Showing 20 of 4103 posts • Page 1 of 206
7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 13ಕ್ಕಿಂತ ಹೆಚ್ಚಿನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಾರಂಟ್ ಆರೋಪಿಯನ್ನ ಮಂಗಳೂರು ದಕ್ಷಿಣ ಉಪವಿಭಾಗದ ಪೊಲೀಸರು ಆಗಸ್ಟ್ 2 ರಂದು ಬಂಧಿಸಿದ್ದಾರೆ.
ನೆಲ್ಯಾಡಿ ಸಮೀಪದ ರೇಖ್ಯಾ ಗ್ರಾಮದ ನೆಲ್ಯಡ್ಕ–ಇಡ್ಮಾಳ್ ನಿವಾಸಿ ಬಾಲಕೃಷ್ಣ ಗೌಡ ಅವರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ, ಮೃತರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ ₹5 ಲಕ್ಷ ಮೊತ್ತದ ತುರ್ತು ಪರಿಹಾರ ಚೆಕ್ ಹಸ್ತಾಂತರಿಸಲಾಗಿದೆ.
ಜಿಒಎಸ್ ಆಫ್ ( ಗ್ರೂಪ್ ಆಪರೇಟೆಡ್ ಸ್ವಿಚ್ ಮಾಡದೆ ವಿದ್ಯುತ್ ಟ್ರಾನ್ಸ್ ಫಾರ್ಮರ್ (ಟಿಸಿ) ಏರಿದ ಮೆಸ್ಕಾಂ ಲೈನ್ ಮೆನ್ ಓರ್ವ ವಿದ್ಯುತ್ ಆಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ನಯಾಪಟ್ಟಣ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
ತಮ್ಮ ಮನೆಯ ಸಮೀಪದ ತೋಡಿನಲ್ಲಿ ಶನಿವಾರ ರಾತ್ರಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ನಿರಂತರ ಶೋಧ ಕಾರ್ಯಾಚರಣೆಯ ಬಳಿಕ ಅರಳ ಗ್ರಾಮದ ಪಂಬದಗದ್ದೆ ಸಮೀಪ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.
ಕರ್ನಾಟಕದಾದ್ಯಂತ ಗುಣಮಟ್ಟದ ಬ್ಯಾಂಕಿಂಗ್ ಸೇವೆಗಳನ್ನು ವಿಸ್ತರಿಸುವ ತನ್ನ ಬದ್ಧತೆಯನ್ನು ಮತ್ತಷ್ಟು ಬಲಪಡಿಸುತ್ತಾ ಎಂಸಿಸಿ ಬ್ಯಾಂಕ್ ನ 23ನೇ ಶಾಖೆಯು ಕಟಪಾಡಿಯಲ್ಲಿ ಭಾನುವಾರ, ಆಗಸ್ಟ್ 2, 2026ರಂದು ಉದ್ಘಾಟನೆಗೊಂಡಿತು.
ಕಾಂಗ್ರೆಸ್ ಪಕ್ಷದಲ್ಲಿ ಜನಸೇವೆ ಮಾಡಿದವರಿಗೆ ಮನ್ನಣೆ ಸಿಗುತ್ತದೆ.
ರಾಯಿ ಗ್ರಾಮದ ಪಾಂಚಕೋಡಿ ಎಂಬಲ್ಲಿ ಧಾರಾಕಾರ ಮಳೆಯ ನಡುವೆ ಕಾಲುಸಂಕ ದಾಟುತ್ತಿದ್ದ ವ್ಯಕ್ತಿಯೊಬ್ಬರು ಹರಡುತ್ತಿರುವ ತೋಡಿಗೆ ಬಿದ್ದು ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದ್ದು, ಅವರ ಪತ್ತೆಗಾಗಿ ಎನ್ಡಿಆರ್ಎಫ್ (NDRF) ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭಾನುವಾರ ದಿನವಿಡೀ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಬೆಳಗಿನಿಂದ ಮಳೆ ಸುರಿಯುತ್ತಿದ್ದು, ಬೆಳ್ತಂಗಡಿ ನದಿ ತಟ ಪ್ರದೇಶಕ್ಕೆ ನೀರು ನುಗ್ಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ರಾತ್ರಿ ಆರಂಭವಾದ ಮಳೆಯ ಆರ್ಭಟ ಶನಿವಾರವೂ ಮುಂದುವರಿದಿದೆ.
ಬಿ.ಸಿ.ರೋಡ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಚೇತನ್ನನ್ನು ತನಿಖೆಯ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ತಾಲೂಕಿನ ಬೆಳುವಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಣಿಲ್ ಎಂಬಲ್ಲಿ ಯುವಕನೋರ್ವ ತನ್ನ ಅಕ್ಕನೊಂದಿಗೆ ವೀಡಿಯೊ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.
