Showing 20 of 3836 posts • Page 147 of 192
ಬೆಂಗಳೂರಿನ ಖ್ಯಾತ ವಿಮಾನಯಾನ ತರಬೇತಿ ಸಂಸ್ಥೆ ಬರ್ಡ್ ಏವಿಯೇಷನ್ ಅಧಿಕೃತ ಪ್ರಾಂಚೈಸಿ ಸಂಸ್ಥೆಯು ಪುತ್ತೂರಿನ ಎ.ಪಿ.ಎಂ.ಸಿ ರಸ್ತೆಯ ಮಾನೈ ಅರ್ಕ್ ಕಟ್ಟಡದಲ್ಲಿ ಶ್ರೀ ಪ್ರಗತಿ ವಿಸ್ತಾರ ಏವಿಯೇಷನ್ ಆ್ಯಂಡ್ ಮ್ಯಾನೇಜ್ಮೆಂಟ್ ಎಂಬ ಹೆಸರಿನೊಂದಿಗೆ ಮೊದಲ ಬ್ಯಾಚ್ ನವೆಂಬರ್ 13 ರಂದು 42 ವಿದ್ಯಾರ್ಥಿಗಳೊಂದಿಗೆ ಆರಂಭಗೊಂಡಿತು.
ಮಿಲಾಗ್ರಿಸ್ ಕಾಲೇಜು ಮಂಗಳೂರು ಇದರ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಐಕ್ಯೂ ಎಸಿಯ ಸಹಯೋಗದೊಂದಿಗೆ ಒಂದು ದಿನದ ಟೆಕ್ಟೋನಿಕ್ ಪಿಯುಸಿ ವಿದ್ಯಾರ್ಥಿಗಳಿಗಾಗಿ ರಾಷ್ಟ್ರ ಮಟ್ಟದ ಐಟಿ ಫೆಸ್ಟ್ ಉದ್ಘಾಟನೆಗೊಂಡಿತು.
ಬೈಕ್ ಮತ್ತು ಕಾರು ನಡುವೆ ಅಪಘಾತ ನಡೆದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ಭೀಕರ ಅಪಘಾತದ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ‘ಕಾಸ್ಕ್’ ಸಂಸ್ಥೆಯಿಂದ ನವೆಂಬರ್ 10, 2024 ರಂದು ಆರೋಗ್ಯ ತಪಾಸಣಾ ಶಿಬಿರವು ಜರಗಿತು.
ದಯಾ ಮರಣ ಕೋರಿ ಅರ್ಜಿ ಸಲ್ಲಿಸಿದ ವೃದ್ಧ ದಂಪತಿಯ ಜೋಪಡಿ ಧ್ವಂಸಗೊಳಿಸಿದ ಅಮಾನವೀಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೌಕ್ರಾಡಿಯಲ್ಲಿ ನಡೆದಿದೆ.
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಮುಚ್ಚಿಲಪದವು ಎಂಬಲ್ಲಿ ನಡೆದಿದೆ.
ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಏಕದಿನ ಅಂತರ್ ಪಿ ಯು ಕಾಲೇಜು ಸ್ಪರ್ಧೆ ಕ್ಯಾಂಪಸ್ ಕ್ರೋಮ ನವೆಂಬರ್ 11 ರಂದು ಪಿ ಎ ಕ್ಯಾಂಪಸ್ ನಲ್ಲಿ ನೆರವೇರಿತು.
ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಲ ರವರು ಪುತ್ತೂರು ಮಂಡಲ ಪ್ರವಾಸ ಮಾಡಿ ಅಟಲ್ ಸದಸ್ಯತನ ನೋಂದಾವಣೆ ಯ ಪ್ರಗತಿ ಬಗ್ಗೆ ಮಾಹಿತಿ ಪಡೆದರು.
ಸಂಕಷ್ಟದಲ್ಲಿ ಅಡಕೆ ಬೆಳೆಗಾರರ ಕೈ ಹಿಡಿಯುತ್ತಾ ಬಂದಿರುವ ಹವಾಮಾನ ಆಧರಿತ ಬೆಳೆ ವಿಮೆ ಯೋಜನೆಯಲ್ಲಿ ಈ ಬಾರಿ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಅಡಕೆ ಮತ್ತು ಕಾಳುಮೆಣಸು ಬೆಳೆಗಾರರಿಗೆ 69,44,10,840 ರೂ. ಖಾತೆಗೆ ಜಮೆಯಾಗಿದೆ. ಇಡೀ ರಾಜ್ಯದಲ್ಲೇ ದ.ಕ. ಜಿಲ್ಲೆಗೆ ಹೆಚ್ಚಿನ ವಿಮಾ ಮೊತ್ತ ಪಾವತಿಯಾಗಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.
ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಹಾದಿಯಲ್ಲಿ ಮಂಗಳೂರಿನಿಂದ 8 ಕಿ.ಮೀ ದೂರದಲ್ಲಿ ಪ್ರಕೃತಿಯ ಮಡಿಲಲ್ಲಿ ಕಂಗೊಳಿಸುವ ಬೊಂದೆಲ್ ಎಂಬಲ್ಲಿ ರಸ್ತೆಯ ಬಲ ಪಾರ್ಶ್ವದಲ್ಲಿ ಇರುವ ಸಂತ ಲಾರೆನ್ಸರ ಸುಂದರ ದೇವಾಲಯ ಹಾಗೂ ಪುಣ್ಯಕ್ಷೇತ್ರ ಹಲವಾರು ಭಕ್ತಾಭಿಮಾನಿಗಳನ್ನು ತನ್ನತ್ತ ಸೆಳೆಯುತ್ತಿದೆ.
