ಮಂಗಳೂರು : ಶಾಸಕ ವಿನಯ ಕುಲಕರ್ಣಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದ್ದರೂ, ಅಧಿಕೃತ ಸೂಚನೆ ಬಂದ ಬಳಿ ಅವರ ವಿಧಾನಸಭಾ ಅಧಿಕಾರದ ಬಗ್ಗೆ ತೀರ್ಮಾನಿಸಲಾಗುವುದು ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಸಂವಿಧಾನ ತಿದ್ದುಪಡಿ ಮಸೂದೆ ಬಹುಮತವಿಲ್ಲದೆ ಬಿದ್ದುಹೋದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಯು.ಟಿ. ಖಾದರ್ ಮಾತನಾಡುತ್ತಾ ಸಂವಿಧಾನಬದ್ಧ ತೀರ್ಮಾನಗಳು ಹಾಗೂ ಚರ್ಚೆಗಳ ಮೂಲಕ ಯಾವುದೇ ಪ್ರದೇಶದ ಜನರು, ಸಮುದಾಯಗಳಿಗೆ ಅನ್ಯಾಯವಾಗಬಾರದು ಎನ್ನುವುದು ಮುಖ್ಯ ಎಂದು ಹೇಳಿದರು.

