Showing 20 of 3835 posts • Page 143 of 192
ಕೃಷಿಕರು ಮನರಂಜನೆಗಾಗಿ ಆರಂಭಿಸಿದ ಕಂಬಳ ಕ್ರೀಡೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸುತ್ತಿದೆ ಎಂದು ಮುಂಬಯಿ ಪ್ರಸಿದ್ಧ ಜ್ಯೋತಿಷ್ಯ ಡಾ. ಎನ್ ಜೆ ಪ್ರವೀಣ್ ಭಟ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪಿಲಿಕುಳ ಕಂಬಳಕ್ಕೆ ತಯಾರಿ ನಡೆಯುತ್ತಿದೆ. ಆದರೆ ಅತ್ತ ಅದಕ್ಕೆ ಸಾಲು ಸಾಲು ಅಡ್ಡಿ ಆತಂಕಗಳು ಕೂಡ ಎದುರಾಗುತ್ತಿವೆ.
ಪ್ರಸ್ತಾವಿತ ಪ್ರಮುಖ ಯೋಜನೆಗಳನ್ನು ಆದಷ್ಟು ಬೇಗ ಕಾರ್ಯಗತಗೊಳಿಸುವಂತೆ ಕೋರಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಸುದ್ದಿ ಗೋಷ್ಟಿ ನಡೆಸಿ ಬೇರೆ ಬೇರೆ ರಾಜ್ಯದ ಚುನಾವಣಾ ಫಲಿತಾಂಶ ನೋಡಿದಾಗ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ.
ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ ಮಾಡಿದ ಘಟನೆ ಉಳ್ಳಾಲದ ಸೋಮೇಶ್ವರದಲ್ಲಿ ನಡೆದಿದೆ. ಸೋಮೇಶ್ವರದ ರುದ್ರಬಂಡೆಯಿಂದ ಯುವತಿ ಕಡಲಿಗೆ ಹಾರಿದ್ದು, ಯುವತಿಯನ್ನ ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ.
ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ, ಎನ್ಎಸ್ಎಸ್ ಸ್ವಯಂಸೇವಕರು, ಕಲಾವಿದರು ಮತ್ತು ಬಸ್ ನಿಲ್ದಾಣದ ಮಾಲೀಕರು ಬಸ್ ನಿಲ್ದಾಣದ ಗೋಡೆಯನ್ನು ‘ರಕ್ತ ಮತ್ತು ಅಂಗಾಂಗ ದಾನ’ ಕುರಿತು ಜಾಗೃತಿ ಫಲಕವನ್ನಾಗಿ ಪರಿವರ್ತಿಸಿದರು.
ಗ್ರಾಮೀಣ ಕೃಷಿಕರು ಮನೋರಂಜನೆ ಗಾಗಿ ಆರಂಭಿಸಿದ ಕಂಬಳ ಕ್ರೀಡೆ ಪ್ರಸಕ್ತ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸುತ್ತಿದೆ ಎಂದು ಪೂಂಜ ಕ್ಷೇತ್ರದ ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ ಹೇಳಿದರು.
ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿಯ ಸ್ಥಾಪಕಾಧ್ಯಕ್ಷ, ಸಾಮಾಜಿಕ ಹೋರಾಟಗಾರ ಬಿ.ಎಂ.ಪ್ರಭಾಕರ ದೈವಗುಡ್ಡೆ (71) ಕೆಲಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಶನಿವಾರ ರಾತ್ರಿ ನಿಧನ ಹೊಂದಿದರು. ಪತ್ನಿ, ಪುತ್ರಿಯನ್ನು ಅವರು ಅಗಲಿದ್ದಾರೆ.
ವಿವೇಕಾನಂದ ವಿದ್ಯಾವರ್ಧಕ ಸಂಘದ ಮೊದಲ ಸಂಸ್ಥೆ, ಸುಮಾರು ಆರು ದಶಕಗಳ ಸಮೃದ್ಧ ಶೈಕ್ಷಣಿಕ ಪರಂಪರೆಯುಳ್ಳ ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜು ಕೇವಲ ನಗರ ಪ್ರದೇಶ ಮಾತ್ರವಲ್ಲದೇ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೆ ಆಶಾಕಿರಣವಾಗಿದೆ.
ನನ್ನ ಇಂದಿನ ಬೆಳವಣಿಗೆಯ ಬಹುಪಾಲು ಯಶಸ್ಸು ಪುತ್ತೂರು ವಿವೇಕಾನಂದ ಕಾಲೇಜಿಗೆ ಸಲ್ಲಬೇಕು. ವ್ಯಕ್ತಿತ್ವ ವಿಕಸನದ ಮೂಲಕ ಕಾಲೇಜು ಉತ್ತಮ ನಾಗರಿಕರನ್ನು ನೀಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹೇಳಿದರು.
ಬೈ ಎಲೆಕ್ಷನ್ ವಿಧಾನ ಸಭಾ ಉಪಚುನಾವಣಾ ಮತ ಎಣಿಕೆ ಇಂದು ನಡೆದಿದ್ದು, ಅಂತಿಮವಾಗಿ ರಾಜ್ಯದ ಮತದಾರರು ಎನ್ ಡಿಎ ಮೈತ್ರಿ ಕೂಟವನ್ನು ತಿರಸ್ಕರಿಸಿದ್ದು, ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ.
ಸೆಂಟ್ರಲ್ ಇಂಡಸ್ಟ್ರಿಯಲ್ (CISF) canine squad ಭಾಗವಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ 12 ವರ್ಷದ ಲ್ಯಾಬ್ರಡಾರ್ ತಳಿಯ ಶ್ವಾನ ಜಾಕ್ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಶುಕ್ರವಾರ(ನ22) ಭಾವನಾತ್ಮಕ ವಿದಾಯ ಹೇಳಿದೆ.
ದೇರಳಕಟ್ಟೆ ಬ್ಯಾರೀಸ್ ವಾಣಿಜ್ಯ ಕಟ್ಟಡದಿಂದ ಕುತ್ತಾರು ಪಂಡಿತ್ ಹೌಸ್ ವರೆಗಿನ ರಸ್ತೆಯನ್ನು ಅತಿಕ್ರಮಿಸಿದ್ದ ಅಂಗಡಿ, ಮಳಿಗೆಗಳನ್ನ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪೊಲೀಸ್ ರಕ್ಷಣೆಯಲ್ಲಿ ಶುಕ್ರವಾರ ಜೆಸಿಬಿ ಬಳಸಿ ಕೆಡವಿ ಹಾಕಿದ್ದಾರೆ.
ಹಲವು ಕಳವು ಪ್ರಕರಣಗಳಿಗೆ ಸಂಬಂಧಪಟ್ಟಂತೆ ಆರೋಪಿ ಯೋರ್ವ ನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಯೆನೆಪೊಯ ರಿಸರ್ಚ್ಸೆ೦ಟರ್ನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಪರಿಸರ ಅಧ್ಯಯನ ಕೇ೦ದ್ರವು ಯೆನೆಪೊಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ) ಫೋರೆನ್ಸಿಕ್ ವಿಜ್ಞಾನ ಮತ್ತು ವಿಷಶಾಸ್ತೃ ಇಲಾಖೆಯ ಸಹಯೋಗ ದಲ್ಲಿ “ಹಾವುಗಳ ಪೋಷಕರು: ಪರಿಸರಶಾಸ್ತ್ರ, ಸ೦ರಕ್ಷಣೆ ಮತ್ತು ಹಾವು ಕಚ್ಚಿದವರಿಗೆ ಪರಿಹಾರ ವಿಧಾನಗಳು” ಎ೦ಬ ಶೀರ್ಷಿಕೆಯ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಿತ್ತು.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಸಂಭ್ರಮವು ನ.26ರಿಂದ ಜರಗಲಿದೆ. 30ರ ವರೆಗೆ ನಡೆಯಲಿದೆ.
ಪಡೀಲ್ ಮುಖ್ಯ ರಸ್ತೆಯ ಬಳಿ ಕಳೆದ ಹಲವು ವರುಷಗಳಿಂದ ಹೂ ಮಾರಿ ಬೀದಿ ವ್ಯಾಪಾರ ಮಾಡುವ ಮೂಲಕ ಜೀವನ ನಿರ್ವಹಿಸುತ್ತಿರುವ ಚಂದ್ರಹಾಸ್ ಪೂಜಾರಿ ಎಂಬವರಿಗೆ ಕಳೆದ ಕೆಲವು ದಿನಗಳಿಂದ ಸ್ಥಳೀಯ ಮಾಜಿ ಕಾರ್ಪೊರೇಟರ್ ಬಿಜೆಪಿ ಮುಖಂಡರಾದ ವಿಜಯ ಕುಮಾರ್ ಶೆಟ್ಟಿ ಮತ್ತಾತನ ಹೆಸರಲ್ಲಿ ಹಿಂಬಾಲಕರು ಹಪ್ತ ವಸೂಲಿ ಮಾಡುತ್ತಿರುವ ಬಗ್ಗೆ ಚಂದ್ರಹಾಸ್ ಪೂಜಾರಿ ವಿಡಿಯೋ ಮೂಲಕ ಚಿತ್ರಿಸಿದ ಹೇಳಿಕೆಯ ಆರೋಪವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50,000 ರೂ.ಗಳ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಪೋಕ್ಸೋ) ತೀರ್ಪು ನೀಡಿದೆ.
ಜೇಸಿಐ ಪಡುಬಿದ್ರೆ ಇದರ 50ನೇ ವರ್ಷಾಚರಣೆ ಪ್ರಯುಕ್ತ ಉಡುಪಿ ಟೂರಿಸಂ ಮತ್ತು ಜಿಲ್ಲಾಡಳಿತದ ಸಹಯೋಗದಲ್ಲಿ ನ.23 ಮತ್ತು 24ರಂದು ಪಡುಬಿದ್ರಿ ಬೀಚ್ ನಲ್ಲಿ ‘ಕೋಸ್ಟಲ್ ಕಾರ್ನಿವಲ್ ಪಡುಬಿದ್ರಿ- 2024’ ಆಯೋಜಿಸಲಾಗಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಕನಿಷ್ಠ ಒಂದು ಸದಸ್ಯತ್ವವನ್ನು ಮಲೆಕುಡಿಯ ಸಮುದಾಯದವರಿಗೆ ಮೀಸಲಿರಿಸಬೇಕು ಎಂದು ರಾಜ್ಯ ಮಲೆಕುಡಿಯ ಸಂಘ ಒತ್ತಾಯಿಸಿದೆ.