ಶಿವಮೊಗ್ಗ: ತಪಾಸಣೆಗೆಂದು ವಾಹನವನ್ನು ನಿಲ್ಲಿಸಲು ಯತ್ನಿಸಿದ ಟ್ರಾಫಿಕ್ ಪೊಲೀಸ್ ಪೇದೆಯೊಬ್ಬರನ್ನು ಕಾರಿನ ಬಾನೆಟ್ ಮೇಲೆ ಎಳೆದೊಯ್ದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿ ಚಾಲಕನನ್ನು ಕೇಬಲ್ ಆಪರೇಟರ್ ಮಿಥುನ್ ಜಗದಾಳೆ ಎಂದು ಗುರುತಿಸಲಾಗಿದ್ದು, ಕಾರನ್ನು ಅತಿ ವೇಗದಲ್ಲಿ ಚಲಾಯಿಸಿದ್ದು, ನಜ್ಜುಗುಜ್ಜಾಗುವುದನ್ನು ತಪ್ಪಿಸಲು ಅಧಿಕಾರಿಯನ್ನು ಕಾರಿಗೆ ಅಂಟಿಕೊಳ್ಳುವಂತೆ ಒತ್ತಾಯಿಸಿದ್ದಾನೆ.
ಮಧ್ಯಾಹ್ನ 2 ಗಂಟೆ ಸುಮಾರಿಗೆ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಈ ಘಟನೆ ನಡೆದಿದೆ ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ವಾಡಿಕೆಯ ತಪಾಸಣೆ ನಡೆಸುವಾಗ, ಭದ್ರಾವತಿಯಿಂದ ಬರುತ್ತಿದ್ದ ಕಾರನ್ನು ನಿಲ್ಲಿಸುವಂತೆ ಅಧಿಕಾರಿಗಳು ಸಂಕೇತ ನೀಡಿದರು. ಬದಲಾಗಿ, ಚಾಲಕ ವೇಗವನ್ನು ಹೆಚ್ಚಿಸಿ, ಅಧಿಕಾರಿಯನ್ನು 100 ಮೀಟರ್ ಗಿಂತಲೂ ಹೆಚ್ಚು ದೂರ ಎಳೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ.
ಆರೋಪಿಯ ಹೆಸರು ಮಿಥುನ್ ಜಗದಾಳೆ, ಆತ ಕೇಬಲ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ. ಪೊಲೀಸರು ಆತನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ಶಿವಮೊಗ್ಗ ಎಸ್ಪಿ ತಿಳಿಸಿದ್ದಾರೆ.