ಪ್ರಸ್ತುತ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಮ್ಮ ಸಾಂಪ್ರದಾಯಿಕ ಪ್ರವಾಸಿ ವಾಹನಗಳ ಮೇಲೆ ಬಹಳಷ್ಟು ತಾರತಮ್ಯ ಹಾಗೂ ಅವೈಜ್ಞಾನಿಕ ಪಾರ್ಕಿಂಗ್ ದರಗಳನ್ನು ವಸೂಲಿ ಮಾಡುತ್ತಿದ್ದು ದಿನನಿತ್ಯ ನಮ್ಮ ದುಡಿಮೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ.
ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಹಾಗೂ ಗಾಳಿಗೆ ಅಡಿಕೆ ಮರವೊಂದು ಮುರಿದು ಬಿದ್ದು, ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಕೇವಳ ಎಂಬಲ್ಲಿ ನಡೆದಿದೆ.
ಅಪ್ರಾಪ್ತ ಬಾಲಕಿಯ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೊ ಪ್ರಕರಣದಲ್ಲಿ 20 ವರ್ಷದ ಯುವಕನಿಗೆ ಕ್ರಿಮಿನಲ್ ಬೆದರಿಕೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (FTSC-2) ಅಪರಾಧಗಳ ಜೊತೆಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಿದೆ.
ವಸಡಿನ ದಂತ ಶಾಸ್ತ್ರ ವಿಭಾಗ, ಯೆನೆಪೋಯ ದಂತ ಕಾಲೇಜು, ಆಸ್ಪತ್ರೆ, ದೇರಳಕಟ್ಟೆ ಮತ್ತು ಗ್ರೀನ್ ವ್ಯೂವು ಪ್ರಾಥಮಿಕ ಕಾಲೇಜು, ಅಡ್ಕರ್ ಪಡುಪು, ದೇರಳಕಟ್ಟೆಯ ಸಹಯೋಗದಲ್ಲಿ ಬಾಯಿಯ ಸ್ವಚ್ಛತಾ ದಿನದ ಕುರಿತಾದ ಮಾಹಿತಿ ಮತ್ತು ದಂತ ತಪಾಸಣೆ ಶಿಬಿರವನ್ನು ದಿನಾಂಕ 30-7-2026( ಗುರುವಾರ ) ದಂದು ನಡೆಸಲಾಯಿತು.
2018ರಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ನಾಲ್ವರು ಆರೋಪಿಗಳಿಗೆ ತಲಾ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು 74 ಸಾವಿರ ರೂ. ದಂಡ ವಿಧಿಸಿದೆ.
ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಕಳೆದ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕರಾವಳಿ ಕರ್ನಾಟಕದಲ್ಲೇ ಮೊದಲ ಬಾರಿಗೆ ಅಪರೂಪದ ಜನ್ಮಜಾತ ಹೃದಯದ ಕಾಯಿಲೆಯಾದ ಸೈನಸ್ ವೆನೋಸಸ್ ಏಟ್ರಿಯಲ್ ಸೆಪ್ಟಲ್ ಡಿಫೆಕ್ಟ್ (Sinus Venosus Atrial Septal Defect – ASD) ಗೆ ಅತ್ಯಾಧುನಿಕ ಟ್ರಾನ್ಸ್ಕ್ಯಾಥೆಟರ್ (ಪಿನ್-ಹೋಲ್) ವಿಧಾನದ ಮೂಲಕ ಯಶಸ್ವಿ ಚಿಕಿತ್ಸೆ ನೀಡುವ ಮೂಲಕ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಮಂಗಳೂರು ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ.
ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಲಾವಣ್ಯಾಳನ್ನು ಬರ್ಬರವಾಗಿ ಹತ್ಯೆ ವಾಡಿದ್ದ ಆರೋಪಿ ಕೊಲೆಗೆ ಬಳಸಿದ್ದ ಮಾರಾಕಾಸ್ತ್ರವನ್ನು ಉಪ್ಪಿನಂಗಡಿಯಲ್ಲಿ ಖರೀದಿಸಿದ್ದ ಹಿನ್ನೆಲೆಯಲ್ಲಿ ಉಪ್ಪಿನಂಗಡಿಯಲ್ಲಿ ಬುಧವಾರ ಮಹಜರು ಪ್ರಕ್ರಿಯೆ ನಡೆಸಲಾಯಿತು.
ರಾಹುಲ್ ಗಾಂಧಿ ವಂಶ ಧ್ವಂಸ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿಕೆ ವಿಚಾರವಾಗಿ ಮಂಗಳೂರಿನಲ್ಲಿ ಶಾಸಕ ಯು ಟಿ ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.