Showing 20 of 3816 posts • Page 1 of 191
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಪ್ರತ್ಯೇಕ ವ್ಯಾಪಾರ ವಲಯಗಳನ್ನು (Vending Zones) ಗುರುತಿಸಲು ವಿಫಲವಾಗಿರುವ ಪಾಲಿಕೆಯ ಕ್ರಮವನ್ನು ಖಂಡಿಸಿ, ಆಮ್ ಆದ್ಮ ಪಾರ್ಟಿ (AAP) ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಮಂಗಳೂರು ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.
ಯಕ್ಷಗಾನದ ಪಾರಂಪರಿಕ ಚಿಕ್ಕಮೇಳಗಳ ಸಂಪ್ರದಾಯವನ್ನು ಸಂರಕ್ಷಿಸುವ ಹಾಗೂ ಶಿಸ್ತುಬದ್ಧವಾಗಿ ನಡೆಸುವ ಉದ್ದೇಶದಿಂದ ತೆಂಕುತಿಟ್ಟು ಚಿಕ್ಕಮೇಳಗಳ ಒಕ್ಕೂಟ (ರಿ.), ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಮಿತಿ ನೂತನ ನಿಯಮಾವಳಿಗಳನ್ನು ಪ್ರಕಟಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿಕರು ವನ್ಯಜೀವಿಗಳ ಉಪಟಳದಿಂದ ತಮ್ಮ ಬೆಳೆ ರಕ್ಷಣೆಗೆ ಬಳಸುವ ಕೋವಿ/ಬಂದೂಕು ಪರವಾನಗಿ ನವೀಕರಣಕ್ಕೆ ಎದುರಿಸುತ್ತಿರುವ ತೀವ್ರ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕೆಂದು ಕೋರಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಮುಂದಿನ ಆರು ತಿಂಗಳಲ್ಲಿ ಕರ್ನಾಟಕ ವಿಧಾನ ಸಭೆ ಮತ್ತು ವಿಧಾನ ಪರಿಷತ್ ಸೇರಿದಂತೆ ಎರಡೂ ಸದನಗಳಲ್ಲಿ ಡಿಜಿಟಲೀಕರಣ ವ್ಯವಸ್ಥೆ ಜಾರಿಯಾಗಲಿದೆ ಎಂದು ಕರ್ನಾಟಕ ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮೊಬೈಲ್ ಚಟ ಬಿಡುವಂತೆ ತಾಯಿ ಬೈದು ಬುದ್ಧಿಮಾತು ಹೇಳಿದ್ದಕ್ಕೆ ನೊಂದುಕೊಂಡ 16 ವರ್ಷದ ಬಾಲಕ ಮನೆಯನ್ನೇ ಬಿಟ್ಟು ನಿಗೂಢ ನಾಪತ್ತೆಯಾಗಿರುವ ಘಟನೆ ಸುಳ್ಯ ಕಸಬಾ ಗ್ರಾಮದ ಬೋರುಗುಡ್ಡೆ ಎಂಬಲ್ಲಿ ನಡೆದಿದೆ.
ಬೀದಿಬದಿ ವ್ಯಾಪಾರಿಗಳ ಆರ್ಥಿಕ ಸ್ವಾವಲಂಬನೆಗಾಗಿ ಜಾರಿಯಲ್ಲಿರುವ ಪಿ.ಎಂ ಸ್ವನಿಧಿ ಸಾಲ ಯೋಜನೆಯನ್ನು ಜಾರಿಗೊಳಿಸಬೇಕಾದ ರಾಷ್ಟ್ರೀಕೃತ ಬ್ಯಾಂಕುಗಳು ಬೀದಿಬದಿ ವ್ಯಾಪಾರಿಗಳಿಗೆ ಸಮರ್ಪಕವಾಗಿ ಸಾಲ ಮಂಜೂರು ಮಾಡದೆ, ಅನಗತ್ಯ ದಾಖಲೆಗಳನ್ನು ಕೇಳಿ ಸಾಲ ನಿರಾಕರಣೆ ಮಾಡುತ್ತಿದೆ. ಕೆಲವು ಬ್ಯಾಂಕುಗಳು ಸಿಬಿಲ್ ಸ್ಕೋರ್ ನೋಡಿ ಸಾಲ ನೀಡದೆ ವಂಚಿಸುತ್ತಿದೆ.
ನೂತನ ಸಂಪುಟ ಪುನರ್ ರಚನೆಗೆ ಭಾರಿ ಪೈಪೋಟಿ ಹಿನ್ನೆಲೆ ಯು ಟಿ ಖಾದರ್ ಗೆ ಡಿಸಿಎಂ ಸ್ಥಾನದ ಚರ್ಚೆ ನಡಯುತ್ತಿದ್ದು, ಸ್ಪೀಕರ್ ಯು ಟಿ ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.
ಕಾರ್ಕಳದಿಂದ ಮೂಡುಬಿದಿರೆಯ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ, ಒಂದು ಪಿಕ್-ಅಪ್ ಟೆಂಪೋವನ್ನು ಮೂಡುಬಿದಿರೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಾರಿಗೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಕೂಟೇಲು ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.
