ತುಮಕೂರು: ಮದುವೆ ಸಮಾರಂಭಕ್ಕೆ ಹೋಗಿದ್ದ ವೇಳೆ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿ ನಡೆದಿದೆ. ಹಲ್ಲೆ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ತುರುವೇಕೆರೆ ತಾಲೂಕಿನ ತಂಡಗ ಗ್ರಾಮ ಪಂಚಾಯತಿಯ ಸದಸ್ಯ ಮೋಹನ್ ಎಂಬಾತನ ಮೇಲೆ ಉಪಧ್ಯಾಕ್ಷ ಚನ್ನಬಸವೇಗೌಡನಿಂದ ಹಲ್ಲೆ ನಡೆಸಿದ್ದಾರೆ. ತಂಡಗ ಗ್ರಾಮ ಪಂಚಾಯತಿ ಅಧ್ಯಕ್ಷನ ಅವಿಶ್ವಾಸ ಮಂಡನೆಗೆ ಸಹಿ ಹಾಕಲು ಮೋಹನ್ ನಿರಾಕರಿಸಿದ್ದರು ಎನ್ನಲಾಗಿದೆ. ಹೀಗಾಗಿ ಸಹಿ ಹಾಕುವಂತೆ ಮೋಹನ್ಗೆ ಚನ್ನಬಸವೇಗೌಡ ಒತ್ತಾಯಿಸಿದ್ದರು.
ಸಹಿ ಹಾಕಲು ಒಪ್ಪದಿದ್ದಾಗ ಚನ್ನಬಸವೇಗೌಡ ಸಿಟ್ಟಿನಲ್ಲಿ ಮುಖಕ್ಕೆ ಹೊಡೆದು ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ಮದುವೆ ಸಮಾರಂಭಕ್ಕೆ ಹೋಗಿದ್ದ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಘಟನೆ ಸಂಬಂಧ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ad