Bengaluru 22°C
Ad

ಕೆ‌ಎಸ್‌ಆರ್‌ಟಿಸಿ‌ ಬಸ್ ಬೈಕ್‌ ಗೆ ಡಿಕ್ಕಿ : ಇಬ್ಬರು ಸ್ಥಳದಲ್ಲೇ ಮೃತ್ಯು

ಬೈಕ್ ಹಾಗೂ ಕೆ‌ಎಸ್‌ಆರ್‌ಟಿಸಿ‌ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಬ್ಬಕೆರೆ ಗೇಟ್ ಬಳಿ ನಡೆದಿದೆ.

ರಾಮನಗರ: ಬೈಕ್ ಹಾಗೂ ಕೆ‌ಎಸ್‌ಆರ್‌ಟಿಸಿ‌ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಬ್ಬಕೆರೆ ಗೇಟ್ ಬಳಿ ನಡೆದಿದೆ.

ರಾಮನಗರದಿಂದ ಕನಕಪುರದ ಕಡೆ ಕೆ‌ಎಸ್‌ಆರ್‌ಟಿಸಿ‌ ಬಸ್ ತೆರಳುತ್ತಿತ್ತು. ಈ ವೇಳೆ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆದಿದೆ. ಬೈಕ್‌ನಲ್ಲಿದ್ದ ಓರ್ವ ಮಹಿಳೆ ಹಾಗೂ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ಯಾರು ಅನ್ನೋದು ಸ್ಥಳೀಯರಿಗೆ ಗೊತ್ತಾಗಿಲ್ಲ. ಘಟನಾ ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸರು ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿ ಪ್ರಕರಣ ದಾಖಲಿಸಿದ್ದಾರೆ.

Ad
Ad
Nk Channel Final 21 09 2023
Ad