ಶಾಲೆ ಮತ್ತು ಅಂಗನವಾಡಿ ದುರಸ್ತಿ ಕಾರ್ಯ ಅನುದಾನದ ಕೊರತೆ ಹಾಗೂ ಇತರ ಕಾರಣಗಳಿಂದ ತುರ್ತಾಗಿ ನಡೆಸಲು ಸಾಧ್ಯವಾಗಿರಲಿಲ್ಲ.
ಜಲಸಿರಿ ಅಥವಾ ಒಳಚರಂಡಿಗೆ ಸಂಬಂಧಿಸಿ ನಡೆಯುತ್ತಿರುವ ಕಾಮಗಾರಿಯ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಮುಂದಿನ ಎರಡೂವರೆ ತಿಂಗಳ ಅವಧಿಯಲ್ಲಿ ಯಾವುದೇ ಹೊಸತಾಗಿ ಗುಂಡಿ ಅಗೆಯುವುದು ಅಥವಾ ರಸ್ತೆ ಅಗೆತ ಕಾರ್ಯಕ್ಕೆ ಅವಕಾಶ ಇರುವುದಿಲ್ಲ.
ಮುಂಗಾರು ಈಗಾಗಲೇ ಕೇರಳಕ್ಕೆ ಪ್ರವೇಶಿಸಿದ್ದು ಜೂ. 4ರಿಂದ ಕರಾವಳಿಗೂ ಪ್ರವೇಶ ವಾಗುವ ಸಾಧ್ಯತೆ ಇರುವುದರಿಂದ ಕೃತಕ ನೆರೆ, ಪ್ರವಾಹ ಸೇರಿದಂತೆ ಪ್ರಾಕೃತಿಕ ವಿಕೋಪದ ಪರಿಸ್ಥಿತಿಗಳನ್ನು ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದರು.
ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಸೋಮವಾರ ಯುವಕನೋರ್ವನ ಮೃತದೇಹ ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.
ಪಶ್ಚಿಮ ಕರಾವಳಿಯುದ್ದಕ್ಕೂ ಮೀನುಗಾರಿಕೆ ಚಟುವಟಿಕೆಗಳು ಇಂದಿನಿಂದ ಬಹುತೇಕ ಸ್ಥಗಿತಗೊಳ್ಳಲಿವೆ.
ಜೂನ್ 3ರಂದು ನಿಗದಿಯಾಗಿದ್ದ ಬಹು ನಿರೀಕ್ಷಿತ ಬೆಂಗಳೂರು – ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ (ಟ್ರಯಲ್) ಸಂಚಾರವನ್ನು ದಕ್ಷಿಣ ಪಶ್ಚಿಮ ರೈಲ್ವೆ ಇಲಾಖೆ ದಿಢೀರನೆ ರದ್ದುಗೊಳಿಸಿದೆ.
ಮಲವಂತಿಗೆ ಗ್ರಾಮದ ದಿಡುಪೆಯಲ್ಲಿ ಒಂಟಿ ಸಲಗವೊಂದು ದ್ವಿಚಕ್ರ ವಾಹನದ ಮೇಲೆ ಭೀಕರವಾಗಿ ದಾಳಿ ನಡೆಸಿರುವ ಘಟನೆ ಮೇ 31ರ ರವಿವಾರ ರಾತ್ರಿ ಸಂಭವಿಸಿದೆ. ಅದೃಷ್ಟವಶಾತ್ ಸವಾರ ಸಮಯಪ್ರಜ್ಞೆಯಿಂದ ಓಡಿ ಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜಿಲ್ಲೆಯ ಸರಕಾರಿ ಶಾಲೆಗಳಲ್ಲಿ ಸೋಮವಾರದಿಂದ ಹೊಸ ಶೈಕ್ಷಣಿಕ ವರ್ಷದ ಚಟುವಟಿಕೆಗಳು ಆರಂಭಗೊಳ್ಳಲಿದ್ದು, ಶಾಲಾ ಆರಂಭೋತ್ಸವದ ಸಂಭ್ರಮಕ್ಕೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಬೇಸಗೆ ರಜೆ ಬಳಿಕ ಶಾಲೆಗೆ ಮರಳುತ್ತಿರುವ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಲು ಶಾಲೆಗಳು ಸಜ್ಜಾಗಿವೆ.
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನವನ್ನು ಉಪರಾಷ್ಟ್ರಪತಿ ಪಿ ರಾಧಾಕೃಷ್ಣನ್ ಪಡೆದರು. ಮಂಜುನಾಥನಿಗೆ ವಿಶೇಷ ಪೂಜೆಯನ್ನು ಉಪ ರಾಷ್ಟ್ರಪತಿ ಪಿ ರಾಧಾಕೃಷ್ಣನ್ ಸಲ್ಲಿಸಿದರು.
ಯುವಕನೋರ್ವ ಚಿಕ್ಕಪ್ಪನನ್ನೇ ಬಿಯರ್ ಬಾಟ್ಲಿಯಿಂದ ಇರಿದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ಎಂಬಲ್ಲಿ ರವಿವಾರ ರಾತ್ರಿ ಸಂಭವಿಸಿದೆ.
ಸೂರತ್ ನಡುವೆ ಸಂಚರಿಸುತ್ತಿದ್ದ ವಿಶೇಷ ರೈಲು ಇನ್ನು ಮುಂದೆ ವಾರದಲ್ಲಿ ಎರಡು ದಿನ ನಿರಂತರ ಸಂಚರಿಸಲಿದೆ.