Showing 20 of 151 posts • Page 1 of 8
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಟುಂಬವೊಂದರ ಮೇಲೆ ಪುಂಡರ ಗುಂಪೊಂದು ಮನಸ್ಸೋ ಇಚ್ಛೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜುಲೈ 5ರ ರಾತ್ರಿ ನಡೆದಿದೆ.
ಜಮೀನಿನಲ್ಲಿ ಅಳವಡಿಸಲಾದ ಬೋರ್ ವೆಲ್ ಹಾಗೂ ಪಂಪ್ ಸೆಟ್ ಗಳ ಕೇಬಲ್ ಕಳವು ಮಾಡುತ್ತಿದ್ದ ಖದೀಮರು ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಘಟನೆ ಮಂಡ್ಯ ಜಿಲ್ಲೆ ಉಪ್ಪರಕನಹಳ್ಳಿ ಗ್ರಾಮದಲ್ಲಿ ನಡೆದಿದೆ.ಕಳ್ಳರನ್ನ ಕಂಬಕ್ಕೆ ಕಟ್ಟಿಹಾಕಿದ ಗ್ರಾಮಸ್ಥರು ಥಳಿಸಿದ್ದಾರೆ.
ಮೈಕ್ರೋ ಫೈನಾನ್ಸ್ ಕಿರುಕುಳದಿಂದ ವಿಷ ಸೇವಿಸಿ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ. ಮೈಕ್ರೋ ಫೈನಾನ್ಸ್ ಕಚೇರಿ ಮುಂದೆಯೇ ಶವವಿಟ್ಟು ಪ್ರತಿಭಟನೆ ನಡೆಸಲಾಯಿತು.
ನೆನ್ನೆ ಮಳವಳ್ಳಿ ತಾಲೂಕಿನ ಮುತತ್ತಿ ಬಳಿಯ ಕಾವೇರಿ ನದಿಯಲ್ಲಿ ಘೋರ ದುರಂತ ಸಂಭವಿಸಿದೆ.
ಮೇಲುಕೋಟೆ ಯೋಗಾನರಸಿಂಹಸ್ವಾಮಿ ದೇಗುಲದ ಹುಂಡಿ ಹಣ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಅರ್ಚಕ ಸೇರಿದಂತೆ 6 ಮಂದಿಯನ್ನ ಅಮಾನತುಗೊಳಿಸಲಾಗಿದೆ.
ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಆರ್ ಐ ಬಿದ್ದಿದ್ದಾರೆ.
ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಡ್ಯ ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಪ್ರಕರಣ ಮಂಡ್ಯದ ನೆಹರು ನಗರದಲ್ಲಿ ನಡೆದಿದೆ.ಮನೆಯಲ್ಲಿ ತಾಯಿ ಹಾಗೂ ಮಗ ಮೃತದೇಹ ಪತ್ತೆಯಾಗಿದೆ.ಬಟ್ಟೆ ಅಂಗಡಿಯಲ್ಲಿ ತಂದೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ಯೆಯಾಗಿದ್ದಾರೆ.
ಪತ್ನಿ, ಮಗನನ್ನು ಉಸಿರುಗಟ್ಟಿಸಿ ಕೊಂದು ಗಂಡನು ನೇಣಿಗೆ ಶರಣಾದ ಘಟನೆ ಇಲ್ಲಿನ ನೆಹರು ನಗರದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಒಂದೇ ಕುಟುಂಬದ ಮೂವರು ಸಾವು ಪ್ರಕರಣ ಆತಂಕಕ್ಕೆ ಕಾರಣವಾಗಿದೆ.
: ಗೇಟ್ ಹಾರಿ ಮನೆ ಆವರಣಕ್ಕೆ ಚಿರತೆ ಪ್ರವೇಶಿಸಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ಜರುಗಿದೆ.
ಸ್ನೇಹಿತರೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವಕನೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆಗೈದ ಘಟನೆ ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಮಂಡ್ಯ ಜಿಲ್ಲೆಯಲ್ಲಿ ಭ್ರೂಣ ಹತ್ಯೆ ಹಾಗೂ ಪತ್ತೆ ಪ್ರಕರಣ ವರದಿಯಾದ ಹಿನ್ನೆಲೆ ಪಾಂಡವಪುರ ತಾಲ್ಲೂಕು ಆಡಳಿತ ಎಚ್ಚೆತ್ತಿದೆ.ತಾಲ್ಲೂಕು ಖಾಸಗೀ ಆಸ್ಪತ್ರೆಗಳು ಹಾಗೂ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರವಾಸಿ ತಾಣ ಮೇಲುಕೋಟೆಯಲ್ಲಿ ಭಾರೀ ಗಾತ್ರದ ಚಿರತೆ ಸೆರೆಯಾಗಿದೆ. ಜಾನುವಾರುಗಳನ್ನು ತಿಂದು ಉಪಟಳ ನೀಡ್ತಿದ್ದ ಚಿರತೆ ಕಡೆಗೂ ಸಿಕ್ಕಿದೆ. ಮೇಲುಕೋಟೆ ಚಲುವನಾರಾಯಸ್ವಾಮಿ ದೇಗುಲದ ಸಮೀಪವೇ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ.
ಭ್ರೂಣಲಿಂಗ ಪತ್ತೆ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರು ಜೈಲು ಪಾಲಾದ ಘಟನೆ ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.
ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರುಪಾಲಾದ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಲಿಂಗಾಪುರ ಕೆರೆಯಲ್ಲಿ ನಡೆದಿದೆ.
ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಸುಮಾರು 2 ಎಕರೆಯಲ್ಲಿ ಬೆಳೆದಿದ್ದ ಬಾಳೆ ನಾಶವಾದ ಘಟನೆ ಮಂಡ್ಯದ ಮದ್ದೂರು ತಾಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಶಾಲಾ ಬಸ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಅಡಿಗಾಸ್ ಹೋಟೆಲ್ ಬಳಿ ನಡೆದಿದೆ. ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಭೂತನಹೊಸೂರು ಗ್ರಾಮದ ರೈತರ ಜಮೀನೊಂದರಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿವೆ. ತಾಯಿ ಚಿರತೆ ನಾಪತ್ತೆಯಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ.ಕಳೆದ ಒಂದು ವಾರದಿಂದ ಗ್ರಾಮದಲ್ಲಿ 2 ಕುರಿ ಚಿರತೆಗೆ ಬಲಿಯಾಗಿವೆ.
ಮಂಡ್ಯದಲ್ಲಿ ನಡೆದ ಅರ್ಚಕನ ನಿಗೂಢ ಕೊಲೆ ಪ್ರಕರಣವನ್ನ ಶ್ರೀರಂಗಪಟ್ಟಣ ಠಾಣಾ ಪೊಲೀಸರು ಭೇದಿಸಿದ್ದಾರೆ. ಪತ್ನಿಯ ಅನೈತಿಕ ಸಂಬಂಧವೇ ಅರ್ಚಕನ ಕೊಲೆಗೆ ಕಾರಣವಾಗಿದೆ. ಪ್ರಿಯಕರನ ಮೂಲಕ ಪತಿ ಅರ್ಚಕನನ್ನು ಪತ್ನಿ ಹತ್ಯೆ ಮಾಡಿಸಿದ್ದಾರೆ.