ಮಂಗಳೂರು : ಪವಿತ್ರ ರಮಝಾನ್ ವೃತಗಳನ್ನು ಅನುಷ್ಠಾನಗೊಳಿಸಿದ ಕರಾವಳಿಯ ಮುಸ್ಲಿಮರು ಇಂದು ಅತ್ಯಂತ ಸಡಗರ, ಸಂಭ್ರಮದಿಂದ ‘ಈದುಲ್ ಫಿತ್’ ಆಚರಿಸಿದರು.
ದ.ಕ. ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಜುಮಾ ಮಸೀದಿ, ಈದ್ದಾಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತ್ಯಾ ಈದ್ ಸಂದೇಶ, ಪ್ರವಚನ, ಈದ್ ಶುಭಾಶಯ, ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ನೀಡುವ ಮೂಲಕ ಹಬ್ಬಕ್ಕೆ ಸಂಭ್ರಮದ ಕಳೆ ತಂದರು.
ಈದ್ ನಮಾಝ್-ಖುತ್ಪಾದ ಬಳಿಕ ದಫನ ಭೂಮಿಗೆ ತೆರಳಿ ಅಗಲಿದ ಕುಟುಂಬದ ಸದಸ್ಯರ ಮಗ್ನಿರತ್ಗಾಗಿ ಪ್ರಾರ್ಥಿಸಿದರು. ಹಾಗೇ ಕುಟುಂಬಸ್ಥರು, ಸ್ನೇಹಿತರು, ಸಮೀಪದ ನಿವಾಸಿಗಳ ಮನೆಗೆ ತೆರಳಿ ಈದ್ ಶುಭಾಶಯ ಕೋರಿದರು. ಜಿಲ್ಲೆಯ ಬಹುತೇಕ ಎಲ್ಲಾ ಮಸೀದಿ-ಈದ್ದಾಗಳಲ್ಲಿ ವಿಶೇಷ ನಮಾಝ್, ಪ್ರವಚನ ಬಳಿಕ ಪರಸ್ಪರ ಹಸ್ತಲಾಘವ, ಆಲಿಂಗನ ಮೂಲಕ ಹಬ್ಬದ ಶುಭಾಶಯ ವಿನಿಮಯ ಹಾಗೂ ಮನೆಗಳಲ್ಲಿ ಹಬ್ಬದ ಸಂಭ್ರಮ ಕಂಡು ಬಂತು.
ಎಳೆಯ ಮಕ್ಕಳಿಂದ ಹಿಡಿದು ಹಿರಿಯರ ಸಹಿತ ಉಪವಾಸಿಗರು ಹೊಸ ಬಟ್ಟೆಬರೆ ಧರಿಸಿ, ಅತ್ತರ್ ಹಚ್ಚಿ ವಿಶಿಷ್ಟ ಬಗೆಯ ತಿಂಡಿ-ತಿನಿಸು ತಿಂದು ಹಬ್ಬವನ್ನು ಅತ್ಯಂತ ಶ್ರದ್ಧೆಯಿಂದ ಸಂಭ್ರಮಿಸಿದರು. ನಗರದ ಬಾವುಟಗುಡ್ಡದ ಈದ್ದಾ ಜುಮಾ ಮಸ್ಟಿದ್ನಲ್ಲಿ ದ.ಕ.ಜಿಲ್ಲಾ ಖಾಝಿ ಅಲ್ತಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಖುತ್ಸಾ ಪಾರಾಯಣಗೈದರು. ಬಂದರ್ ಝೀನತ್ ಬಕ್ ಕೇಂದ್ರ ಜುಮಾ ಮಸೀದಿಯ ಖತೀಬ್ ಸೈಯದ್ ಶಂಸುದ್ದೀನ್ ಬಾಸಿತ್ ಬಾ ಅಲವಿ ತಂಳ್ ಅಲ್ ಅನ್ಸಾರಿ ನೇತೃತ್ವದಲ್ಲಿ ಈದ್ ನಮಾಝ್ ನಡೆಯಿತು.
ಈ ಸಂದರ್ಭ ಬಂದರ್ ಝೀನತ್ ಬಕ್ ಕೇಂದ್ರ ಜುಮಾ ಮಸೀದಿ ಮತ್ತು ಈದ್ದಾ ಜುಮಾ ಮಸೀದಿಯ ಅಧ್ಯಕ್ಷ ಅಲ್ತಾಜ್ ಯೆನೆಪೊಯ ಅಬ್ದುಲ್ಲಾ ಕುಂಣಿ, ಉಪಾಧ್ಯಕ್ಷ ಕೆ. ಅಶ್ರಫ್, ಕೋಶಾಧಿಕಾರಿ ಎಸ್.ಎಂ.ರಶೀದ್ ಹಾಜಿ ಮತ್ತಿತರರು ಪಾಲ್ಗೊಂಡಿದ್ದರು. ರಾಜ್ಯ ವಿಧಾನಸಭೆಯ ಅಧ್ಯಕ್ಷ ಯು.ಟಿ.ಖಾದರ್ ಫರೀದ್, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮತ್ತಿತರ ಅಧಿಕಾರಿಗಳು ಸೌಹಾರ್ದ ಭೇಟಿ ನೀಡಿ ಶುಭ ಹಾರೈಸಿದರು.
ಉಳ್ಳಾಲ ಕೇಂದ್ರ ಜುಮಾ ಮಸ್ಟಿದ್ನಲ್ಲಿ ಖತೀಬ್ ಹಾಫಿಲ್ ಅಬ್ದುಲ್ ಮಜೀದ್ ಫಾಳಿಲಿ ಹಿಕಮಿ ಸಖಾಫಿ ನೇತೃತ್ವದಲ್ಲಿ ಈದ್ ನಮಾಝ್ ಮತ್ತು ಖುತ್ವಾಪಾರಾಯಣ ನಡೆಯಿತು. ಉಳ್ಳಾಲ ದರ್ಗಾ ಅಧ್ಯಕ್ಷ ಬಿ.ಜೆ. ಹನೀಫ್ ಹಾಜಿ ಮತ್ತಿತರರು ಪಾಲ್ಗೊಂಡಿದ್ದರು.

