ಮೈಸೂರು: ಆಸ್ಪತ್ರೆಗೆ ಹೋಗಿ ಬರುತ್ತೇನೆಂದು ಮನೆಯಲ್ಲಿ ಹೇಳಿ ಹೋದ ಪತಿ ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವುದರಿಂದ ಪತ್ನಿ ಇದೀಗ ತನ್ನ ಪತಿಯನ್ನು ಹುಡುಕಿ ಕೊಡಿ ಎಂದು ಪೊಲೀಸರ ಮೊರೆಹೋಗಿರುವ ಘಟನೆ ಹುಣಸೂರು ತಾಲ್ಲೂಕಿನ ಹಿರೀಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹಿರೀಕ್ಯಾತನಹಳ್ಳಿ ಗ್ರಾಮದ ರಾಧಮಣಿ ಪತಿಗಾಗಿ ಹುಡುಕಾಟ ನಡೆಸುತ್ತಿರುವವರು.
ಇವರ ಪತಿ ಕರಿಯಪ್ಪ ಅವರು ಮೈಸೂರಿನ ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದರು ಎನ್ನಲಾಗಿದೆ. ಆದರೆ ಇದುವರೆಗೆ ಪತಿ ಮನೆಗೆ ಬಂದಿಲ್ಲ. ಈ ಬಗ್ಗೆ ಸಂಬಂಧಿಕರ ಮನೆಯಲ್ಲೆಲ್ಲ ಹುಡುಕಾಡಿದರೂ ಸುಳಿವು ಸಿಗದ ಹಿನ್ನಲೆಯಲ್ಲಿ ಪತ್ನಿ ರಾಧಾಮಣಿ ಅವರು ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಸುಳಿವು ಸಿಕ್ಕಲ್ಲಿ 08222 -252042 ಅಥವಾ 9480805056ನ್ನು ಸಂಪರ್ಕಿಸುವಂತೆ ಇನ್ಸ್ ಪೆಕ್ಟರ್ ಚಿಕ್ಕಸ್ವಾಮಿ ತಿಳಿಸಿದ್ದಾರೆ.