News Karnataka Kannada
Monday, April 29 2024
ಮೈಸೂರು

ವರುಣ: ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಡಾ.ಭಾರತಿ ಶಂಕರ್ ನಾಮಪತ್ರ ಸಲ್ಲಿಕೆ

Varuna: Dr Bharathi Shankar files nomination as JD(S) candidate
Photo Credit : News Kannada

 

ವರುಣ: ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಇಂದು ಡಾ.ಭಾರತಿ ಶಂಕರ್ ನಾಮಪತ್ರ ಸಲ್ಲಿಸಿದ್ದಾರೆ.ಜೆಡಿಎಸ್ ಪಕ್ಷದ ಕಾರ್ಯಕರ್ತರೊಂದಿಗೆ ನಂಜನಗೂಡು ನಗರದ ತಾಲೂಕು ಪಂಚಾಯಿತಿ ಕಚೇರಿಗೆ ಕುಟುಂಬ ಸಮೇತ ಆಗಮಿಸಿ ವರುಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಡಾ. ಭಾರತಿ ಶಂಕರ್  ಚುನಾವಣಾ ಅಧಿಕಾರಿ ಗೌರವ ಶೆಟ್ಟಿ ಕುಮಾರ್ ಅವರಿಗೆ ನಾಮ ನಿರ್ದೇಶನ ಮಾಡಿದರು.

ಬಳಿಕ ಮಾತನಾಡಿದ ಅವರು, ಕ್ಷೇತ್ರಕ್ಕೆ ನಾನೇ ಹಳೇ ರಾಜಕಾರಣಿ, ಕ್ಷೇತ್ರದ ಜನರಿಗೆ ನನ್ನ ಬಗ್ಗೆ ಗೊತ್ತಿದೆ. ಮತದಾರರು ಅಭೂತಪೂರ್ವ ಬೆಂಬಲ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಬರುವುದಕ್ಕಿಂತ ಮುಂಚೆ ನಾನೇ ಕ್ಷೇತ್ರದಲ್ಲಿ ಜನರ ಪ್ರೀತಿಗಳಿಸಿದ್ದೇನೆ. ಕುಮಾರಸ್ವಾಮಿ ಅವರು ನಂಜನಗೂಡು ಕ್ಷೇತ್ರಕ್ಕೆ ಅಭ್ಯರ್ಥಿ ಬೇಡ ಎಂದು ನಿರ್ಧಾರ ಮಾಡಿ ಮಾನವೀಯತೆ ಮರೆದಿದ್ದಾರೆ. ದರ್ಶನ್ ಧ್ರುವನಾರಾಯಣ್ ಅವರನ್ನು ಗೆಲ್ಲಿಸುವಂತೆ ಕರೆ ನೀಡಿದ್ದಾರೆ. ಇಂತಹ ಮಾನವೀಯತೆ ಗುಣಗಳನ್ನು ಕುಮಾರಸ್ವಾಮಿಯವರಲ್ಲಿ ಕಂಡಿದ್ದೇವೆ.

ಸೋಮಣ್ಣ ಹೊರಗಿನಿಂದ ಬಂದವರು. ಸಿದ್ದರಾಮಯ್ಯ ಮತ್ತು ನನ್ನ ಗೆಲುವಿಗೆ ಜನರು ತೀರ್ಮಾನ ಮಾಡುತ್ತಾರೆ. ಈ ಬಾರಿ ರಾಷ್ಟ್ರೀಯ ಪಕ್ಷಗಳನ್ನು ಬಿಟ್ಟು ಪ್ರಾದೇಶಿಕ ಪಕ್ಷಕ್ಕೆ ಮಾನ್ಯತೆ ನೀಡಿ ಜೆಡಿಎಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು. ರಾಜ್ಯದಲ್ಲಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಬೆಂಬಲಿಸಿ ನನಗೆ ಈ ಬಾರಿ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ನರಸಿಂಹಸ್ವಾಮಿ, ವಕೀಲ ಪಾಲಾಕ್ಷ, ಜೆಡಿಎಸ್ ವಕ್ತಾರ ತಾಯೂರು ಪ್ರಕಾಶ್, ಡಾ.ಸನಾತ್ ಕುಮಾರಿ, ಸುಪ್ರಿಯ ಶಂಕರ್, ರವೀಂದ್ರ ಕುಮಾರ್ ಅರುಣ್ ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು