Showing 20 of 3838 posts • Page 149 of 192
ಮನುಷ್ಯನಿಗೆ ಜೀವಿತಾವಧಿಯಲ್ಲಿ ಉತ್ತಮ ಆರೋಗ್ಯ ಶಿಕ್ಷಣ ಮತ್ತು ಉದ್ಯೋಗ ಅಗತ್ಯ . ಹಾಗಾಗಿ ಅವುಗಳ ಕಡೆ ಗಮನ ಕೊಡುವುದು ವರ್ತಮಾನದ ಅಗತ್ಯ ಎಂದು ಶಾಸಕ ಅಶೋಕ ಕುಮಾರ್ ರೈ ಹೇಳಿದರು.
ನವ ದೆಹಲಿಯ ಪಬ್ಲಿಕ್ ರಿಲೇಶನ್ ಕೌನ್ಸಿಲ್ ಒಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಕೇಂದ್ರ ವಿದ್ಯುತ್ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯದ ರಾಜ್ಯ ಸಚಿವ ಶ್ರೀಪಾದ್ ಎಸ್ಸೋ ನಾಯಕ್ ಪ್ರದಾನ ಮಾಡಿದರು.
‘ಮಾನವ ಜನಾಂಗವು ರಕ್ತ ಹಾಗೂ ಜೀವದ ಮಹತ್ವವನ್ನರಿತು ರಕ್ತದಾನವೆಂಬ ಪುಣ್ಯಕಾರ್ಯದಲ್ಲಿ ಪಾಲ್ಗೊಳ್ಳಬೇಕು’ ಎಂದು ಲಯನ್ಸ್ ಜಿಲ್ಲೆ ೩೧೭ ಸಿ ಯ ಜಿಲ್ಲಾ ರಕ್ತದಾನ ಸಂಯೋಜಕ ಲಯನ್ ಆನಂದ ಗಾಣಿಗ ಅಭಿಪ್ರಾಯಪಟ್ಟರು.
ಚೆಂಬುಗುಡ್ಡೆ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಮಹಿಳೆಯು ದಾರುಣವಾಗಿ ಮೃತ್ಯುವಾದ ಹಿನ್ನೆಲೆಯಲ್ಲಿ ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ನೇತೃತ್ವದಲ್ಲಿ ಚೆಂಬುಗುಡ್ಡೆಯಲ್ಲಿ ಪ್ರತಿಭಟನೆ ನಡೆಯಿತು.
ಕರಾವಳಿಯ ಕಡಲತಡಿಯ ಪುಣ್ಯ ಭೂಮಿಯಲ್ಲಿ ಜನಿಸಿ, ಕನ್ನಡ ಸಾರಸ್ವತ ಲೋಕದ ಬೆಳ್ಳಿತಾರೆಯಾಗಿ ಬೆಳಗಿ, ಕನ್ನಡದ ಶ್ರೇಷ್ಠ ಕತೆಗಾರರಾಗಿ, ನಟರಾಗಿ,ನಾಟಕಕಾರರಾಗಿ, ಪತ್ರಕರ್ತರಾಗಿ, ಬರಹಗಾರರಾಗಿ, ಕನ್ನಡ ತುಳು ಚಿತ್ರಗಳ ನಿರ್ದೇಶಕರಾಗಿ ಸಾರಸ್ವತ ಲೋಕದಲ್ಲಿ ಮಿಂಚಿ ಮರೆಯಾದ ಹೆಮ್ಮೆಯ ಧೀಮಂತ ಸಾಹಿತಿ ವಿಶುಕುಮಾರ್ರವರ ಸ್ಮರಣಾರ್ಥ ಯುವವಾಹಿನಿಯು ಕಳೆದ 20 ವರ್ಷಗಳಿಂದ ವಿಶುಕುಮಾರ್ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ.
ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಸಿನರ್ಜಿಯಾ 2024, ಸಹ್ಯಾದ್ರಿ ಆಯೋಜಿಸಿರುವ ಬಹು ನಿರೀಕ್ಷಿತ ವಾರ್ಷಿಕ ನಾವೀನ್ಯತೆ ಮತ್ತು ಉದ್ಯಮಶೀಲತಾ ಕಾರ್ಯಕ್ರಮವು ಇಂದು ರೋಮಾಂಚಕ ಮತ್ತು ಸಾಂಸ್ಕೃತಿಕ ಉದ್ಘಾಟನೆಯೊಂದಿಗೆ ಅಧಿಕೃತವಾಗಿ ಎಂಫಾಸಿಸ್ ಫೌಂಡೇಶನ್ ಸಹ ಪ್ರಯೋಜಕತ್ವ ದೊಂದಿಗೆ ಪ್ರಾರಂಭವಾಯಿತು.
