Showing 20 of 4108 posts • Page 14 of 206
: ಸೀಮಂತ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ ಬರುತ್ತಿದ್ದಾಗ ಮಿನಿ ಬಸ್ ಪಲ್ಟಿಯಾಗಿ ಗಾಯಗೊಂಡಿದ್ದ ಪ್ರಯಾಣಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕಳೆದ ಒಂದೆರಡು ದಿನಗಳಿಂದ ಸುರಿದ ಮಳೆಗೆ ಜಪ್ಪಿನಮೊಗರು ಶಾಲೆಯೊಂದರ ಸಮೀಪದ ಪ್ರದೇಶದಲ್ಲಿ ಕೃತಕ ನೆರೆ ಉಂಟಾಗಿದೆ.
ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಇಬ್ಬರು ಅಂತಾರಾಜ್ಯ ಕಳ್ಳರನ್ನು ಬಂಧಿಸಿ 23 ಲಕ್ಷದ 67 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ದಸ್ತಗಿರಿಗೆ ಸಿಗದೇ, ತಲೆಮರೆಸಿಕೊಂಡಿದ್ದ ಪ್ರತ್ಯೇಕ ಪ್ರಕರಣಗಳ ಇಬ್ಬರು ಆರೋಪಿಗಳನ್ನು ಬರ್ಕೆ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಪತ್ತೆ ಮಾಡಿ, ದಸ್ತಗಿರಿ ಮಾಡಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ಎಡಪದವು ಪಂಚ್ಯಾತ್ ವ್ಯಾಪ್ತಿಯ ಕೊರ್ಡೆಲ್ , ಪದರಂಗಿ ಗ್ರಾಮದಲ್ಲಿ ಕುಡಿಯುವ ನೀರು ಸಹಿತ ಇತರ ಮೂಲಭೂತ ಸೌಕರ್ಯ ವಂಚಿತರಾಗಿದ್ದು ಎಡಪದವು ಪಂಚ್ಯಾತ್ ಗೆ ಎಷ್ಟೇ ಮನವಿ ನೀಡಿದರು ಸ್ಪಂದಿಸದ ಹಿನ್ನಲೆಯಲ್ಲಿ ಗ್ರಾಮಸ್ಥರು ಎಡಪದವು ಪಂಚ್ಯಾತ್ ಎದುರು ಪ್ರತಿಭಟನೆಯನ್ನ ಮಾಡಲಾಯಿತು.
ಪ್ರಸಿದ್ದ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಮಾಡಿ ಕಾಂಗ್ರೆಸ್ ಮುಖಂಡನೊಬ್ಬ ಬ್ಲಾಕ್ಕೇಲ್ ಮಾಡಿದ್ದಲ್ಲದೆ, ಕೋಟ್ಯಂತರ ರೂಪಾಯಿ ಹಣ ಪೀಕಿಸಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಉರ್ವಾ ಪೊಲೀಸರು ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಆಳವಾದ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಶಿಬೆಟ್ಟು ಎಂಬಲ್ಲಿ ನಡೆದಿದೆ.
ಮಳೆಗಾಲದಲ್ಲಿ ಎದುರಾಗುವ ಯಾವುದೇ ವಿಪತ್ತುಗಳನ್ನು ಎದುರಿಸಲು ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು ಟಿ ಖಾದರ್ ಸೂಚಿಸಿದ್ದಾರೆ.
ಕರಾವಳಿಯ ಸಾಂಸ್ಕೃತಿಕ ನಗರಿ ಮಂಗಳೂರಿನ ಪ್ರತಿಭಾನ್ವಿತ ಯುವತಿ, ಕುಮಾರಿ ರೆಮೋನಾ ಎವೆಟ್ ಪೆರೇರಾ ಅವರು ಪ್ರಸಾರ ಭಾರತಿಯ ದೂರದರ್ಶನ ಚಂದನ ವಾಹಿನಿ ನಡೆಸಿದ ಕಠಿಣ ಆಡಿಷನ್ನಲ್ಲಿ ಯಶಸ್ವಿಯಾಗಿ ತೇರ್ಗಡೆಯಾಗುವ ಮೂಲಕ ಅಧಿಕೃತವಾಗಿ ‘ಬಿ-ಗ್ರೇಡ್’ ಶಾಸ್ತ್ರೀಯ ನೃತ್ಯ ಕಲಾವಿದೆಯಾಗಿ ಆಯ್ಕೆಯಾಗಿದ್ದಾರೆ.
ನಗರದ ಬೆಂಗ್ರೆ, ಸುಲ್ತಾನ್ ಬತ್ತೇರಿ ಮತ್ತು ಬೊಕ್ಕಪಟ್ಣ ಪ್ರದೇಶಗಳ ಫಲ್ಗುಣಿ ನದಿಯ ದಡದಲ್ಲಿ ಹಾಗೂ ನೀರಿನಲ್ಲಿ ಶನಿವಾರ ಸತ್ತ ಮತ್ತು ಅರೆ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಮೀನುಗಳು ಪತ್ತೆಯಾಗಿದ್ದು, ಕಳವಳ ಮೂಡಿಸಿದೆ.
