ಮಂಗಳೂರು : ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗ್ರಾಪಂ ಚುನಾವಣೆ ಕಾಂಗ್ರೆಸ್ ಸರಕಾರ ಏಕ ಪಕ್ಷೀಯವಾಗಿ ಮೀಸಲಾತಿ ಪ್ರಕಟಿಸಿದೆ.
ಇದಕ್ಕೆ ಆಕ್ಷೇಪ ಸಲ್ಲಿಸುವ ಬಗ್ಗೆ ತೀರ್ಮಾನಿಸಲಾಗಿದೆ. ಚುನಾವಣೆಯನ್ನು ಎದುರಿಸುವ ನಿಟ್ಟಿನಲ್ಲಿ ಸಿದ್ಧತೆ ಈಗಾಗಲೇ ನಡೆಸಲಾಗಿದ್ದು, ಪ್ರಮುಖರಾದ ಕಿಶೋರ್ ಕುಮಾರ್, ಪ್ರತಾಪಸಿಂಹ ನಾಯಕ್, ಪ್ರೇಮಾನಂದ ಶೆಟ್ಟಿ ಸಂಜೀವ ಮಠಂದೂರು ಅವರನ್ನೊಳಗೊಂಡ ಸಮಿತಿ ರಚಿಸಲಾಗಿದೆ ಎಂದರು.

