ನವದೆಹಲಿ: ಬಜೆಟ್ ನಲ್ಲಿ ತಾರತಮ್ಯವಾಗಿದೆ ಎಂದು ಆರೋಪಿಸಿ ದಕ್ಷಿಣದಲ್ಲಿ ಪ್ರತ್ಯೇಕ ರಾಷ್ರಕ್ಕೆ ಬೇಡಿಕೆ ಇಡಬೇಕಾಗುತ್ತದೆ ಎಂದು ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ಡಿ.ಕೆ ಸುರೇಶ್ ಗೆ ಸ್ವಪಕ್ಷದವರಿಂದಲೇ ಬೆಂಬಲ ಸಿಗದಾಗಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ಸ್ ಅಧ್ಯಕ್ಷ ಮಲ್ಲಿಕಾರ್ಜಿನ ಖರ್ಗೆ, ಇಂತಹ ವಿಭಜನೆಯ ಮಾತುಗಳನ್ನು ಸಹಿಸಲಾಗುವುದಿಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಭಾರತ ಒಂದು ಎಂದು ಹೇಳಿದ್ದಾರೆ.
ಡಿ.ಕೆ ಸುರೇಶ್ ಹೆಸರನ್ನು ಉಲ್ಲೇಖಿಸದೆ ಹೇಳಿಕೆ ನೀಡಿದ ವಾಣಿಜ್ಯ ಸಚಿವ ಪೀಯೂಷ್ ಗೋಯಲ್, ಕಾಂಗ್ರೆಸ್ಸ್ ನಲ್ಲಿ ವಿಭಜಕ ಶಕ್ತಿಗಳು ಇನ್ನೂ ಜೀವಂತವಾಗಿರುವುದಕ್ಕೆ ಇದು ಉದಾಹರಣೆ ಎಂದರು.
ತಮ್ಮ ಹೇಳಿಕೆಗೆ ಹಲವಾರು ಟೀಕೆಗಳು ಬಂದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಸುರೇಶ್, ವಿವಾದ ಸೃಷ್ಟಿಸಲು ಬಿಜೆಪಿ ನನ್ನ ಹೇಳಿಕೆಯನ್ನು ತಿರುಚಿದ್ದಾರೆ ಎಂದು ಆರೋಪಿಸಿದರು. ʼಕರ್ನಾಟಕವು ಭಾರತದ ಭಾಗವಾಗಿಯೇ ಮುಂದುವರಿಯುತ್ತದೆ. ದಕ್ಷಿಣದ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯವನ್ನು ಹೇಳಿದ್ದೇನೆʼ ಎಂದು ಸ್ಪಷ್ಟನೆ ಕೊಡುವ ಪ್ರಯತ್ನ ಮಾಡಿದರು.