Showing 20 of 3838 posts • Page 151 of 192
ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ ರಂಗಚಾವಡಿ ಮಂಗಳೂರು ಇದರ ಆಶ್ರಯದಲ್ಲಿ ನವಂಬರ್ 10 ರಂದು ಭಾನುವಾರ ಸಂಜೆ 4.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮ ನಡೆಯಲಿದ್ದು, ರಂಗ ಚಾವಡಿ ಪ್ರಶಸ್ತಿ 2024 ಪ್ರದಾನ ಸಮಾರಂಭ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು-ಸುಳ್ಯದ ಗಡಿಪ್ರದೇಶವೊಂದರಲ್ಲಿ ಮಹಿಳೆಯೊಬ್ಬರು ಬೃಹತ್ ಗಾತ್ರದ ಹೆಬ್ಬಾವೊಂದನ್ನು ಹಿಡಿದ ವೀಡಿಯೋ ಇದೀಗ ಭಾರೀ ವೈರಲ್ ಆಗಿದೆ.
ಲ್ಯಾಂಡ್ ಜಿಹಾದ್ ಹಾಗೂ ವಕ್ಫ್ ಅಕ್ರಮ ವಿರೋಧಿಸಿ ಪುತ್ತೂರಿನ ದರ್ಬೆ ವೃತ್ತದ ಬಳಿ ಪುತ್ತೂರು ಬಿಜೆಪಿ ಮಂಡಲ ಪ್ರತಿಭಟನೆ ನಡೆಸಿದರು.
ರಾಜ್ಯ ಸರಕಾರದ ನಡೆಯ ವಿರುದ್ಧ ಮಂಗಳೂರಿನಲ್ಲಿ ಮಿನಿ ವಿಧಾನ ಸೌಧದ ಮುಂಭಾಗ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ನಡೆಸಿದ್ದಾರೆ.
ಸದ್ಯ ಎಲ್ಲಾ ಕಡೆ ವಕ್ಫ್ ಎಂಬ ಶಬ್ದವೇ ರಿಂಗಣಿಸುತ್ತಿದೆ. ರೈತರ, ಮಠ, ಮಂದಿರಗಳ ಭೂಮಿಯ ದಾಖಲೆಯನ್ನು ಪರಿಶೀಲಿಸುವಾಗ ಅನೇಕ ಕಡೆ ಆ ಭೂಮಿ ಈಗ ವಕ್ಫ್ ಆಸ್ತಿಯಾಗಿ ಬದಲಾಗಿರುವುದು ರೈತರಿಗೆ, ಆಸ್ತಿಕರಿಗೆ ದೊಡ್ಡ ಆಘಾತವನ್ನು ನೀಡಿದೆ.
ವಿಶ್ವ ಕೊಂಕಣಿ ಕೇಂದ್ರದಲ್ಲಿ ನವೆಂಬರ್ 2024 ರ ತಾರೀಕು 5 ಮತ್ತು 6, ಈ ಎರಡೂ ದಿನಗಳಲ್ಲಿ ವಿಶ್ವ ಕೊಂಕಣಿ ಸಮಾರೋಹ ಹಾಗೂ ವಿಶ್ವ ಕೊಂಕಣಿ ವಾರ್ಷಿಕ ಪುರಸ್ಕಾರ ಪ್ರದಾನ ಸಮಾರಂಭ ಜರುಗಲಿರುವುದು.
ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ತಲೆ ಬುರುಡೆ ಹಾಗೂ ಎಲುಬುಗಳು ಒಳಮೊಗ್ರು ಗ್ರಾಮದ ಉರ್ವದಲ್ಲಿ ನ.3ರಂದು ಪತ್ತೆಯಾಗಿದೆ.
ಮುಂದೊಂದು ದಿನ ಹಿಂದೂಗಳು ಸುನ್ನತ್ ಮಾಡಿಕೊಳ್ಳುವ ಸಂದರ್ಭ ಬರಬಹುದು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ವಿಚಾರ ಇದೀಗ ಮಂಗಳೂರಿನಲ್ಲಿ ಸದ್ದು ಮಾಡ್ತಿದೆ.
ಪತ್ರಕರ್ತರ ಜೊತೆ ದೀಪಾವಳಿ ಸ್ನೇಹಮಿಲನ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಪಾಲ್ಗೊಂಡಿದ್ದರು.
ವಕ್ಫ್ ವಿವಾದದ ವಿರುದ್ಧ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತೀವ್ರ ಆರ್ಥಿಕ ಸಂಕಷ್ಟದ ನಡುವೆ ಯಾವುದೇ ಕ್ಷಣದಲ್ಲಿ ಮುರಿದು ಬೀಳಬಹುದಾಗಿದ್ದ ಗುಡಿಸಲಿನಲ್ಲಿ ವಾಸಿಸುತ್ತಿದ್ದ ಬೋಳೂರು ವಾರ್ಡಿನ ಪರಪ್ಪು ಕಾಲೋನಿಯ ಪರಿಶಿಷ್ಟ ಸಮುದಾಯದ ದಿವಂಗತ ರವಿಯವರ ಕುಟುಂಬದವರಿಗಾಗಿ ಶಾಸಕ ಶ್ರೀ ಡಿ.ವೇದವ್ಯಾಸ ಕಾಮತ್ ಹಾಗೂ ಸ್ಥಳೀಯ ಪಾಲಿಕೆ ಸದಸ್ಯ ಶ್ರೀ ಜಗದೀಶ್ ಶೆಟ್ಟಿ ರವರ ನೇತೃತ್ವದಲ್ಲಿ ನಿರ್ಮಿಸಲಾದ ಸುಸಜ್ಜಿತ “ಶ್ರದ್ಧಾ” ಮನೆಯನ್ನು ಹಸ್ತಾಂತರಿಸುವ ಕಾರ್ಯಕ್ರಮವು ನಡೆಯಿತು.
ಮಂಗಳೂರು ಏರ್ಪೋರ್ಟ್ ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದು, ಇವರ ಅಳೂ ಎಲ್ಲಾ ಬರೋದೇ ಎಲೆಕ್ಷನ್ ಟೈಮ್ ನಲ್ಲಿ, ಮಿಸ್ಟರ್ ಕುಮಾರಸ್ವಾಮಿ, ಒಂದು ರಾಷ್ಟ್ರಧ್ವಜ ಹಾರಿಸೋಕೆ ನಿಮ್ಮ ಅವಧಿಯಲ್ಲಿ ರಾಮನಗರಕ್ಕೆ ಹೋಗಿಲ್ಲ,
ಚಲಿಸುತ್ತಿದ್ದ ಬೈಕ್ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕೆಬ ತಾಲೂಕಿನ ಕೋಡಿಂಬಾಳ ಸಮೀಪದ ಪುಳಿಕುಕ್ಕು ಎಂಬಲ್ಲಿ ನಡೆದಿದೆ.
ಕನ್ನಡ ರಾಜ್ಯೋತ್ಸವದ ಸಂಭ್ರಮ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಗಮನಸೆಳೆದಿದೆ. ಕೆ.ಎಸ್.ಆರ್.ಟಿ.ಸಿ ವಿಭಾಗದ ಬಸ್ಸನ್ನೇ ಕನ್ನಡದ ತೇರಾಗಿ ಪರಿವರ್ತನೆ ಮಾಡಲಾಗಿದೆ.
ಜಾನಪದ ಕ್ರೀಡೆಯಾದ ಕಂಬಳದ ಆರಂಭಗೊಳ್ಳುತ್ತಿದೆ. ಈ ಬಾರಿ ಸಮಯ ಪಾಲನೆಗೆ ಆದ್ಯತೆ ನೀಡಲು ನಿಯಮಾವಳಿ ಸೂತ್ರ ಅನುಷ್ಠಾನಕ್ಕೆ ಜಿಲ್ಲಾ ಕಂಬಳ ಸಮಿತಿ ನಿರ್ಧರಿಸಿದೆ.
ದೀಪಾವಳಿ ಹಬ್ಬದ ಪ್ರಯುಕ್ತ ಆರಂಭಿಸಿದ ಲೋಕಮಾನ್ಯ ತಿಲಕ್ ಟಿ (ಮುಂಬೈ)-ಕೊಚುವೆಲಿ (ತಿರುವನಂತಪುರ) ಸಾಪ್ತಾಹಿಕ ಸ್ಪೆಷಲ್ (01463) ರೈಲನ್ನು ನ.21ರ ತನಕ ಹಾಗೂ ಕೊಚುವೆಲಿ-ಲೋಕಮಾನ್ಯ ತಿಲಕ್ (ಟಿ) ಸಾಪ್ತಾಹಿಕ ಸ್ಪೆಷಲ್ (01464) ರೈಲನ್ನು ನವೆಂಬರ್ 23 ತನಕ ವಿಸ್ತರಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕುರಿಯ ಗ್ರಾಮದ ಇಡಬೆಟ್ಟು ಎಂಬ ಪ್ರದೇಶದಲ್ಲಿ ಮೆಸ್ಕಾಂ ಗುತ್ತಿಗೆದಾರರು ಹಾಕಿದ ಕಂಬ ಎರಡನೇ ದಿನದಲ್ಲಿ ಧರೆಗೆ ಉರುಳಿದೆ.
ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ಯಾ ರೆಹಮತ್ ನಗರ ಕಜೆ ಬಾಕಿಮಾರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಜೋಡಿಯನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ ಆಂಟಿ ಡ್ರಗ್ ಟೀಂ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ.
ದೀಪಾವಳಿ ಹಬ್ಬದ ಪ್ರಯುಕ್ತ ಪೊಳಲಿಯ ಪುರಲ್ದಪ್ಪೆನ ಮೋಕೆದ ಬೊಳ್ಳಿಲು, ಪೊಳಲಿ ಟೈಗರ್ಸ್ ತಂಡದ ವತಿಯಿಂದ ಐದನೇ ವರ್ಷದ ಮೂರು ದಿನಗಳ ದೀಪೋತ್ಸವ ಮತ್ತು ಕುಣಿತ ಭಜನಾ ಕಾರ್ಯಕ್ರಮದ ಮೊದಲ ದಿನದ ಕಾರ್ಯಕ್ರಮ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನೆರವೇರಿತು.
ತಾಯಿ ಸಮುದಾಯವು 42 ಸಾವಿರ ತಾಯಿಯರನ್ನು ಹೊಂದಿರುವ ನೋಂದಾಯಿತ ಟ್ರಸ್ಟ್ ಆಗಿದ್ದು, ದೀಪಾವಳಿ ಪ್ರಯುಕ್ತ ಹಮ್ಮಿಕೊಂಡ ಬೊಳ್ಪುದಾ ಗೌಜಿ- ಸೀಸನ್ 3 ಎಂಬ ಕಾರ್ಯಕ್ರಮವು ಸಂತೋಷ, ಏಕತೆ, ಮತ್ತು ಸಮಾವೇಶವನ್ನು ಸಮುದಾಯದ ಒಳಗಿನಲ್ಲಿ ಹರಡುವ ಉದ್ದೇಶವನ್ನು ಹೊಂದಿತ್ತು.