Showing 20 of 4348 posts • Page 1 of 218
ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ತಾಲೂಕು ಸದ್ಯ ರಾಜ್ಯದ ಬರಪೀಡಿತ ಪಟ್ಟಿಯಲ್ಲಿ ಸೇರ್ಪಡೆಯಾಗದಿರುವುದು ಸಮಾಧಾನಕರ ಸಂಗತಿಯಾದರೂ, ವಾಡಿಕೆಯ ಮಳೆಯ ಪ್ರಮಾಣದಲ್ಲಿ ಉಂಟಾಗಿರುವ ಕುಸಿತ ಕರಾವಳಿ ಜನರಲ್ಲಿ ಆತಂಕ ಮೂಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಆಟೋರಿಕ್ಷಾ ಸಂಘಟನೆಗಳು ಕನಿಷ್ಠ ಪ್ರಯಾಣ ದರವನ್ನು ₹50ಕ್ಕೆ ಹಾಗೂ ಪ್ರತಿ ಕಿಲೋಮೀಟರ್ಗೆ ₹30ಕ್ಕೆ ಹೆಚ್ಚಿಸುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿವೆ. ಬೇಡಿಕೆಗಳನ್ನು ಈಡೇರಿಸದಿದ್ದರೆ ಜಿಲ್ಲಾದ್ಯಂತ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿವೆ.
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕರ್ನಾಟಕ ಸರ್ಕಾರದ ಆದೇಶವನ್ನು ಮೀರಿ ಚುನಾವಣೆ ನಡೆಸಲಾಗಿದೆ ಎಂದು ಆರೋಪಿಸಿರುವ NSUI, ಪ್ರಾಂಶುಪಾಲರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.
ಪಶ್ಚಿಮಘಟ್ಟ ಸಂರಕ್ಷಣೆ ನೆಪದಲ್ಲಿ ಕಸ್ತೂರಿರಂಗನ್ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಲು ಕೇಂದ್ರ ಸರ್ಕಾರ ಹೊರಟಿರುವುದು ಕರಾವಳಿ ಮತ್ತು ಮಲೆನಾಡು ಭಾಗದ ಜನರ ಅಭಿವೃದ್ಧಿಗೆ ಮಾರಕವಾಗಲಿದೆ.
ಕೇಂದ್ರ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಮೊಬೈಲ್ ಜಾಮರ್ ವ್ಯವಸ್ಥೆಯಿಂದ ಕಳೆದ ಎರಡು ವರ್ಷಗಳಿಂದ ಮಂಗಳೂರು ನ್ಯಾಯಾಲಯ, ಸುತ್ತಮುತ್ತಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಹೋಟೆಲ್ಗಳು, ವಸತಿ ವ್ಯವಸ್ಥೆಗಳು ಹಾಗೂ ವಿವಿಧ ವ್ಯಾಪಾರ-ವಾಣಿಜ್ಯ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗುತ್ತಿದೆ.
ಗಣೇಶ ಹಬ್ಬದ ಹಿನ್ನಲೆ ಉಳ್ಳಾಲ PI ಹಾಗೂ ಸಿಬ್ಬಂದಿ ವರ್ಗ ಹಾಗೂ SAF ನಿಂದ ಪಥ ಸಂಚಲನ ನಡೆಸಿದರು.
ಡ್ರಗ್ಸ್ ಮುಕ್ತ ಮಂಗಳೂರು ಹಿನ್ನಲೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಡಿ ಚುನಾವಣಾ ಆಯೋಗದಿಂದ ನೋಟಿಸ್ ಜಾರಿಯಾಗಿದೆ.
ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ನಡೆಯುವ ರಾಷ್ಟ್ರೀಯ ಯುವಜನೋತ್ಸವವನ್ನು ‘ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್’ ಹೆಸರಿನಲ್ಲಿ ಆಯೋಜಿಸಲಾಗುತ್ತಿದ್ದು, 15ರಿಂದ 29 ವರ್ಷದ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮೈ ಭಾರತ್ ಜಿಲ್ಲಾ ಡೆಪ್ಯೂಟಿ ಡೈರೆಕ್ಟರ್ ಉಲ್ಲಾಸ್ ಮನವಿ ಮಾಡಿದರು.
ಮುಲ್ಕಿ ಕಿಲ್ಪಾಡಿ ಗ್ರಾಮದ ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಕುಖ್ಯಾತ ಅಂತರ್ ಜಿಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 17.20 ಲಕ್ಷ ರೂ. ಮೌಲ್ಯದ ಸ್ವತ್ತು ವಶ ಪಡಿಸಿಕೊಳ್ಳಲಾಗಿದೆ.
