Showing 20 of 92 posts • Page 1 of 5
ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ.
ಎರಡು ದಿನಗಳಿಂದ ಆನೆಯೊಂದು ಕೆಸರು ನೀರಿನಲ್ಲಿ ಸಿಲುಕಿರುವ ಘಟನೆ ಕೊಡಗು ಜಿಲ್ಲೆ ದೇವಪುರದ ಕನ್ನಬಾಡಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ರಾಜ್ಯದ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಇಂದು ಬೆಳಗ್ಗೆ ಕಾಡಾನೆ ತುಳಿತಕ್ಕೆ ನಿವೃತ್ತ ಐಜಿಪಿ ಪತ್ನಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಪೋನ್ನಂಪೇಟೆ ತಾಲ್ಲೂಕಿನ ತಿತಿಮತಿ ಗ್ರಾಮ ಪಂಚಾಯತಿ ಸಮೀಪದ ಕೊಣ್ಣನಕಟ್ಟೆ ಗ್ರಾಮದಲ್ಲಿ ನಡೆದಿದೆ.
ಅಕ್ರಮವಾಗಿ ಬೀಟೆ ಮರದ ದಿಮ್ಮಿಗಳನ್ನು ಸಾಗಣೆ ಮಾಡುತ್ತಿದ್ದ ಜಾಲವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭೇದಿಸಿರುವ ಘಟನೆ ಕೊಡಗು ಜಿಲ್ಲೆಯ ವೀರಾಜಪೇಟೆ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ದುಬಾರೆ ಸಾಕಾನೆ ಶಿಬಿರದಲ್ಲಿ ಕಂಜನ್ ಮತ್ತು ಮಾರ್ತಾಂಡ ಆನೆಗಳ ನಡುವೆ ಸೋಮವಾರ ನಡೆದ ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದೆ.
ಸಾಕಾನೆಗಳ ಕಾದಾಟದಲ್ಲಿ ಪ್ರವಾಸಿ ಮಹಿಳೆಯೊಬ್ಬಳು ಸಾವಿಗೀಡಾದ ದುರ್ಘಟನೆ ಕುಶಾಲನಗರ ತಾಲೂಕಿನ ದುಬಾರೆ ಶಿಬಿರದಲ್ಲಿ ನಡೆದಿದೆ.
ಟ್ರೆಕ್ಕಿಂಗ್ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ 4 ದಿನದ ಬಳಿಕ ಪತ್ತೆಯಾಗಿದ್ದಾರೆ ಮಗಳನ್ನು ಕಂಡು ತಂದೆ ಭಾವುಕರಾಗಿದ್ದಾರೆ. ಕಳೆದ ಗುರುವಾರ ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದರು.
ಕಳೆದ ಗುರುವಾರ ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಯುವತಿ ಕೊನೆಗೂ ಪತ್ತೆ ಆಗಿದ್ದಾರೆ.
ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಗುರುವಾರ ಟ್ರೆಕ್ಕಿಂಗ್ಗೆ ತೆರಳಿದ್ದ ಕೇರಳದ ಮಹಿಳೆ ಶರಣ್ಯ (36) ನಾಪತ್ತೆ ಪ್ರಕರಣ ಸಂಬಂಧ 4ನೇ ದಿನವೂ ಶೋಧ ಕಾರ್ಯ ಮುಂದುವರಿದಿದೆ.
ಹಾಡಹಗಲೇ ಕಾಡಾನೆ ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಾಳೆಗುಂಡಿ ಗಿರಿಜನ ಹಾಡಿಯಲ್ಲಿ ನಡೆದಿದೆ.
ಕೋವಿಯಿಂದ ಗುಂಡು ಸಿಡಿದು ಯುವಕನೋರ್ವ ಮೃತಪಟ್ಟ ಘಟನೆ ಸೋಮವಾರಪೇಟೆ ಸಮೀಪದ ದೊಡ್ಡ ಕೊಡ್ಲಿ ಗ್ರಾಮದಲ್ಲಿ ನಡೆದಿದ್ದು ಹಲವು ಸಂಶಯ ಮೂಡಿದೆ.
