ಮದ್ದೂರು: ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಸುಮಾರು 2 ಎಕರೆಯಲ್ಲಿ ಬೆಳೆದಿದ್ದ ಬಾಳೆ ನಾಶವಾದ ಘಟನೆ ಮಂಡ್ಯದ ಮದ್ದೂರು ತಾಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ವಿನಯ್ ಎಂಬುವರಿಗೆ ಸೇರಿದ 2 ಎಕರೆ ಬಾಳೆ ಬೆಳೆ ನಾಶವಾಗಿದೆ. ಘಟನೆಯಿಂದ 2 ಲಕ್ಷ ರೂ.ಗೂ ಅಧಿಕ ಬಾಳೆ ನಾಶವಾಗಿದ್ದು ಪರಿಹಾರಕ್ಕೆ ಒತ್ತಾಯಿಸಿದ್ದಾರೆ.

ಕಳೆದ 15 ದಿನಗಳ ಹಿಂದೆ ಇದೇ ರೀತಿ ಬಿರುಗಾಳಿಗೆ ಸುಮಾರು 50 ಬಾಳೆ ಗಿಡಗಳು ಹುರುಳಿ ಒಂದು ಲಕ್ಷ ನಷ್ಟವಾಗಿತ್ತು.ಇದೀಗ ಬಾಳೆ ಬೆಳೆ ಕಳೆದುಕೊಂಡ ರೈತ ಕಂಗಾಲಾಗಿದ್ದಾರೆ.

View this post on Instagram

A post shared by News Karnataka (@newskarnataka)