Bengaluru 19°C

ರಾಷ್ಟ್ರೀಯ ಯುವ ಪ್ರತಿಭೆಗಳ ಅಧಿವೇಶನ: ವಿಶೇಷ ಆಹ್ವಾನಿತ ಯೂತ್ ಐಕಾನ್ ಆಗಿ ಮನು ಶೆಟ್ಟಿ ಆಯ್ಕೆ

ಕೇಂದ್ರ ಸರಕಾರದ ಯುವಜನ ಮತ್ತು ಕ್ರೀಡಾ ಇಲಾಖೆ ವತಿಯಿಂದ ದೆಹಲಿಯ ಭಾರತ್ ಮಂಡಪಂನಲ್ಲಿ ನಡೆಯಲಿರುವ ಎರಡು ದಿನಗಳ ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ಅಧಿವೇಶನ

ಉಡುಪಿ: ಕೇಂದ್ರ ಸರಕಾರದ ಯುವಜನ ಮತ್ತು ಕ್ರೀಡಾ ಇಲಾಖೆ ವತಿಯಿಂದ ದೆಹಲಿಯ ಭಾರತ್ ಮಂಡಪಂನಲ್ಲಿ ನಡೆಯಲಿರುವ ಎರಡು ದಿನಗಳ ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ಅಧಿವೇಶನದಲ್ಲಿ ಭಾಗವಹಿಸಲು ಕರ್ನಾಟಕದಿಂದ “ವಿಶೇಷ ಆಹ್ವಾನಿತ ಯೂತ್ ಐಕಾನ್” ಆಗಿ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಮನು ಶೆಟ್ಟಿ ಆಯ್ಕೆಯಾಗಿದ್ದಾರೆ. ಇವರು ಉದ್ಯಮಿ ಇನ್ನಾ ಉದಯ ಶೆಟ್ಟಿ ಮತ್ತು ಜಿಪಂ ಮಾಜಿ ಸದಸ್ಯೆ ರೇಶ್ಮಾ ಉದಯ ಶೆಟ್ಟಿ ಅವರ ಪುತ್ರಿಯಾಗಿದ್ದಾರೆ.


ವಿಕಸಿತ ಭಾರತದ ನಿರ್ಮಾಣದಲ್ಲಿ ಯುವ ಜನರ ಭಾಗವಹಿಸುವಿಕೆಯನ್ನು ಖಾತ್ರಿಗೊಳಿಸಲು ರಾಷ್ಟ್ರೀಯ ಮಟ್ಟದ ಯುವ ಪ್ರತಿಭೆಗಳ 2 ದಿನದ ಅಧಿವೇಶನ ದೆಹಲಿಯಲ್ಲಿ ಜನವರಿ 11, ಮತ್ತು 12 ರಂದು ನಡೆಯಲಿದ್ದು ಭಾರತಾದ್ಯಂತದ 3 ಸಾವಿರ ಯುವಕ ಯುವತಿಯರು ಆಯ್ಕೆಯಾಗಿದ್ದಾರೆ.


ದೇಶದ ಅಭಿವೃದ್ದಿಗೆ ಸಂಬಂಧಿಸಿದಂತೆ ವಿಕಸಿತ ಭಾರತದ ವಿವಿಧ ಕ್ಷೇತ್ರಗಳ ವಿಷಯಗಳ ಬಗ್ಗೆ ಚರ್ಚೆ, ವಿಚಾರ ಮಂಡನೆ ಮತ್ತು ಸಂವಾದಗಳು ನಡೆಯಲಿದ್ದು ಆಹ್ವಾನಿತರು ತಮ್ಮ ವಿಚಾರಗಳನ್ನು ಪ್ರಸ್ತುತ ಪಡಿಸಲಿದ್ದಾರೆ. ವಿವಿಧ ಇಲಾಖೆಗಳ ಪ್ರದರ್ಶನಗಳು ಇರಲಿವೆ. ಪ್ರಧಾನಿ ನರೇಂದ್ರ ಮೋದಿಯೂ ಸೇರಿದಂತೆ ಕೇಂದ್ರ ದ ವಿವಿಧ ಇಲಾಖಾ ಮಂತ್ರಿಗಳು, ಅಧಿಕಾರಿಗಳು, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಪರಿಣಿತರೊಂದಿಗೆ ಸಂವಾದ ನಡೆಯಲಿದೆ.


ಮನು ಶೆಟ್ಟಿ ಅವರು ಉಡುಪಿ ಎಂಜಿಎಂ ಕಾಲೇಜಿನ ಪ್ರಥಮ ಬಿ.ಎ ವಿದ್ಯಾರ್ಥಿನಿಯಾಗಿದ್ದು , ವಿದ್ಯಾರ್ಥಿ ಸಂಘಟನೆ ಎಬಿವಿಪಿ ಹಾಗೂ ಅಂತರಾಷ್ಟ್ರೀಯ ಸಂಸ್ಥೆ ಜೆಸಿಐ ಪಡುಬಿದ್ರಿಯ ಸಕ್ರೀಯ ಸದಸ್ಯೆಯಾಗಿದ್ದಾರೆ.


Nk Channel Final 21 09 2023