Showing 20 of 3836 posts • Page 144 of 192
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಕನಿಷ್ಠ ಒಂದು ಸದಸ್ಯತ್ವವನ್ನು ಮಲೆಕುಡಿಯ ಸಮುದಾಯದವರಿಗೆ ಮೀಸಲಿರಿಸಬೇಕು ಎಂದು ರಾಜ್ಯ ಮಲೆಕುಡಿಯ ಸಂಘ ಒತ್ತಾಯಿಸಿದೆ.
ವಾಣಿಜ್ಯ ವಿದ್ಯಾರ್ಥಿಗಳು ಪಠ್ಯ ಕಲಿಕೆಯೊಂದಿಗೆ ವೃತ್ತಿಪರ ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳಬೇಕು. ಇದು ಮುಂದಿನ ಉದ್ಯೋಗದ ಸಂದರ್ಭದಲ್ಲಿ ಬಹಳ ಉಪಯೋಗವಾಗುತ್ತದೆ ಎಂದು ಮಂಗಳೂರು ಕರ್ನಾಟಕ ಬ್ಯಾಂಕ್ ನ ಜನರಲ್ ಮ್ಯಾನೇಜರ್ ಶ್ರೀ ರಾಜ ಬಿ.ಎಸ್. ನುಡಿದರು.
ಅಮಾಯಕ ಯುವಕನೊಬ್ಬ ತನ್ನ ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂರು ಜನರ ಪುಂಡರ ಗುಂಪು ಆತನನ್ನು ತಡೆದು ನಿಲ್ಲಿಸಿ ಆತನ ಎರಡು ಕೈಗಳನ್ನು ಹಿಂದಕ್ಕೆ ಲಾಕ್ ಮಾಡಿ ಹಿಡಿದು ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು.ಬಳಿಕ ಆತ ವಿಡಿಯೋದಿಂದ ಮನನೊಂದು ಸಂಜೆ ವೇಳೆಗೆ ಆತ್ಮಹತ್ಯೆಗೆ ಯತ್ನಿಸಿ ಜೀವಣ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಪುತ್ತೂರು ಸರಕಾರಿ ಆಸ್ಪತ್ರೆಗೆ ಕಾದಿರಿಸಿದ 39 ಸೆಂಟ್ಸ್ ಜಮೀನು ಪ್ರೀಯದರ್ಶಿನಿ ಟ್ರಸ್ಟ್ ಗೆ ನೀಡುವಂತೆ ಶಾಸಕ ಅಶೋಕ್ ಕುಮಾರ್ ರೈ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ & ಕಲ್ಚರಲ್ ಹೆರಿಟೇಜ್ (ಇಂಟಾಕ್) ನ ಮಂಗಳೂರು ವಿಭಾಗವು “ದಿ ಮಲ್ಯ ರೆಸಿಡೆನ್ಸ್” ಶೀರ್ಷಿಕೆಯ ಛಾಯಾಚಿತ್ರ ಪ್ರದರ್ಶನವನ್ನು ಗುರುವಾರ ನ.21, 2024 ರಂದು ಕೊಡಿಯಾಲ್ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಉದ್ಘಾಟಿಸಿತು.
ಅಸೌಖ್ಯದಿಂದ ಇತ್ತೀಚೆಗೆ ನಿಧನರಾದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ, ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು ಅವರಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಭೆ ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆಯಿತು.
ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಮತ್ತೆ ಏರಿಕೆ ಕಡೆ ಮುಖ ಮಾಡಿದೆ. ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಏರುಮುಖದತ್ತ ಸಾಗುತ್ತಿದ್ದು ಡಬ್ಬಲ್ ಚೋಲ್ಗೆ ಮಾರುಕಟ್ಟೆಯಲ್ಲಿ ಬೇಡಿಕೆ ಸೃಷ್ಟಿಯಾಗಿದೆ.
ಉಪ ಚುನಾವಣೆಯ ಫಲಿತಾಂಶ ವಿಚಾರವಾಗಿ ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.
ಶಿಕ್ಷಣ ಕೇವಲ ಪಠ್ಯ ಸಂಗತಿಗಳನ್ನು ತಿಳಿಸಿದರೆ ಸಾಲದು. ಭಾರತೀಯತೆ, ದೇಸೀಯ ಕಲೆಗಳನ್ನೂ ಮಕ್ಕಳಿಗೆ ಅರ್ಥ ಮಾಡಿಸಿಕೊಡಬೇಕು.
ನಗರಕ್ಕೆ ಪ್ರವೇಶ ಪಡೆಯುವ ಪಂಪ್ ವೆಲ್ – ಪಡೀಲ್ ಮುಖ್ಯ ರಸ್ತೆ ಕಾಂಕ್ರೀಟ್ ಕಾಮಗಾರಿ ಸುಮಾರು ಮೂರು ವರ್ಷಗಳ ಹಿಂದೆ ಆರಂಭ ಗೊಂಡಿದ್ದು, ಇನ್ನೂ ಅಪೂರ್ಣ ಸ್ಥಿತಿಯಲ್ಲಿದೆ. ಅರೆ ಬರೆ ಕಾಮಗಾರಿಯ ಪರಿಣಾಮ ಈ ರಸ್ತೆಯಲ್ಲಿ ವಾಹನ ಸವಾರರಿಗೆ ನಿತ್ಯ ಟ್ರಾಫಿಕ್ ಜಾಮ್ ಬಿಸಿ ತಪ್ಪುತ್ತಿಲ್ಲ.
ಬೆಳ್ಳಂ ಬೆಳಗ್ಗೆ ಮಂಗಳೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ ನಡೆಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ 5ನೆ ಜಿಲ್ಲಾ ಸಮ್ಮೇಳನದ ಲಾಂಛನವನ್ನು ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ, ಸಮ್ಮೇಳನ ಯಶಸ್ವಿ ಆಗಲಿ ಎಂದು ಶುಭ ಹಾರೈಸಿದರು.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕುಮಾರ್ ಕೋಡಿಕಲ್ ಅವರು ಮಂಗಳವಾರ ರಾತ್ರಿ 12.30ರ ಸುಮಾರಿಗೆ ಪಂಪ್ ಹೌಸ್ ಗಳಿಗೆ ದಿಢೀರ್ ಭೇಟಿ ನೀಡಿದರು.
ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ “ಮುಂದಿನ ಪೀಳಿಗೆಯ ಶಕ್ತಿ ಸಂಗ್ರಹ: ಸುಧಾರಿತ ಎಲೆಕ್ಟ್ರಾನಿಕ್ಸ್ ಮತ್ತು ಸಂವೇದಕ ತಂತ್ರಜ್ಞಾನಗಳ ಸಂಯೋಜನೆ” ವಿಷಯದ ಕುರಿತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಪ್ರಾಯೋಜಿತ ಆರು ದಿನಗಳ ಅಟಲ್ ಎಫ್.ಡಿ.ಪಿ. ಕಾರ್ಯಾಗಾರ ಮತ್ತು ತರಬೇತಿ ಶಿಬಿರ ಕಾರ್ಯಕ್ರಮದ ಉದ್ಘಾಟನೆಯನ್ನು ಆಯೋಜಿಸಲಾಯಿತು.
“ಸುರತ್ಕಲ್ ರೈಲ್ವೇ ಮೇಲ್ಸೇತುವೆ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ಕಾಮಗಾರಿ ನಡೆಸಲು 78 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದರೂ ಕಾಮಗಾರಿ ನಡೆಸಲಾಗಿಲ್ಲ. ಸಂಬಂಧಪಟ್ಟ ಮನಪಾ ಸದಸ್ಯರಿಂದ ಹಿಡಿದು ಶಾಸಕರವರೆಗೆ ಜನರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದ್ದಾರೆ.
ನಂತೂರು ಜಂಕ್ಷನ್ ಸಮೀಪವಿದ್ದ 99 ಮರಗಳನ್ನು ಅರಣ್ಯ ಇಲಾಖೆ ಅನುಮತಿ ಪಡೆದು, ತೆರವು ಮಾಡಲಾಗಿದೆ. ಜಂಕ್ಷನ್ ಸಮೀಪದ ಅಪಾರ್ಟ್ಮೆಂಟ್ ಬಳಿ 2 ಮೀ. ಬಿಟ್ಟು ಭೂಮಿ ಸಮತಟ್ಟು ಮಾಡಲಾಗಿದೆ.
ಡ್ರಾ ಸಂದರ್ಭ ಗ್ರಾಹಕರಿಗೆ ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಡ್ರೀಮ್ ಡೀಲ್ ಗ್ರೂಪ್ ಸಂಸ್ಥೆಯಿಂದ ಇಬ್ಬರು ಸಿಬಂದಿಗಳ ಮೇಲೆ ಕೇಸು ದಾಖಲಿಸಲಾಗಿದ್ದು, ಸಂಸ್ಥೆಯಿಂದ ವಜಾಗೊಳಿಸಲಾಗಿದೆ.
‘ಪ್ರಸ್ತುತ ದಿನಗಳಲ್ಲಿ ಪಠ್ಯವನ್ನು ಓದಿ ಜ್ಞಾನಗಳಿಸುವುದರೊಂದಿಗೆ ಪ್ರಾಯೋಗಿಕ ಜ್ಞಾನವೂ ಅಗತ್ಯವೆಂಬುದನ್ನು ನಾವು ಅರಿಯಬೇಕು. ಉದ್ಯೋಗದಲ್ಲಿ ಉನ್ನತಿ ಪಡಯಲು ಅಗತ್ಯ ಕೌಶಲ್ಯಗಳನ್ನು ಕರಗತಗೊಳಿಸುವುದು ಅತ್ಯಗತ್ಯ’ ಎಂದು ಬೆಂಗಳೂರಿನ ಕಿಪ್ಲೋ ಸಂಸ್ಥೆಯ ಸಂಸ್ಥಾಪಕ ಮತ್ತು ಸಿಇಒ ಪ್ರೀತಂ ಪೂವಾನಿ ಅಭಿಪ್ರಾಯಪಟ್ಟರು.
400 ಕೆ.ವಿ. ವಿದ್ಯುತ್ ಪ್ರಸರಣ ತಂತಿ ಅಳವಡಿಸಲು ಟವರ್ ನಿರ್ಮಾಣಕ್ಕೆ ಗುತ್ತಿಗೆ ಕಂಪೆನಿ ಅಧಿಕಾರಿಗಳು ಮುಂದಾಗುತ್ತಿದ್ದಂತೆಯೇ ರೈತ ಸಂಘದ ನೇತೃತ್ವದಲ್ಲಿ ಸ್ಥಳೀಯ ಸಂತ್ರಸ್ತ ರೈತರು ಕಾಮಗಾರಿ ನಿಲ್ಲಿಸಿ ಪ್ರತಿಭಟಿಸಿದ ಘಟನೆ ಬಂಟ್ವಾಳ ಕಸ್ಬ ಗ್ರಾಮದ ಅಗ್ರಹಾರ್ ಬಳಿಯ ದರ್ಬಳಕೆ ಎಂಬಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ಪ್ರಗತಿ ಸ್ಟಡಿ ಸೆಂಟರ್ 18 ಸಂವತ್ಸರಗಳನ್ನು ಪೂರೈಸಿದ ಸಂಭ್ರಮದಲ್ಲಿ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಹಾಗೂ ಪದವಿಪೂರ್ವ ವಿಭಾಗದ ಸಾಂಸ್ಕೃತಿಕ ಸ್ಪರ್ಧೆಗಳ ಪ್ರಗತಿ ವೈಭವ-2024 ಇಲ್ಲಿನ ಪುರಭವನದಲ್ಲಿ ನವೆಂಬರ್ 17 ರಂದು ನಡೆಯಿತು.