Showing 20 of 4108 posts • Page 12 of 206
ಉದ್ಯೋಗ ಸೃಷ್ಟಿ, ಸಾಮಾಜಿಕ ಭದ್ರತಾ ವ್ಯಾಪ್ತಿ ವಿಸ್ತರಣೆ ಹಾಗೂ ಉದ್ಯೋಗಾರ್ಹತೆ ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ವಿಕಸಿತ ಭಾರತ್ ರೋಜ್ಗಾರ್ ಯೋಜನೆ (ಪಿಎಂವಿಬಿಆರ್ವೈ) ಕುರಿತ ಜಾಗೃತಿ ಮತ್ತು ಫಲಾನುಭವಿಗಳ ಕಾರ್ಯಕ್ರಮವು ಜೂನ್ 19ರಂದು ಸಂಜೆ 4 ಗಂಟೆಗೆ ನಗರದ ಬಂದರಿನ ಕೆನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಾದೇಶಿಕ ಪಿಎಫ್ ಆಯುಕ್ತ ಸಂದೀಪ್ ಬಿಸ್ವಾಸ್ ತಿಳಿಸಿದ್ದಾರೆ.
ಕಳವು ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ ಕೆಲವು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಪುತ್ತೂರಿನ ಕುಖ್ಯಾತ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ಪುತ್ತೂರು ರೈಲ್ವೆ ನಿಲ್ದಾಣದ ಬಳಿ ಮಂಗಳವಾರ (ಜೂನ್ 16) ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಅಕ್ರಮವಾಗಿ ಲಾರಿಯಲ್ಲಿ ಜಾನುವಾರು ಸಾಗಾಟ ಮಾಡುತ್ತಿರುವುದನ್ನು ಉಪ್ಪಿನಂಗಡಿ ಪೊಲೀಸರು 34 ನೆಕ್ಕಿಲಾಡಿಯ ಆನೆಬೈಲ್ ಎಂಬಲ್ಲಿ ಪತ್ತೆ ಹಚ್ಚಿದ್ದು, ಇಬ್ಬರನ್ನು ಬಂಧಿಸಿ ದ್ದಾರೆ. ಈ ವೇಳೆ ಲಾರಿಯಲ್ಲಿದ್ದ ಓರ್ವ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಆರ್ಥಿಕ ಹಾಗೂ ಕೈಗಾರಿಕಾ ರಂಗಕ್ಕೆ ಹೊಸ ಶಕ್ತಿ ತುಂಬಲಿರುವ ಗಂಜಿಮಠದಲ್ಲಿ ನಿರ್ಮಾಣ ಹಂತದಲ್ಲಿರುವ ಮಹತ್ವಾಕಾಂಕ್ಷೆಯ ಪ್ಲಾಸ್ಟಿಕ್ ಪಾರ್ಕ್ ಯೋಜನಾ ಪ್ರದೇಶಕ್ಕೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ್ದಾರೆ.
ಜಮೀಯತುಲ್ ಫಲಾಹ್ ಮಂಗಳೂರು ಕಾರ್ಪೊರೇಷನ್ ಘಟಕ ಮತ್ತು ವಿಶೇಷ ಮಕ್ಕಳ ವಸತಿ ಶಾಲೆ ಹಾಗೂ ತರಬೇತಿ ಕೇಂದ್ರವಾದ ಸಾನಿಧ್ಯ ಸಂಸ್ಥೆಯ ಜಂಟಿ ಆಶ್ರಯದಲ್ಲಿ ‘ಈದ್ ಮಿಲನ್ 2026’ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿ ಎಬಿಸಿ ಕ್ಲಬ್ ಗೆ ನಾಲ್ವರು ಮುಸ್ಲಿಂ ಹುಡುಗಿಯರಿದ್ದ ಸ್ಕೂಟರ್ ನುಗ್ಗಿದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ.
ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಬಳಿ ನಡೆದಿದೆ.
ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಗ್ಗೆ ಕೊಕ್ಕಡ ಗ್ರಾಮದ ಹಳ್ಳಿಂಗೇರಿಯಲ್ಲಿ ನಡೆದಿದೆ.
ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಎಸ್ಪಿ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಬಳಿ ನಡೆದಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಸೇರಿದಂತೆ ದೇಶದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಂಘಟನೆಗಳು ಕಾನೂನಿನಡಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಆರ್ಎಸ್ಎಸ್ ಕೂಡ ನೋಂದಣಿ ಮಾಡಿಕೊಂಡರೆ ಉತ್ತಮ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅಭಿಪ್ರಾಯಪಟ್ಟರು.
