Bengaluru 22°C
Ad

ಡಾ. ಧನಂಜಯ ನನ್ನ ಮನೆಗೆ ಬಂದಿದ್ದರು ಎನ್ನುವ ಸುಳ್ಳು ಹೇಳಿಕೆ ಶೋಭೆ ತರುವುದಿಲ್ಲ : ರಘುಪತಿ ತಿರುಗೇಟು

ಡಾ. ಧನಂಜಯ ನನ್ನ ಮನೆಗೆ ಬಂದಿದ್ದರು ಎನ್ನುವ ಸುಳ್ಳು ಹೇಳಿಕೆ ಶೋಭೆ ತರುವುದಿಲ್ಲ : ರಘುಪತಿ ತಿರುಗೇಟು

ಉಡುಪಿ: ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು “ನನ್ನ ಮನೆಗೆ ಬಂದಿದ್ದರು. ನಾನು ಮನೆಯ ಗೇಟಿನಲ್ಲಿ ಕಾಯಿಸಿ ವಾಪಾಸು ಕಳಿಸಿದೆ” ಎಂದು ಮಾಧ್ಯಮದಲ್ಲಿ ಹೇಳಿಕೆ ನೀಡಿದ್ದಾರೆ. ಅವರ ಈ ರೀತಿಯ ಸುಳ್ಳು ಹೇಳಿಕೆ ಅವರ ವ್ಯಕ್ತಿತ್ವವನ್ನು ತೋರಿಸುತ್ತದೆ ಎಂದು ರಘುಪತಿ ಭಟ್ ತಿರುಗೇಟು ನೀಡಿದ್ದಾರೆ.

ಮನೆಗೆ ಬಂದವರನ್ನು ಉಪಚರಿಸಿ ಕಳುಹಿಸುವ ಸಂಸ್ಕೃತಿ ನಮ್ಮದು. ನನ್ನ ಮನೆಯ ಬಗ್ಗೆ ದಶಕಗಳಿಂದ ಉಡುಪಿಯ ಜನತೆಗೆ ಗೊತ್ತಿದೆ. ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವ ನಿರ್ಧಾರ ಕೈಗೊಂಡಾಗ ಜಿಲ್ಲೆಯ ಶಾಸಕರು, ಬಿಜೆಪಿ ನಾಯಕರು ನನ್ನ ಮನೆಗೆ ಬಂದಿದ್ದಾರೆ. ಎಲ್ಲರಲ್ಲೂ ಗೌರವದಿಂದ ಮಾತನಾಡಿ ನನ್ನ ನಿರ್ಧಾರ ತಿಳಿಸಿದ್ದೆ. ಯಾರಿಗೂ ಅಗೌರವ ತೋರಿಸಿಲ್ಲ. ಇದು ಎಲ್ಲರಿಗೂ ತಿಳಿದ ವಿಚಾರವೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪ್ರಭಾರಿಯಾಗಿದ್ದಾಗ ಡಾll ಧನಂಜಯ ಸರ್ಜಿ ಅವರು ಶಿವಮೊಗ್ಗ ಗ್ರಾಮಾಂತರ ಪ್ರಭಾರಿಯಾಗಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರವಾಗಿ ಒಟ್ಟಿಗೆ ಕೆಲಸ ಮಾಡಿದ್ದೇವೆ. ಅವರ ಮೇಲೆ ನನಗೆ ಗೌರವ ಇದೆ. ಈ ರೀತಿಯ ಸುಳ್ಳು ಹೇಳುವ, ಜನರ ದಿಕ್ಕು ತಪ್ಪಿಸುವ ಹೇಳಿಕೆ ಸರಿಯಲ್ಲ ಎಂದು ಹೇಳಿದ್ದಾರೆ.

Ad
Ad
Nk Channel Final 21 09 2023
Ad