ಬೆಂಗಳೂರು: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಕರ್ನಾಟಕದಿಂದ ರಾಜ್ಯಸಭೆಗೆ ಕಳುಹಿಸಲು ಕೈಪಾಳಯದಲ್ಲಿ ಚಿಂತನೆ ನಡೆದಿದೆಯಂತೆ. ಹೀಗೊಂದು ಚರ್ಚೆ ರಾಜ್ಯ ರಾಜಕಾರಣದಲ್ಲಿ ಸಕತ್ ಸದ್ದು ಮಾಡುತ್ತಿದೆ.
ಅನಾರೋಗ್ಯ ಕಾರಣದಿಂದ ಸೋನಿಯಾ ಗಾಂಧಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ. ಹಾಗಾಗಿ ಕರ್ನಾಟಕದಿಂದಲೇ ರಾಜ್ಯಸಭೆಗೆ ಅವರನ್ನು ಕಳುಹಿಸಲು ರಾಜ್ಯ ನಾಯಕರು ಚರ್ಚೆ ಮಾಡಿದ್ದಾರೆ ಎಂಬುದು ಸದ್ಯದ ಬಿಸಿ ಸುದ್ದಿ.
ಜೊತೆಗೆ ರಾಹುಲ್ ಗಾಂಧಿ ಕೂಡ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ಸ್ಪರ್ಧೆ ಮಾಡಬೇಕು. ರಾಹುಲ್ ಗಾಂಧಿಯನ್ನು ಲೋಕಸಭೆಗೆ, ಸೋನಿಯಾ ಗಾಂಧಿಯನ್ನು ರಾಜ್ಯ ಸಭೆಗೆ ಕರ್ನಾಟಕದಿಂದ ಆರಿಸಿ ಕಳುಹಿಸಬೇಕು ಎಂಬ ಚರ್ಚೆ ಶುರುವಾಗಿದೆ ಎಂದು ವರದಿಯಾಗಿದೆ.