ಶ್ರೀ ರಾಮಸೇನೆ ಮಂಗಳೂರು ಇದರ ವತಿಯಿಂದ 21 ನೇ ವರ್ಷದ ದತ್ತಮಾಲಾ ಅಭಿಯಾನದ ಪ್ರಯುಕ್ತ ೬ ನೇ ವರ್ಷದ ದತ್ತ ದೀಪೋತ್ಸವ ಕಾರ್ಯಕ್ರಮ ಶ್ರೀರಾಮಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಅಡ್ಯಾರ್ ಇವರ ನೇತೃತ್ವದಲ್ಲಿ ಮಂಗಳೂರಿನ ಲಕ್ಷೀಭಾಗ್ ಶೇಡಿಗುಡ್ಡೆಯ ಶ್ರೀ ಲಕ್ಷ್ಮೀ ನಾರಾಯಣೀ ದೇವಸ್ಥಾನದಲ್ಲಿ ನೆರವೇರಿತು.
ವಖ್ಫ್ ಅಂದ್ರೆ ಹಿಂದೂ ಮುಸ್ಲಿಮ್ ಕದನವೋ , ರೈತರ ಭೂಮಿ ಕಬಲಿಸುವ ಹುನ್ನಾರವೋ, ಎಲ್ಲವೂ ಮರೆಮಾಚಿ ಗದ್ದಲ ಎಬ್ಬಿಸಲಾಗಿದೆ. ಅಂಕಿ ಅಂಶ ಇಟ್ಟು 9 ಲಕ್ಷ ಕೋಟಿಯ ವಖ್ಫ್ ಅಸ್ತಿ ದೇಶದಲ್ಲಿ ಇದೆ ಎಂದು ಕೇಂದ್ರ ಕಾನೂನು ಮಂತ್ರಿಯೇ ಹೇಳಿದ್ದಾರೆ.
ಹೈಕೋರ್ಟ್ ಆದೇಶದಂತೆ ಲೋಕಾಯುಕ್ತ ತನಿಖಾಧಿಕಾರಿ ಮುಂದೆ ಹಾಜರಾಗಿ ಅವರ ಪ್ರಶ್ನೆಗೆ ಉತ್ತರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ಸಂಸ್ಥೆಗೆ ಹಾಗೂ ಪ್ರಜಾಪ್ರಭುತ್ವಕ್ಕೆ ಗೌರವ ತೋರಿದ್ದಾರೆ ಇದನ್ನು ಕೂಡ ಬಿಜೆಪಿಯವರು ಗೇಲಿ ಮಾಡುತ್ತಿರುವುದು ಖಂಡನಾರ್ಹ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಟೀಕಿಸಿದರು.
ಸಾಮಾನ್ಯ ಸಾಮರ್ಥ್ಯದ ಯುವಕರಲ್ಲಿ ಸಿ.ಎ. ಪರೀಕ್ಷಾಪೂರ್ವ ತರಬೇತಿ ಆತ್ಮವಿಶ್ವಾಸ ಬೆಳೆಸುವ, ಹಾಗೂ ಎಲ್ಲಾ ಆಸಕ್ತರಿಗೆ ಮುಕ್ತವಾಗಿರುವ, ವಿಶಿಷ್ಟ ರೀತಿಯ ತರಬೇತಿ ” ಸಿ.ಎ. ಪವರ್ 25- ಸಿ.ಎ ಇಂಟರ್ ಗ್ರೂಪ್ 1 ಶಿಬಿರದ ಉದ್ಘಾಟನಾ ಸಮಾರಂಭ ದಿ. 07-11-2024 ರಂದು ವಿಶ್ವ ಕೊಂಕಣಿ ಕೇಂದ್ರದಲ್ಲಿ ಜರುಗಿತು.
ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ವತಿಯಿಂದ ನಿಟ್ಟೆ ಹವಾಮಾನ ಕ್ರಿಯಾ ಯೋಜನೆ – 2024 (Nitte Climate Action Program 2024) ಕಾರ್ಯಕ್ರಮಕ್ಕೆ ನಗರದ ಅಂಬೇಡ್ಕರ್ ಭವನದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಯಿತು.
ಹಿರಿಯರು ಮಠ, ಮಂದಿರಗಳಿಗೆ ಉಳಿವಿಗೆ ಜಮೀನು ಮೀಸಲಿಟ್ಟಿದ್ದರು. ಆದರೆ ಇಂದು ಮಠ, ಮಂದಿರಗಳ, ಕೃಷಿಕರ ಜಮೀನು ವಕ್ಸ್ ಆಸ್ತಿಯಾಗಿ ಪರಿವರ್ತನೆಗೊಂಡಿವೆ.