ಪುನೀತ್ ಕೆರೆಹಳ್ಳಿ ಅವರಿಗೆ ಮತ್ತೊಂದು ಜೀವ ಬೆದರಿಕೆ ಕರೆ ಬಂದಿದೆ. ಮಂಗಳೂರಿನಿಂದ ನಿರಂತರವಾಗಿ ಬೆದರಿಕೆ ಕರೆ ಬರುತಿದ್ದು Mohammed (9187399207) ಮೊದಲ ಕರೆ ಬಂದಿದ್ದು ನಂತರ , Umar (8123359613) ನಿಂದ ಮಂಗಳೂರಿಗೆ ಬರುವಂತೆ ಸವಾಲು, ಕೊಲೆಬೆದರಿಕೆ ಆಡಿಯೋ ದಾಖಲೆ ಬಹಿರಂಗವಾಗಿದೆ.
ಜನ ವಿರೋಧಿ ತೆರಿಗೆ ನೀತಿಯ ವಿರುದ್ಧ ಸಿಪಿಎಂ ಮಹಾ ನಗರ ಪಾಲಿಕೆ ಎದುರು ಮಂಗಳೂರು ನಗರ ಸಿಪಿಎಂ ವತಿಯೆಂದ ಮಂಗಳೂರು ಮಹಾ ನಗರ ಪಾಲಿಕೆಯ ಎದುರು ಪ್ರತಿಭಟನೆಯನ್ನ ಹಮ್ಮಿಕೊಂಡಿದ್ದು, ವಿವಿಧ ಬೇಡಿಕೆ ಮತ್ತು ಜನ ವಿರೋಧಿ ತೆರಿಗೆ ನೀತಿಯನ್ನ ತಕ್ಷಣ ಹಿಂಪಡಯಬೇಕು ಎಂದು ಆಗ್ರಹಿಸಲಾಯಿತ್ತು .
ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಬರುವ ರೋಗಿಗಳಿಗೆ ಉತ್ತಮ ಸೇವೆ ಲಭ್ಯವಾಗುವಂತೆ ಮಾಡುವುದು ನನ್ನ ಮೊದಲ ಆದ್ಯತೆಯಾಗಿದ್ದು, ಆ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿರುವ ಲೋಪದೋಷಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಗಮನ ಹರಿಸಿರುವುದಾಗಿ ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರದ ನೂತನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಶ್ರೀ ಯು. ಟಿ. ಖಾದರ್ ಅವರು ಭಾನುವಾರ ಮಂಗಳೂರಿನ ರೊಸಾರಿಯೊ ಕ್ಯಾಥೆಡ್ರಲ್ನಲ್ಲಿ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ಪೂಜ್ಯ ಡಾ. ಪೀಟರ್ ಪೌಲ್ ಸಲ್ದಾನ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಫೇಸ್ಬುಕ್ನಲ್ಲಿ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ, ಜಾತಿನಿಂದನೆ ಮಾಡಿ ಜೀವ ಬೆದರಿಕೆಯೊಡ್ಡಿರುವ ಆರೋಪದಲ್ಲಿ ಓರ್ವ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ಟೋವಿಂಗ್ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸುಳ್ಯ ಅರಂತೋಡು ಕೊಯನಾಡು ಸಮೀಪದ ದೇವರಕೊಲ್ಲಿ ಬಳಿ ನಡೆದಿದೆ.
ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಕಾರ್ಯಾಚರಣೆ ನಡೆಸಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗ (CCB) ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದು, ಅವರಿಂದ ಒಟ್ಟು 164 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ಹರಾಜಿನ ಕೂಗು, ಬೋಟ್ ಗಳ ಎಂಜಿನ್ಗಳ ಸದ್ದು, ಟೆಂಪೋ – ಲಾರಿಗಳ ಓಡಾಟ ಹಾಗೂ ಕಾರ್ಮಿಕರ ಗದ್ದಲಗಳಿಂದ ಗಿಜಿಗುಡುತ್ತಿದ್ದ ಮಂಗಳೂರಿನ ಮೀನುಗಾರಿಕ ದಕ್ಕೆ ಇದೀಗ ಸ್ತಬ್ಧವಾಗಿದೆ.
ಡಿಬಿಎಲ್ ಕಂಪನಿಯ ಕಳಪೆ ಕಾಮಗಾರಿಯಿಂದ ಮಂಗಳೂರು- ಮೂಡುಬಿದಿರೆ ಮಿಜಾರಿನಲ್ಲಿ ರಸ್ತೆಯು ಮಳೆಗೆ ಕೊಚ್ಚಿ ಹೋಗಿ ಅಪಾಯದ ಸ್ಥಿತಿ ಎದುರಾಗಿದೆ.