ಬಾಲಕಿಯರ ಹಾಸ್ಟೆಲ್ ಒಳಗೆ ಆಗಂತುಕ ನುಗ್ಗಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಪಡೀಲ್ ನಲ್ಲಿರುವ ಹಾಸ್ಟೆಲ್ ನವೆಂಬರ್ 6 ರಂದು ನಡೆದಿದೆ.
ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಮೋದಿ ಪರ ಮತಯಾಚನೆ ಆರೋಪ ಕೇಳಿಬಂದಿದ್ದು, ಚುನಾವಣಾಧಿಕಾರಿಗಳು ದಾಖಲಿಸಿದ್ದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಡಬ್ಬಲ್ ಬೋಲ್ ಧಾರಣೆ 500 ರೂ. ಗಡಿ ದಾಟಿ ಮುನ್ನುಗ್ಗಿದೆ. ಜೊತೆಗೆ ಸಿಂಗೇಲ್ ಚೋಲ್ ಧಾರಣೆಯೂ ಏರಿಕೆ ಕಂಡಿದೆ.
ಬೆಳೆಯಲಾದ ನಾಟಿ ಬಿತ್ತನೆ ಮಾಡಲಾಗಿದ್ದ ಭತ್ತದ ಕಟಾವು ಕಾರ್ಯ ಮಂಗಳೂರು ಸಹಿತ ಮೂಡುಬಿದಿರೆ, ಮೂಲ್ಕಿ ಹಾಗೂ ಉಳ್ಳಾಲ ತಾಲೂಕಿನಲ್ಲಿ ಆರಂಭವಾಗಿದೆ.
ನವಂಬರ್ ತಿಂಗಳ ಎರಡು ವಾರಗಳ ಕಾಲ ನಡೆಯುವ ಯೋಗ ಶಿಬಿರವು ಮಂಗಳಾದೇವಿ ಸಮೀಪ ರಾಮಕೃಷ್ಣ ಮಠದಲ್ಲಿ ಮಠದ ಅಧ್ಯಕ್ಷರಾದ ಜಿತಕಾಮಾನಂದಜೀ ಮಹಾರಾಜ್ ಉದ್ಘಾಟಿಸಿದರು.
ಆಧುನಿಕ ಶಿಕ್ಷಣದ ಜೊತೆಗೆ ಸನಾತನ ಧರ್ಮದ ಜ್ಞಾನವೂ ಸಿಕ್ಕಿದಾಗ ಶಿಕ್ಷಣ ವ್ಯವಸ್ಥೆಗೆ ನ್ಯಾಯ ಕೊಟ್ಟಂತಾಗುತ್ತದೆ. ರಸಾಯನಶಾಸ್ತ್ರ, ಭೌತಶಾಸ್ತ್ರದಂತಹ ವಿಷಯಗಳ ಜತೆಗೆ ಧರ್ಮ ಶಿಕ್ಷಣವನ್ನೂ ಕೊಟ್ಟಾಗ ನಿಜವಾದ ಶಿಕ್ಷಣ ಸಾಕಾರಗೊಳ್ಳುತ್ತದೆ. ಧರ್ಮದ ಜೊತೆಗೆ ಜಾಗೃತಿಯನ್ನೂ ಮೂಡಿಸುವುದು ಅಗತ್ಯ ಎಂದು ಪುಣೆಯ ದೀಪಕ್ ಫರ್ಟಿಲೈಝರ್ಸ್ ಆಂಡ್ ಕೆಮಿಕಲ್ಸ್ನ ವಿಶ್ರಾಂತ ಜನರಲ್ ಮ್ಯಾನೇಜರ್ ಬಾಲಚಂದ್ರ ನಟ್ಟೋಜ ಹೇಳಿದರು.
9ನೇ ನವೆಂಬರ್ 2024 ರಂದು ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಸಿನರ್ಜಿಯಾ 2024ರ ಸಮಾರೋಪ ಸಮಾರಂಭದಲ್ಲಿ 3 ಅತ್ಯುತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿದೆ.
ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ನ.13 ರಂದು ಮಂಗಳೂರಿನ ಉರ್ವಾಸ್ಟೋರ್ ನಲ್ಲಿರುವ ತುಳು ಭವನದಲ್ಲಿ ದ.ಕ.ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ಚಿತ್ರಕಲಾ ಸ್ಪರ್ಧೆ ನಡೆಯಲಿದೆ.
ಬಂಟರ ಯಾನೆ ನಾಡವರ ಮಾತೃ ಸಂಘ (ರಿ.) ಮಂಗಳೂರು ತಾಲೂಕು ಸಮಿತಿ, ಮಹಿಳಾ ಘಟಕ ಬಂಟ್ಸ್ ಹಾಸ್ಟೆಲ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರ ಮಂಗಳೂರು ಹಾಗೂ ಎಲ್ಲಾ ಶಾಲಾ ಕಾಲೇಜು ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ಮಾದಕದ್ರವ್ಯ ವ್ಯಸನಮುಕ್ತ ಮಂಗಳೂರು ಜಾಥಾ 14 ರಂದು ಗುರುವಾರ ಸಂಜೆ ೩ ಗಂಟೆಗೆ ಎಸ್.ಡಿ.ಎಂ. ಕಾನೂನು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ವಿಟ್ಲ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ಮನೆಯೊಂದರ ಅಡಿಸ್ಥಳದ ಹಕ್ಕು ಪತ್ರ ಪಡೆಯುವ ವಿಚಾರದಲ್ಲಿ ರಾಜಕೀಯ ಮುಖಂಡರ ಬೆಂಬಲಿಗರಿಂದ ದಾಂಧಲೆ ನಡೆದಿದ್ದು, ಮೇಜಿನ ಗಾಜನ್ನು ಪುಡಿಗೈದ ಘಟನೆ ಸೋಮವಾರ ನಡೆದಿದೆ.