ಮಲ್ಪೆ: ಮಳೆಗಾಲದಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧವಿದ್ದು, ಪ್ರಸ್ತುತ ನಾಡದೋಣಿ ಮೀನುಗಾರಿಕೆಗೆ ಮಾತ್ರ ಅವಕಾಶ. ಆದ್ದರಿಂದ ಕರಾವಳಿಯ ಬೇಡಿಕೆ ಈಡೇರಿಸಲು ಒಡಿಶಾ, ತಮಿಳುನಾಡು, ಆಂಧ್ರ ಪ್ರದೇಶದ ಮೀನುಗಳು ಬರುತ್ತಿದ್ದು, ಅದಕ್ಕೆ ಭಾರೀ ಬೇಡಿಕೆಯೂ ಇದೆ. ಪ್ರತಿನಿತ್ಯ ಸುಮಾರು 15 ವಾಹನಗಳ ಮೂಲಕ ಟನ್ಗಟ್ಟಲೆ ಮೀನು ಮಲ್ಪೆ ಮಾರುಕಟ್ಟೆಗೆ ಆವಕವಾಗುತ್ತಿದೆ.
ಗುಜರಾತ್, ಕರ್ನಾಟಕ, ಗೋವಾ, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಒಂದೇ ಅವಧಿಯಲ್ಲಿ ಮೀನುಗಾರಿಕೆ ನಿಷೇಧವಿದೆ. ಆದರೆ ಈ ಸಮಯದಲ್ಲಿ ಒಡಿಶಾ, ಆಂಧ್ರ, ತಮಿಳುನಾಡು ವ್ಯಾಪ್ತಿಯಲ್ಲಿ ನಿಷೇಧವಿರುವುದಿಲ್ಲ. ಕರ್ನಾಟಕ ವ್ಯಾಪ್ತಿಯಲ್ಲಿ ಮೀನುಗಾರಿಕೆ ಆರಂಭದ ಸಮಯದಲ್ಲಿ ಅಲ್ಲಿ ನಿಷೇಧವಿರುತ್ತದೆ.
ಒಡಿಶಾದಿಂದ ಬೊಳಂಜೀರ್, ಬೂತಾಯಿ ಮತ್ತು ಸಣ್ಣ ಗಾತ್ರದ ಬಂಗುಡೆ, ಆಂಧ್ರಪ್ರದೇಶದಿಂದ ಬೂತಾಯಿ ಮತ್ತು ಸಣ್ಣ ಬಂಗುಡೆ, ತಮಿಳುನಾಡಿನಿಂದ ಅಲ್ಪ ಪ್ರಮಾಣ ದಲ್ಲಿ ಬೂತಾಯಿ ಮೀನನ್ನು ತರಿಸಲಾ ಗುತ್ತದೆ. ಪ್ರಸ್ತುತ ತೂಫಾನ್ ಅಗದೇ ಮೀನು ಸಿಗುವುದು ಕಡಿಮೆ. ಅಲ್ಪ ಪ್ರಮಾಣದಲ್ಲಿ ಸಿಗಡಿ ದೊರೆಯುತ್ತಿದೆ ಎಂದು ವ್ಯಾಪಾರಸ್ಥರು ತಿಳಿಸುತ್ತಾರೆ. ಮಳೆಗಾಲದಲ್ಲೂ ನಿತ್ಯ ಲಕ್ಷಾಂತರ ರೂ. ವ್ಯವಹಾರ ನಡೆಯುತ್ತದೆ.