ಸರ್ವಿಸ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್ ಒಂದರಲ್ಲಿ ಕಳ್ಳನೊಬ್ಬ ಕಂಡಕ್ಟರ್ ಪರ್ಸ್ನಿಂದ ಕಲೆಕ್ಷನ್ ಹಣವನ್ನ ಕದ್ದು ಪರಾರಿ ಆಗಿದ್ದಾನೆ.
ಪ್ರವೀಣ್ ಮಂಗಳೂರು, ಮೂಸಾ ಶರೀಫ್ ರವರ ನಾಯಕತ್ವದಲ್ಲಿ ಭೇಟಿ ಬಚಾವೋ ಎಂಬ ಧ್ಯೇಯವಾಕ್ಯದಡಿಯಲ್ಲಿ “ದಕ್ಷಿಣದಿಂದ ಉತ್ತರಕ್ಕೆ” – (ಮಂಗಳೂರಿನಿಂದ ದೆಹಲಿ) ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.
ಶಕ್ತಿ ಪ. ಪೂ. ಕಾಲೇಜಿನ ವಿದ್ಯಾರ್ಥಿ ಲಿಖಿತ್ ಎಸ್. ಸುವರ್ಣ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗ ಇವರು ಪದವಿಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ ದ.ಕ.ಜಿಲ್ಲಾ ಮಟ್ಟದ ಬಾಲಕ ಮತ್ತು ಬಾಲಕಿಯರ ಕರಾಟೆಯಲ್ಲಿ ಭಾಗವಹಿಸಿ ಕಂಚಿನ ಪದಕವನ್ನು ಪಡೆದಿರುತ್ತಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಮುಂಬೈ ಬಂಟರ ಸಂಘದ ಸಹಯೋಗದಲ್ಲಿ ಮುಂಬೈಯ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಜಾಗತಿಕ ಮಟ್ಟದ “ವಿಶ್ವ ಬಂಟರ ಸಮಾಗಮ”ಬೃಹತ್ ಕಾರ್ಯಕ್ರಮ ಡಿಸೆಂಬರ್ 7 ರಂದು ನಡೆಯಲಿದೆ.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿನಿ, 9ನೇ ತರಗತಿಯ ನಿಹಾರಿಕಾ ಎಂ ಅವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ),
ಮಿಲಾಗ್ರಿಸ್ ಸಮೂಹ ಸಂಸ್ಥೆಗಳ ಘಟಕವಾದ ಮಿಲಾಗ್ರಿಸ್ ನರ್ಸಿಂಗ್ ಕಾಲೇಜಿನ ಮೊದಲ ಬ್ಯಾಚ್ನ ಬಿಎಸ್ಸಿ ನರ್ಸಿಂಗ್ ಕೋರ್ಸ್ ನ ಉದ್ಘಾಟನೆಯು ನವೆಂಬರ್ 4 ಸೋಮವಾರದಂದು ನಡೆಯಿತು.
ಫ್ಯಾಲೆಸ್ತೀನ್ ಪರ ಪ್ರತಿಭಟನೆ ನಡೆಸಿದ ಎಡಪಂಥೀಯ ನಾಯಕರ ವಿರುದ್ದ ಎಫ್ಐಆರ್ ದಾಖಲಾಗಿದೆ.
ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘ ಇದರ ಮಹಿಳಾ ವಿಭಾಗ, ಕೆಎಂಸಿ ಆಸ್ಪತ್ರೆ ಮಂಗಳೂರು ಅವರೊಂದಿಗೆ ಸಹಯೋಗದಲ್ಲಿ, ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿ ಮತ್ತು ತಪಸ್ಯಾ ಫೌಂಡೇಶನ್ ಅವರ ಬೆಂಬಲದೊಂದಿಗೆ, ಮಹಿಳಾ ಸ್ತನ ಮತ್ತು ಗರ್ಭಾಶಯದ ಕ್ಯಾನ್ಸರ್ ಮತ್ತು ಮಾನಸಿಕ ಆರೋಗ್ಯ ಕಲ್ಯಾಣ ಕುರಿತು ಜಾಗೃತಿ ಕಾರ್ಯಕ್ರಮವನ್ನು ಯೆಯ್ಯಡಿಯ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಹಾಲ್ನಲ್ಲಿ ನವೆಂಬರ್ 6, 2024 ರಂದು ಆಯೋಜಿಸಿತು.