಮಾಡಿ ಬೇರೆ ಕಡೆ ಸಾಗಿಸಲು ಖದೀಮರು ಮುಂದಾಗಿದ್ದಾರೆ. ಕೆಲವು ಮರಗಳು ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ. ಕೂಡಲೇ ಆರೋಪಿಗಳನ್ನು ಬಂಧಿಸಬೇಕು . ಅರಣ್ಯ ಇಲಾಖೆ ಅಧಿಕಾರಿಗಳೇ ಖದೀಮರ ಜೊತೆ ಶಾಮಿಲಾಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ತನಿಖೆ ಮಾಡಿ ಅರಣ್ಯ ಇಲಾಖೆ ಸಿಬ್ಬಂದಿಗಳ ಹೆಸರಿಗೆ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸಂಘಟಕರು ಆಗ್ರಹಿಸಿದ್ದಾರೆ.