News Karnataka Kannada
Thursday, May 09 2024
ಕರ್ನಾಟಕ

ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್; ಸಚಿವ ಕೃಷ್ಣ ಭೈರೇಗೌಡ

Office
Photo Credit : News Kannada

ಬೆಂಗಳೂರು: ರಜಾದಿನ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲು ನಿರ್ಧಾರ ಮಾಡಲಾಗಿದೆ ಎಂದು ಕಂದಾಯ ಸಚಿವ  ಕೃಷ್ಣ ಭೈರೇಗೌಡ ಹೇಳಿದ್ದಾರೆ.

ಪ್ರತಿ ಜಿಲ್ಲೆಯಲ್ಲೂ ಭಾನುವಾರ ಒಂದೊಂದು ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್ ಮಾಡಲಾಗುವುದು. ಸದ್ಯ   ಕಾರ್ಪೋರೇಷನ್ ಇರುವ ವ್ಯಾಪ್ತಿಯ ಜಿಲ್ಲೆಗಳಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್‌ ಇದೆ. ಏಪ್ರಿಲ್ ನಂತರ ಮಹಾನಗರಗಳ ವ್ಯಾಪ್ತಿಯಲ್ಲೂ ಯೋಜನೆ ಜಾರಿ ಮಾಡುತ್ತೇವೆ. ಭಾನುವಾರ ಕೆಲಸ ಮಾಡಿದವರಿಗೆ ಮಂಗಳವಾರ ರಜೆ ನೀಡುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು.

ಇನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಇತರರ ಆಸ್ತಿಯನ್ನು ಕಬಳಿಕೆ ಮಾಡುವ ಪ್ರಕರಣಗಳನ್ನು ತಡೆಯಲು ಆಸ್ತಿಗಳ ನೋಂದಣಿಗೆ ಆಧಾರ್  ದೃಢೀಕರಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ನನ್ನ ಆಸ್ತಿ ಎಂಬ ಯೋಜನೆಯನ್ನ ನನ್ನ ಭೂಮಿ, ನನ್ನ ಗುರುತು ಎಂಬ ಶೀರ್ಷಿಕೆಯಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಆಸ್ತಿ ನೋಂದಣಿ ವೇಳೆ ಆಧಾರ್ ಪಡೆಯುವ ಸೇವೆ ಆರಂಭ ಮಾಡುತ್ತೇವೆ ಎಂದರು. ಕಡ್ಡಾಯ ಮಾಡುವುದಕ್ಕೆ ಆಗುವುದಿಲ್ಲ, ಆದರೆ ನೋಂದಣಿ ಮಾಡಬೇಕಾಗುತ್ತದೆ. ನೋಂದಣಿ ಸಮಯದಲ್ಲೂ ಆಧಾರ್ ನಂಬರ್ ಕೇಳುತ್ತೇವೆ. ಆಧಾರ್ ಜೋಡಣೆ ಮಾಡುವುದರಿಂದ ನಕಲು ತಡೆಯಬಹುದು. ಸುಪ್ರೀಂ ಕೋರ್ಟ್ ಪ್ರಕಾರ ಕಡ್ಡಾಯ ಮಾಡಲು‌ ಆಗುವುದಿಲ್ಲ. ಜಾಗರೂಕತೆಯಿಂದ ರಿಜಿಸ್ಟರ್ ಮಾಡಲು ಅನುಕೂಲ‌ ಆಗಲಿದೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು