Showing 20 of 3816 posts • Page 15 of 191
ಸೀ ಬ್ರಿಜ್ ಮ್ಯಾರಥಾನ್ ಇದೆಯೆಂಬ ಹೆಸರಿನಲ್ಲಿ ನಕಲಿ ಪೋಸ್ಟ್ ಒಂದನ್ನು ಜಾಲತಾಣದಲ್ಲಿ ಹರಿಯ ಬಿಡಲಾಗಿದ್ದು ಸೈಬರ್ ವಂಚಕರದ್ದೇ ಜಾಲ ಎನ್ನುವ ಶಂಕೆ ವ್ಯಕ್ತವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಸಂಭವಿಸಿರುವ ಸರಣಿ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ತನಿಖೆಯನ್ನು ತೀವ್ರಗೊಳಿಸಿದೆ. ಈ ಕೃತ್ಯಗಳಲ್ಲಿ ಭಾಗಿಯಾಗಿರುವ ಶಂಕೆಯ ಮೇಲೆ ವ್ಯಕ್ತಿಯೊಬ್ಬನ ಭಾವಚಿತ್ರವನ್ನು ಬಿಡುಗಡೆ ಮಾಡಲಾಗಿದ್ದು, ಶಂಕಿತನ ಪತ್ತೆಗಾಗಿ ಸಾರ್ವಜನಿಕರ ಸಹಕಾರವನ್ನು ಕೋರಲಾಗಿದೆ.
ಏನಾದರೂ ಆದರೆ ರಾಜಕಾರಣಿಗಳು ಬರ್ತಾರೆ. ಆದರೆ ನಮ್ಮ ಸಮಸ್ಯೆ ಯಾರಿಗೂ ಕಾಣುವುದಿಲ್ಲ. ಗ್ಯಾಸ್ ಸಮಸ್ಯೆಯಿಂದ ಇಷ್ಟೊಂದು ಸಮಸ್ಯೆ ಆಗಿದೆ. ಜಿಲ್ಲಾಧಿಕಾರಿ, ಸಂಸದರು ನಮ್ಮ ಸಮಸ್ಯೆಯನ್ನ ಸರಿಪಡಿಸಬೇಕು. ಪಂಪ್ಗಳಲ್ಲಿ ಗ್ಯಾಸ್ ಖಾಲಿಯಾಗಿದ್ದು, ದುಡಿಮೆ ಇಲ್ಲದಂತೆ ಆಗಿದೆ.
ವಿದ್ಯೆ ಕಲಿಯಲು ಬರುವ ಪವಿತ್ರ ತಾಣಗಳು ಇಂದು ರಣರಂಗವಾಗುತ್ತಿವೆ. ಮಂಗಳೂರಿನ ಪ್ರತಿಷ್ಠಿತ ಪಿ.ಎ. ಕಾಲೇಜಿನಲ್ಲಿ (P.A. College) ಪ್ರತಿ ತಿಂಗಳು ಐದಾರು ಬಾರಿ ರಾಗಿಂಗ್ ಮತ್ತು ಗುಂಪು ಘರ್ಷಣೆಗಳು ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ.
ತುಳುನಾಡಿನ ಪವಿತ್ರ ಹಾಗೂ ವಿಶಿಷ್ಟ ಆಚರಣೆಗಳಲ್ಲಿ ಒಂದಾದ ‘ಸಿರಿ ಆಲಡೆ’ ಉತ್ಸವವು ನಿಡಿಗಲ್ನ ಶ್ರೀ ಲೋಕನಾಥೇಶ್ವರ ಸಿರಿ ಕ್ಷೇತ್ರದಲ್ಲಿ ಭಕ್ತಿ-ಸಂಭ್ರಮದಿಂದ ಜರುಗಿತು. ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ಈ ಅಪರೂಪದ ಧಾರ್ಮಿಕ ವಿಧಿಯ ಸಡಗರಕ್ಕೆ ಸಾಕ್ಷಿಯಾದರು.
ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳಿಂದಾಗಿ ಪಿಲಿಕುಳ ನಿಸರ್ಗಧಾಮದಲ್ಲಿರುವ ಜೈವಿಕ ಉದ್ಯಾನವನವು ಏಪ್ರಿಲ್ 1 ರಿಂದ ಏಪ್ರಿಲ್ 8 ರವರೆಗೆ ಸಾರ್ವಜನಿಕರಿಗೆ ಮುಚ್ಚಲ್ಪಡುತ್ತದೆ.
ಬೈಕಿಗೆ ಲಾರಿಯೊಂದು ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ಸಂಜೆ ಕಂಬಳಪದವು ಬಳಿ ನಡೆದಿದೆ. ಗಂಭೀರ ಗಾಯಗೊಂಡ ಯುವಕನನ್ನು ನಡುಪದವಿನ ಸುಶಾಂತ್ (23 ) ಎಂದು ಗುರುತಿಸಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.
ಜನಸೇವೆಯ ನಿಜವಾದ ಅರ್ಥವನ್ನು ಜೀವನದಲ್ಲಿ ತೋರಿಸುವ ನಾಯಕರು ವಿರಳ. ಆದರೆ ಅಂತಹ ಅಪರೂಪದ ನಾಯಕತ್ವದ ಜೀವಂತ ರೂಪವಾಗಿ ಹೊರಹೊಮ್ಮಿರುವವರು ಯು.ಟಿ.ಖಾದರ್ ಅವರ ನಾಯಕತ್ವವು ಕೇವಲ ರಾಜಕೀಯದ ಮಿತಿಗಳಲ್ಲಿ ಸೀಮಿತವಾಗಿಲ್ಲ, ಅದು ಮಾನವೀಯತೆ, ಕಾಳಜಿ, ನಿಷ್ಠೆ ಮತ್ತು ನಿಜವಾದ ಸೇವಾಭಾವದ ಮಹಾನ್ ಸಂಕೇತವಾಗಿದೆ.
ಕ್ರೈಸ್ತ ಧರ್ಮದ ಅತ್ಯಂತ ಪವಿತ್ರ ಹಾಗೂ ಶೋಕದ ದಿನವಾದ ‘ಶುಭ ಶುಕ್ರವಾರ’ವನ್ನು (ಗುಡ್ ಫ್ರೈಡೇ) ಮಂಗಳೂರು ಧರ್ಮಪ್ರಾಂತ್ಯದಾದ್ಯಂತ ಇಂದು ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸಲಾಗುತ್ತಿದೆ. ಈ ವರ್ಷದ ಆಚರಣೆಯು ವಿಶೇಷವಾಗಿ “ಮಕ್ಕಳ ವರ್ಷ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿದ್ದು, ಚರ್ಚ್ಗಳ ವಿವಿಧ ವಿಧಿವಿಧಾನಗಳಲ್ಲಿ ಮಕ್ಕಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗಿದೆ.
ನನ್ನ ಮಗಳ ವಿಚಾರದಲ್ಲಿ ನ್ಯಾಯ ಕೊಡಿಸದಿದ್ದರೆ, ಪುತ್ತೂರು ಮಹಾಲಿಂಗೇಶ್ವರ ದೇವರ ಧ್ವಜಸ್ತಂಭದ ಮುಂದೆ ಕುಳಿತುಕೊಳ್ಳುತ್ತೇನೆ ಎಂದು ಸಂತ್ರಸ್ತೆ ತಾಯಿ ನಮಿತಾ ಸ್ಫೋಟಕ ಹೇಳಿಕೆಯನ್ನ ನೀಡಿದ್ದಾರೆ.
ಮೀನು ಹಿಡಿಯಲೆಂದು ಫಲ್ಗುಣಿ ನದಿಗೆ ಸಣ್ಣ ದೋಣಿಯಲ್ಲಿ ತೆರಳಿದ್ದ ಮೂವರು ಯುವಕರಲ್ಲಿ ಇಬ್ಬರು ನೀರುಪಾಲಾದ ಘಟನೆ ಕಾವೂರು ಠಾಣಾ ವ್ಯಾಪ್ತಿಯ ಕುಂಜತ್ಬೈಲಿನಲ್ಲಿ ನಡೆದಿದೆ.
ತಾಲೂಕಿನ ರೇಷ್ಮೆರೋಡ್ ಬಳಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಬಾಗಿಲು ಏಕಾಏಕಿ ತೆರೆದುಕೊಂಡು ರಸ್ತೆಗೆ ಎಸೆಯಲ್ಪಟ್ಟಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ಶಾಸಕ ಹರೀಶ್ ಪೂಂಜಾ ಅವರು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದಾರೆ.
ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಯೋರ್ವರಿಗೆ ಕಾರು ಡಿಕ್ಕಿಯಾಗಿದ್ದು ಡಿಕ್ಕಿಯ ರಭಸಕ್ಕೆ ಮಹಿಳೆ ದೂರಕ್ಕೆ ಹಾರಿ ಬಿದ್ದ ಘಟನೆಯ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು ನದಿ ಪಾಲಾದ ದಾರುಣ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಫಲ್ಗುಣಿ ನದಿಯಲ್ಲಿ ಬುಧವಾರ (ಏ.1) ಮುಂಜಾನೆ ಸಂಭವಿಸಿದೆ. ಕುಂಜತ್ಬೈಲ್ ನಿವಾಸಿಗಳಾದ ಗಣೇಶ್ (28), ರಾಯಲ್ (24) ನೀರುಪಾಲಾದ ಯುವಕರು.
ಒಂದೆಡೆ ಪಶ್ಚಿಮ ಬಂಗಾಲ, ತಮಿಳುನಾಡು, ಕೇರಳ, ಅಸ್ಸಾಂನಲ್ಲಿ ನಡೆಯಲಿರುವ ಅಸೆಂಬ್ಲಿ ಚುನಾವಣೆ, ಇನ್ನೊಂದೆಡೆ ಅಡುಗೆ ಅನಿಲದ ಕೊರತೆಯಿಂದಾಗಿ ಕರಾವಳಿಯಲ್ಲಿ ಮೀನುಗಾರಿಕೆ ಅರ್ಧಕ್ಕರ್ಧ ನಿಂತು ಹೋಗಿದೆ.
ನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಆಟೋ ಎಲ್ಪಿಜಿ (ಗ್ಯಾಸ್) ಸಮಸ್ಯೆಯಿಂದ ರಿಕ್ಷಾ ಚಾಲಕರು ಸೇರಿದಂತೆ ದುಡಿಯುವ ವರ್ಗ ಸಂಕಷ್ಟಕ್ಕೆ ಸಿಲುಕಿದೆ. ಸರಕಾರ ಈ ಬಗ್ಗೆ ಗಮನ ಹರಿಸಿ ಕ್ರಮ ವಹಿಸಬೇಕೆಂದು ಸೋಶಿಯಲ್ ಡೆಮೊಕ್ರಾಟಿಕ್ ಟ್ರೇಡ್ ಯೂನಿಯನ್ (ಎಸ್ಬಿಟಿಯು) ಸರಕಾರವನ್ನು ಒತ್ತಾಯಿಸಿದೆ.
ಮದುವೆಯಾದ ಒಂದೇ ತಿಂಗಳಿಗೆ ಉದ್ಯಮಿ ಸುದೀಪ್ ರೈ ನೆಲ್ಯಾಡಿ ಸಾವನ್ನಪ್ಪಿದ ಪ್ರಕರಣದಲ್ಲಿ ಈತನ ಪತ್ನಿ ಸೌಮ್ಯ ಶೆಟ್ಟಿ ಮೇಲೆ ಮೃತನ ಪೋಷಕರು ಗಂಭೀರ ಆರೋಪ ಮಾಡುತ್ತಿರುವ ಬೆನ್ನಲ್ಲೇ ತಾನೂ ಕೂಡ ಅದೇ ಯುವತಿಯಿಂದಾಗಿ ಮೋಸ ಹೋಗಿದ್ದಾಗಿ ಯುವಕನೋರ್ವ ಮುಂದೆ ಬಂದಿದ್ದಾನೆ.
ಫ್ರೆಂಡ್ಸ್ ಮಟಪಾಡಿ ಯೂತ್ ಕ್ಲಬ್ ಮಟಪಾಡಿ ಬ್ರಹ್ಮಾವರ ಇವರ ವತಿಯಿಂದ ಮಟಪಾಡಿ ಪ್ರೀಮಿಯರ್ ಲೀಗ್ ಬ್ರಹ್ಮಾವರ ಗಾಂಧಿ ಮೈದಾನದಲ್ಲಿ ಜರುಗಿತು.
ಕಲಾಕೃತಿ ಗಳಿಂದ ಅಲಂಕೃತವಾದ ಏರ್ ಇಂಡಿಯಾ ಎಕ್ಸ್ಪ್ರೆಸ್ ಬೋಯಿಂಗ್ ವಿಮಾನ ಸೋಮವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.