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂಬ ಬಿಜೆಪಿ ನಾಯಕರ ಆರೋಪಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸಂಪೂರ್ಣ ಸುಳ್ಳು ಮತ್ತು ಅಪಪ್ರಚಾರ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಸ್ಪಷ್ಟಪಡಿಸಿದರು.
ರೈಲ್ವೇ ಲೆವೆಲ್ ಕ್ರಾಸಿಂಗ್ ಗೇಟ್ ನಿಯಮ ಉಲ್ಲಂಘನೆ ಪ್ರಕರಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗ ಗಂಭೀರವಾಗಿ ಪರಿಗಣಿಸಿದ್ದು, ಕಠಿನ ಕ್ರಮಕ್ಕೆ ಮುಂದಾಗಿದೆ.
ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯೊಳಗೆ ನೇಣುಬಿಗಿದು ಆತ್ಮಹತ್ಯೆಗೈದ ಘಟನೆ ಭಾನುವಾರ ಸಂಜೆ ಸೋಮೇಶ್ವರ ಬಸ್ಸು ತಂಗುದಾಣದ ಬಳಿ ನಡೆದಿದೆ.
ಸೇವೆ ಮತ್ತು ತ್ಯಾಗದ ಪರಿಶ್ರಮದೊಂದಿಗೆ ಸಮಾಜವನ್ನು ಕಟ್ಟಿದಾಗ ಸುದೃಢ ಸಮಾಜ ನಿರ್ಮಾಣವಾಗುತ್ತದೆ ಎಂದು ಮಂಗಳೂರು ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ ನುಡಿದರು.
ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಒಂದು ವರ್ಷದಿಂದ ಮಹತ್ತರ ಪಾತ್ರ ವಹಿಸಿರುವ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರನ್ನು ವರ್ಗಾವಣೆ ಮಾಡಬಾರದು ಎಂಬ ಅಭಿಯಾನ ಮತ್ತೆ ಆರಂಭಗೊಂಡಿದೆ.
ಮಹಿಳೆಯರು ಮತ್ತು ಲಿಂಗಪರಿವರ್ತಿತರಿಗೆ ಉಚಿತ ಬಸ್ ಪ್ರಯಾಣವನ್ನು ನೀಡುವ ಕೇರಳ ಸರ್ಕಾರದ ಪ್ರಿಯದರ್ಶಿನಿ ಯೋಜನೆಯಿಂದ ಜನರು ಸಂತೋಷಗೊಂಡಿದ್ದಾರೆ.
ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ-ಬಿಲ್ಲೆ ರಸ್ತೆಯ ಡಿಪ್ಪೋ ಎಂಬಲ್ಲಿ ಜೂನ್ 13 ರಂದು ಬೆಳಗ್ಗಿನ ಜಾವ ಪಿಕಪ್ ವಾಹನವೊಂದು ಆಯತಪ್ಪಿ ಬಿದ್ದಿರುವ ವಾಹನದಲ್ಲಿ ಅಕ್ರಮ ಜಾನುವಾರು ಸಾಗಿಸುತ್ತಿದ್ದ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ಉಪ-ನಿರೀಕ್ಷಕರಿಗೆ ಬಂದ ಮಾಹಿತಿ ಆಧರಿಸಿ,
ಮನೆಯ ಮುಂಭಾಗದಲ್ಲಿದ್ದ ತೆಂಗಿನ ಮರ ತುಂಡಾಗಿ ಮನೆಯ ಅಂಗಳಕ್ಕೆ ಬಿದ್ದ ಘಟನೆ ಸುಳ್ಯದ ಪೈಚಾರ್ನಲ್ಲಿ ನಡೆದಿದೆ.
ನಾಗರಿಕ ವಿಮಾನಯಾನ ನಿರ್ದೇಶನಾಲಯದ (ಡಿಜಿಸಿಎ) ಅನುಮೋದನೆಯ ನಂತರ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ರನ್ವೇ 24 ಗಾಗಿ ನಿಖರ ಸಂಪರ್ಕ ಬೆಳಕಿನ (ಪಿಎಎಲ್) ವರ್ಗ 1 ವ್ಯವಸ್ಥೆಯನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಿದೆ.
ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ಮತ್ತು ವಿಳಂಬ ನೀತಿಗಳಿಂದ ಮಹಿಳೆಯರು, ಕೂಲಿ ಕಾರ್ಮಿಕರು ಮತ್ತು ಸಾಮಾನ್ಯ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ,