ಬೆಂಗಳೂರು: ಕರ್ನಾಟಕ ಹಾಲು ಮಹಾ ಒಕ್ಕೂಟ (ಕೆಎಂಎಫ್) ಇದೀಗ ಮಧುಮೇಹಿಗಳು ಸೇರಿದಂತೆ ಎಲ್ಲರ ಆರೋಗ್ಯ ಹಿತದೃಷ್ಟಿಯಿಂದ ಅತಿಹೆಚ್ಚು ನಾರಿನಾಂಶದಿಂದ ಕೂಡಿರುವ ಕ್ಯಾಲ್ಸಿಯಂಯುಕ್ತ ʼರಾಗಿ ಅಂಬಲಿ’ಯನ್ನು ಮಾರುಕಟ್ಟೆಗೆ ಪರಿಚಯಿಸಿದೆ.
ಕೆಎಂಎಫ್ ನ ಭಾಗವಾಗಿರುವ ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತವು(ಮೈಮುಲ್) ಕಳೆದ 15 ದಿನಗಳ ಹಿಂದೆಯಷ್ಟೇ 200 ಎಂಎಲ್ ಹೊಂದಿರುವ ರಾಗಿ ಅಂಬಲಿ ಪ್ಯಾಕ್ಗಳನ್ನು ಪ್ರಾಯೋಗಿಕವಾಗಿ ಮೈಸೂರು ಭಾಗದ ಮಾರುಕಟ್ಟೆಗೆ ಪರಿಚಯಿಸಿದ್ದು, ಜನರಿಂದ ಉತ್ತಮ ಸ್ಪಂದನೆಯೂ ದೊರೆತಿದೆ.
ಇದೀಗ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಗೆ ವಿಸ್ತರಿಸಲು ಆಸಕ್ತಿ ವಹಿಸಿದೆ. ಆರೋಗ್ಯ ದೃಷ್ಟಿಯಿಂದ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಸೇವಿಸಬಹುದಾದ ಪದಾರ್ಥ ಇದಾಗಿದೆ. ದೇಹ ತಂಪೆನಿಸುವ ಹಾಗೂ ಉತ್ತಮ ಆರೋಗ್ಯಕ್ಕಾಗಿ ಫೈಬರ್ ಹಾಗೂ ಕ್ಯಾಲ್ಸಿಯಂ ಅಂಶ ಹೊಂದಿರುವ ರಾಗಿ ಅಂಬಲಿಯನ್ನು ಮಾರುಕಟ್ಟೆಗೆ ತರಲಾಗಿದೆ ಎಂದು ಮೈಸೂರು ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಬಿ.ಎನ್.ವಿಜಯ್ಕುಮಾರ್ ತಿಳಿಸಿದ್ದಾರೆ
200 ಎಂಎಲ್ನ ಒಂದು ಪ್ಯಾಕೇಟ್ಗೆ 10 ರೂ. ನಂತೆ ದರ ನಿಗದಿ ಮಾಡಲಾಗಿದೆ. ಈ ರಾಗಿ ಅಂಬಲಿಯನ್ನು ರೆಫ್ರಿಜರೇಟರ್ನಲ್ಲಿ ಮೂರರಿಂದ ನಾಲ್ಕು ದಿನಗಳವರೆಗೆ ಶೇಖರಿಸಿ ಇಡಬಹುದಾಗಿದೆ.
ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ ಮಕ್ಕಳ ಮೇಲೆ ಬೀದಿ ನಾಯಿಗಳ ಗ್ಯಾಂಗ್ ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…
ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…
ಸ್ಯಾಂಡಲ್ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…
ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…
ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…