ಬಂಟ್ವಾಳ: ಫಲ್ಗುಣಿ ನದಿಯಲ್ಲಿ ಏಕಾಏಕಿ ನೀರು ಏರಿಕೆಯಾಗಿದ್ದು, ಪೊಳಲಿ ಸಮೀಪದ ಅಮ್ಮುಂಜೆ ಗ್ರಾಮದ ಹೊಳೆಬದಿಯ ಕಡಪು ಕರಿಯ ಎಂಬಲ್ಲಿ ತಗ್ಗು ಪ್ರದೇಶ ಭಾಗಶಃ ಮುಳುಗಡೆಯಾಗಿದೆ.
Whatsapp Image 2024 08 01 At 9.36.26 Am

ಸುಮಾರು 8 ಕುಟುಂಬಗಳಿಗೆ ನೀರು ನುಗ್ಗಿದ್ದು ಎಲ್ಲಾ ಕುಟುಂಬಗಳನ್ನು ತಹಶೀಲ್ದಾರ್ ಅರ್ಚನಾ ಭಟ್ ಅವರ ನಿರ್ದೇಶನದಂತೆ ತಾಲೂಕು ಆಡಳಿತ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳ ನೆರವಿನಿಂದ ರಕ್ಷಣೆ ಕಾರ್ಯ ಮಾಡುತ್ತಿದ್ದಾರೆಪಲ್ಗುಣಿ ನದಿಯಲ್ಲಿ ನೀರು ಏರಿಕೆಯಾದ ಬಳಿಕ ಕೃತಕ ನೆರೆಯ ರೂಪದಲ್ಲಿ ಈ 8 ಮನೆಗಳಿಗೆ ನೀರು ನುಗ್ಗಿದೆ ಎನ್ನಲಾಗಿದೆ.
Whatsapp Image 2024 08 01 At 9.36.27 Am

ಅದರಲ್ಲಿ ಮೂರು ಮನೆಗಳು ಅಪಾಯಕಾರಿಯಾಗಿದ್ದು, ಇದೀಗ ಅಗ್ನಿಶಾಮಕ ದಳದ ಬೋಟ್ ಮೂಲಕ ಅವರನ್ನು ‌ರಕ್ಷಣೆಯಲ್ಲಿ ತೊಡಗಿದ್ದಾರೆ.

ನದಿಯಲ್ಲಿ ಕಸದ ರಾಶಿಯಿಂದ ರಕ್ಷಣಾ ಕಾರ್ಯಕ್ಕೆ ಕೊಂಚ ಮಟ್ಟಿಗೆ ತೊಂದರೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.