Categories: ಕರ್ನಾಟಕ

ಭಾಗಮಂಡಲ, ತಲಕಾವೇರಿಯಲ್ಲಿ ಉಡುಪಿಯ ಶಿರೂರು ಮಠದ ಯತಿಗಳಿಂದ ಮಳೆಗಾಗಿ ವಿಶೇಷ ಪೂಜೆ

ಕೊಡಗು: ಇಲ್ಲಿ ಸಮೃದ್ಧವಾಗಿ ಮಳೆ ಆರ್ಭಟವಾಗಲು ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀ ಪಾದಂಗಳವರು ವಾಮನ ತೀರ್ಥ ಸಂಸ್ಥಾನ ಶ್ರೀ ಶೀರೂರು ಮಠ ಉಡುಪಿ ಇವರು ನಿನ್ನೆಯಿಂದ ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ ಮಳೆಗಾಗಿ ವಿಶೇಷ ಪೂಜೆ ನೆರವೇರಿಸಲು ವಾಸ್ತವ್ಯ ಹೂಡಿದ್ದಾರೆ.

ಇಂದು ಬೆಳಿಗ್ಗೆ ತಲಕಾವೇರಿಯಲ್ಲಿ ವಿಶೇಷ ಪೂಜೆ ನೆರವೇರಿಸಿದ ನಂತರ ಭಾಗಮಂಡಲದಲ್ಲೂ ಕೂಡ ವಿಶೇಷ ಪ್ರಾರ್ಥನೆ ನೆರವೇರಿಸಿದ್ದರು. ರಾಜ್ಯ ಮುಜರಾಯಿ ಸಚಿವರನ್ನು ಭೇಟಿಯಾಗಿ ಅವರ ಸಮಾಕ್ಷಮದಲ್ಲಿ ಬೆಂಗಳೂರಿನಲ್ಲಿ ಪೂಜೆ ನೆರವೇರಿಸಿದ ನಂತರ ರಾಜರಾಜೇಶ್ವರ ದೇಗುಲದಿಂದ ಶ್ರೀರಂಗಪಟ್ಟಣಕ್ಕೆ ಆಗಮಿಸಿ ತ್ರಿವೇಣಿ ಸಂಗಮದಲ್ಲಿ ಮಿಂದು ಶ್ರೀರಂಗನಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ ನಂತರ ನಿನ್ನೆ ಭಾಗಮಂಡಲ ತಲಕಾವರಿಗೆ ಆಗಮಿಸಿ ಪೂಜೆ ನೆರವೇರಿಸಿ ವಾಸ್ತವ್ಯ ಹೂಡಿದ್ದಾರೆ.

ಯತಿಗಳು ಮಠದಲ್ಲಿ ಪೂಜೆ ನೆರವೇರಿಸುವ ಪಟ್ಟದ ದೇವರ ಮೂರ್ತಿಗಳ ಸಹಿತ ಆಗಮಿಸಿ ವಿಶೇಷ ಪೂಜೆಯನ್ನು ಮಳೆಗಾಗಿ ನೆರವೇರಿಸುತ್ತಿದ್ದಾರೆ. ನಾಳೆ ಬೆಳಿಗ್ಗೆ ಕಾವೇರಿ ವರುಣ ಪೂಜೆ, ವರುಣ ಜಪ, ನಾರಿಕೇಳ ಅಭಿಷೇಕ ಭಾಗಮಂಡಲದಲ್ಲಿ ನೆರವೇರಲಿದೆ. ಭಕ್ತಾದಿಗಳು ಎಳನೀರು ಸಹಿತ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮಳೆಗಾಗಿ ವಿಶೇಷ ಪೂಜೆಯಲ್ಲಿ ಭಾಗವಹಿಸುವಂತೆ ಕೋರಿಕೊಂಡಿದ್ದಾರೆ.

ಖಂಡಿತವಾಗಿಯೂ ಪೂಜೆ ನೆರವೇರಿಸಿದ ನಂತರ ಕೊಡಗಿನಲ್ಲಿ ಮಳೆ ಬೀಳಲಿದೆ ಎಂದು ಸ್ವಾಮೀಜಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಜೀವ ಜಲಕ್ಕೆ ವರುಣನ ಕೃಪೆಯಾಗಬೇಕು, ಕುಡಿಯುವ ನೀರಿಗೆ, ಕೃಷಿಗೆ ಮಳೆಯ ಮೂಲಕ ವರುಣನ ಆಗಮನವಾಗಬೇಕು. ಕೊಡಗಿನಲ್ಲಿ ಬೆಳೆಗಳು ಸಮೃದ್ಧವಾಗಬೇಕು ಎಲ್ಲರೂ ಸುಖಿಗಳಾಗಿ ಬದುಕಬೇಕು ಎಂಬ ಸಂಕಲ್ಪದೊಂದಿಗೆ ಈ ಪೂಜೆಯನ್ನು ನೆರವೇರಿಸಲಾಗುತ್ತಿದೆ ಎಂದು ಅವರು ಹೇಳಿದರು. ಇಂದಿನ ಪೂಜೆಯಲ್ಲಿ ಭಾಗಮಂಡಲ ಸುತ್ತಮುತ್ತಲಿನ ಭಕ್ತಾದಿಗಳು, ಪಾರುಪತ್ತೆಗಾರರಾದ ಪೊನ್ನಣ್ಣ, ಕ್ಷೇತ್ರ ಪುರೋಹಿತರಾದ ಹರೀಶ್ ಭಟ್ರು, ಮತ್ತಿತರು ಪಾಲ್ಗೊಂಡಿದ್ದರು. ಇಂದು ಸಂಜೆ ಕೂಡ ಜಪತಪ ನೆರವೇರಲಿದೆ.

Chaitra Kulal

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

50 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

1 hour ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

1 hour ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

2 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

2 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

2 hours ago