ನವಲಗುಂದ : ನವಲಗುಂದ ವಿಧಾನಸಭಾ ಕ್ಷೇತ್ರದ ಸುಕ್ಷೇತ್ರ ಯಮನೂರ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮದ ಆರಾಧ್ಯ ದೈವರಾದ ಶ್ರೀ ಚಾಂಗದೇವ ಉರ್ಘ ರಾಜಾಬಾಗಸವಾರ ಜಾತ್ರಾ ಮಹೋತ್ಸವ ಹಾಗೂ ಪವಿತ್ರ ಗಂಧಾಭಿಷೇಕ ಕಾರ್ಯಕ್ರಮದಲ್ಲಿ ಶಾಸಕ ಕೋನರಡ್ಡಿ ಭಾಗವಹಿಸಿ, ದೇವರ ದರ್ಶನ ಪಡೆದು ಆಶೀರ್ವಾದ ಪಡೆದುಕೊಂಡರು.
ಈ ಸಂದರ್ಭದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿನೋದ್ ಅಸೂಟಿ ಅವರು ಉಪಸ್ಥಿತರಿದ್ದರು.