ಶಿವಮೊಗ್ಗ: ಜಿಲ್ಲೆಯ ಗಾಂಧಿಬಜಾರ್ ಬಸವೇಶ್ವರ ದೇವಸ್ಥಾನದ ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು 8 ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲಾಗಿವೆ. ತಕ್ಷಣ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಲು ಹರಸಾಹಸ ಪಟ್ಟಿತು.
ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಬೆಂಕಿ ಬಿದ್ದಿರುವ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳಕ್ಕೆ ಕರೆ ಮಾಡಲಾಗಿತ್ತು. ಬಟ್ಟೆ ಅಂಗಡಿ, ಫ್ಯಾನ್ಸಿ ಸ್ಟೋರ್ಗಳಿಗೆ ಬೆಂಕಿ ಬಿದ್ದಿದ್ದರಿಂದ ದಟ್ಟ ಹೊಗೆ ಆವರಿಸಿ ಕಾರ್ಯಾಚರಣೆಗೆ ತೊಡಕಾಗಿತ್ತು.
ತಕ್ಷಣ ಅಕ್ಕಪಕ್ಕದ ಅಂಗಡಿ ಮಾಲೀಕರಿಗೆ ಕರೆ ಮಾಡಿ ಅಂಗಡಿಗಳನ್ನು ಖಾಲಿ ಮಾಡಲು ತಿಳಿಸಲಾಯಿತು. ಅನೇಕ ಅಂಗಡಿ ಮಾಲೀಕರು ಬಟ್ಟೆ, ಚಪ್ಪಲಿ, ಫ್ಯಾನ್ಸಿ ಸಾಮಾನುಗಳನ್ನು ಹೊರಹಾಕಲು ಪ್ರಯತ್ನಿಸಿದರು. ವಿಷಯ ತಿಳಿಯುತ್ತಿದ್ದಂತೆ ಶಾಸಕ ಎಸ್.ಎನ್.ಚನ್ನಬಸಪ್ಪ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು. ಇನ್ನು ಅನವಘಡಕ್ಕೆ ಕಾರಣವೇನೆಂದು ಪರಿಶೀಲಿಲಾಗುತ್ತಿದೆ.
Ad