ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.
ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.