ದೇಶದಲ್ಲಿ ಗೋಹತ್ಯೆಯನ್ನು ಸಂಪೂರ್ಣ ನಿಷೇಧಿಸಲು ಕೇಂದ್ರ ಸರ್ಕಾರ ಕಾನೂನು ಜಾರಿಗೆ ತರಬೇಕು ಹಾಗೂ ಗೋವನ್ನು ರಾಷ್ಟ್ರಮಾತೆಯಾಗಿ ಘೋಷಿಸಬೇಕು ಎಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಲಕ್ಷಕ್ಕೂ ಅಧಿಕ ಸಹಿ ಸಂಗ್ರಹಿಸುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಂಚಾಲಕ ಶರಣ್ ಪಂಪವೆಲ್ ತಿಳಿಸಿದ್ದಾರೆ.
ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿಯ (MAHE) ಅಂಗಸಂಸ್ಥೆಯಾದ ಕಸ್ತೂರ್ಬಾ ವೈದ್ಯಕೀಯ ಕಾಲೇಜು (KMC), ಮಂಗಳೂರಿನ ಲೈಟ್ಹೌಸ್ ಹಿಲ್ ರೋಡ್ ಕ್ಯಾಂಪಸ್ನಲ್ಲಿ ಸೆ.14 ಮತ್ತು 15ರಂದು 70ನೇ ವರ್ಷದ ಗಣೇಶ ಚತುರ್ಥಿ ಉತ್ಸವವನ್ನು ಆಚರಿಸಲು ಸಜ್ಜಾಗಿದೆ ಎಂದು ಕೆಎಂಸಿ ಮಂಗಳೂರು ಡೀನ್ ಡಾ. ಬಿ. ಉಣ್ಣಿಕೃಷ್ಣನ್ ತಿಳಿಸಿದ್ದಾರೆ.
ಇದುವರೆಗೆ ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಕಾಡುಕೋಣಗಳು ಇದೀಗ ಪುತ್ತೂರು ಪೇಟೆಯತ್ತಲೂ ಲಗ್ಗೆ ಇಡತೊಡಗಿವೆ.
ದಕ್ಷಿಣ ಕನ್ನಡದಲ್ಲಿ ಪ್ರವಾಸೋದ್ಯಮ ಹಾಗೂ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು.
ಆರ್ಎಸ್ಎಸ್ ನೋಂದಣಿ ವಿಚಾರವನ್ನು ಮುಂದಿಟ್ಟುಕೊಂಡು, ಸರ್ಕಾರಿ ನೌಕರರು ಹಾಗೂ ಇತರರಿಗೆ ಬೆಂಬಲವಾಗಿ ‘ನಾನೂ ಗಣಪತಿ’ ಎಂಬ ಚಳವಳಿ ಆರಂಭಿಸುವ ಆಲೋಚನೆ ಹೊಂದಿರುವುದಾಗಿ ಅನುಪಮಾ ಶೆಣೈ ತಿಳಿಸಿದರು.
: ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ದಕ್ಷಿಣ ಕನ್ನಡ, ಕರಾವಳಿ ಜಿಲ್ಲೆ ಸಾಮರಸ್ಯದ ನೆಲೆಯಾಗಿತ್ತು.
ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ 19ನೇ ವಾರ್ಷಿಕೋತ್ಸವದ ಅಂಗವಾಗಿ ‘ಸ್ವರ ಕುಡ್ಲ–ಸೀಸನ್ 8’ರ ಗ್ರ್ಯಾಂಡ್ ಫಿನಾಲೆ, ವಾರ್ಷಿಕೋತ್ಸವ ಸಮಾರಂಭ, ಪ್ರಶಸ್ತಿ ಪ್ರದಾನ, ಅಭಿನಂದನಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ ಸೆ.26ರಂದು ಮಧ್ಯಾಹ್ನ 2 ಗಂಟೆಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ಒಕ್ಕೂಟದ ಅಧ್ಯಕ್ಷ ಧನುರಾಜ್ ಅತ್ತಾವರ ತಿಳಿಸಿದ್ದಾರೆ.
ಪುದುವೆಟ್ಟು ಗ್ರಾಮದ ಮಿಯಾರು ನಿವಾಸಿ ಯುವತಿಯೊಬ್ಬಳು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಸೆ. 9ರಂದು ಸಂಜೆಯ ವೇಳೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಪದ್ಮರಾಜ್ ಪೂಜಾರಿಗೆ ಯೂಥ್ ಕಾಂಗ್ರೆಸ್ ಪದಾಧಿಕಾರಿಗಳು ಕಾಂಗ್ರೆಸ್ ಕಛೇರಿ ಎದುರು ಆತ್ಮೀಯವಾಗಿ ಸ್ವಾಗತಿಸಿದರು.
ಪದ್ಮರಾಜ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆದ ಬಳಿಕ ಮೊದಲ ಪತ್ರಿಕಾಗೋಷ್ಠಿ ನಡೆಸಿ, ನನ್ನ ನಿರೀಕ್ಷೆಕಿಂತ ಜಾಸ್ತಿ ಬಿಜೆಪಿ ಯವರು ಕರೆ ಮಾಡಿ ಅಭಿನಂದಿಸಿದ್ದಾರೆ ಎಂದರು.