ನ್ಯಾಯ ಒದಗಿಸುದರಲ್ಲಿ ಕರ್ನಾಟಕ ಪೊಲೀಸರು ದೇಶದಲ್ಲೇ ನಂ.1 ಸ್ಥಾನದಲ್ಲಿದ್ದಾರೆ ಎಂದು ಗೃಹಸಚಿವ ಜಿ. ಪರಮೇಶ್ವರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಕೊಡಗಿನಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಹೊಸ ವರ್ಷಚರಣೆಗೆ ಪೊಲೀಸರಿಂದ ಮಾರ್ಗಸೂಚಿ ಬಿಡುಗಡೆಯಾಗಿದೆ.
ನ್ಯೂ ಇಯರ್ ಸಂಭ್ರಮಕ್ಕೆ ಕೊಡಗು ಜಿಲ್ಲೆ ಸಜ್ಜಾಗಿದ್ದು, ಹೊಸ ವರ್ಷಕ್ಕೆ ಕೊಡಗು ಜಿಲ್ಲೆಗೆ ಪ್ರವಾಸಿಗರು ಲಗ್ಗೆ ಇಟ್ಟಿದ್ದಾರೆ. ಕೊಡಗಿನ ಪ್ರವಾಸಿ ತಾಣಗಳಲ್ಲಿ ರಶ್ ಆಗಿದೆ.
ಉರುಳಿಗೆ ಸಿಲುಕಿ ಹುಲಿಯೊಂದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಡಗಿನ ಶ್ರೀಮಂಗಳ ಗ್ರಾಮದಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದ ಚಟ್ಟಳ್ಳಿ ಬಳಿಯ ಶ್ರೀಮಂಗಳ ತೋಟದ ಬೇಲಿಗೆ ದುಷ್ಕರ್ಮಿಗಳು ಉರುಳು ಹಾಕಿದ್ದರು.
ನಡುರಸ್ತೆಯಲ್ಲೇ ಪ್ರವಾಸಿ ಬಸ್ ಹೊತ್ತಿ ಉರಿದ ಘಟನೆ ಮಾಕುಟ್ಟ ರಸ್ತೆಯ ಮಗಡಿ ಪಾರೆ ಆಂಜನೇಯ ದೇವಾಲಯ ಸಮೀಪ ನಡೆದಿದೆ. ಬಸ್ ವಿರಾಜಪೇಟೆಯಿಂದ ಕೇರಳ ರಾಜ್ಯಕ್ಕೆ ತೆರಳುತ್ತಿತ್ತು.
ಮಡಿಕೇರಿಯಲ್ಲಿ ಹನಿ ಟ್ರ್ಯಾಪ್ ಶಂಕೆ ವ್ಯಕ್ತವಾಗಿದೆ. ಯುವಕರಿಂದ ಏಟು ತಿಂದು ಎಸ್ಕೇಪ್ ಆಗಿ ಠಾಣೆಗೆ ಯುವಕ ಓಡಿ ಬಂದಿದ್ದಾನೆ. ಮನೆಯೊಂದರಲ್ಲಿ ರಾತ್ರಿಯಿಡೀ ಯುವಕರು ಥಳಿಸಿರುವ ಘಟನೆ ಮಡಿಕೇರಿಯ ಮಂಗಳಾದೇವಿ ನಗರದಲ್ಲಿ ನಡೆದಿದೆ.
ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ ಎರಡು ವರ್ಷದ ಮಗು ಪತ್ತೆಯಾಗಿರುವ ಘಟನೆ ವೀರಾಜಪೇಟೆ ತಾಲೂಕಿನ ಕೊಂಗಣ ಗ್ರಾಮದಲ್ಲಿ ನಡೆದಿದೆ.
ಕೊಡಗಿನ ಮಡಿಕೇರಿಯವರಾಗಿರುವ ಚಿತ್ರ ಶಿಲ್ಪ ಕಲಾವಿದ ಹಾಗೂ ಕ್ರಿಯಾತ್ಮಕ ಕಲಾನಿರ್ದೇಶಕರಾಗಿರುವ ಬಿ.ಕೆ.ಗಣೇಶ್ ರೈ ಯವರು ತಮ್ಮ ಚಿತ್ರ ಶಿಲ್ಪ ಕಲಾ ವೃತ್ತಿಯನ್ನು 1974ರಲ್ಲಿ ಪ್ರಾರಂಭಿಸಿ,