ಉಡುಪಿ: ಪಂಚಾಯತ್ ಉಪಾಧ್ಯಕ್ಷ ಅಧಿಕಾರ ಸ್ವೀಕರಿಸುವ ವೇಳೆ ಕಚೇರಿಯಲ್ಲಿ ಮುಸ್ಲಿಂ ಮೌಲ್ವಿ ಯಿಂದ ಪ್ರಾರ್ಥನೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಹಿಂದು ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ.

ಕಾಂಗ್ರೆಸ್ -ಎಸ್ ಡಿ ಪಿ ಐ ಅಧಿಕಾರ ಹಂಚಿಕೆ ವೇಳೆ ವಿವಾದಾತ್ಮಕ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಂ ಪಂಚಾಯತ್ ನಲ್ಲಿ ನಡೆದಿದೆ. ಗ್ರಾಮ ಪಂಚಾಯತ್ ಕಚೇರಿಯಲ್ಲಿ ಮುಸ್ಲಿಂ ಮೌಲ್ವಿ ದುವಾ ವನ್ನು ಎಸ್ ಡಿ ಪಿ ಐ ಮುಖಂಡರು ಮಾಡಿಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ ಜಾರಿದೆ.

ಕಾಂಗ್ರೆಸ್ -ಎಸ್ ಡಿ ಪಿ ಐ ಮೈತ್ರಿ ಆಧಾರದಲ್ಲಿ ಅಧಿಕಾರ ಹಂಚಿಕೆ ಯಾಗಿದ್ದು, ಕಾಂಗ್ರೆಸ್ ಸದಸ್ಯೆ ಜಯಂತಿ ಖಾರ್ವಿ ಎಂಬುವವರಿಗೆ ಅಧ್ಯಕ್ಷ ಸ್ಥಾನ ಸಿಕ್ಕಿದೆ. ಎಸ್ ಡಿ ಪಿ ಐ ಬೆಂಬಲಿತ ಸದಸ್ಯ ತಬ್ರೇಜ್ ಎಂಬಾತನಿಗೆ ಉಪಾಧ್ಯಕ್ಷ ಸ್ಥಾನ, ಉಪಾಧ್ಯಕ್ಷನ ಅಧಿಕಾರ ಸ್ವೀಕಾರ ವೇಳೆ ಮೌಲ್ವಿ ಕರೆಸಿ ಪ್ರಾರ್ಥನೆ ನಡೆಸಲಾಗಿದೆ. ಉಪಾಧ್ಯಕ್ಷ ತಬ್ರೇಜ್ ಕಚೇರಿಯಲ್ಲೇ ಪ್ರಾರ್ಥನೆ ನಡೆದಿದ್ದು, ದುವಾ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಗ್ರಾಮ ಪಂಚಾಯತ್ ಕಚೇರಿಯಲ್ಲಿ ಧಾರ್ಮಿಕ ಚಟುವಟಿಕೆ ನಡೆಸಿದ ಹಿನ್ನಲೆ ಆಕ್ರೋಶ ವ್ಯಕ್ತವಾಗಿದೆ.