Showing 20 of 3839 posts • Page 152 of 192
ತಾಯಿ ಸಮುದಾಯವು 42 ಸಾವಿರ ತಾಯಿಯರನ್ನು ಹೊಂದಿರುವ ನೋಂದಾಯಿತ ಟ್ರಸ್ಟ್ ಆಗಿದ್ದು, ದೀಪಾವಳಿ ಪ್ರಯುಕ್ತ ಹಮ್ಮಿಕೊಂಡ ಬೊಳ್ಪುದಾ ಗೌಜಿ- ಸೀಸನ್ 3 ಎಂಬ ಕಾರ್ಯಕ್ರಮವು ಸಂತೋಷ, ಏಕತೆ, ಮತ್ತು ಸಮಾವೇಶವನ್ನು ಸಮುದಾಯದ ಒಳಗಿನಲ್ಲಿ ಹರಡುವ ಉದ್ದೇಶವನ್ನು ಹೊಂದಿತ್ತು.
ಚೇತನಾ ಬಾಲವಿಕಾಸ ಕೇಂದ್ರದ ವಿಶೇಷ ಚೇತನ ಮಕ್ಕಳಿಂದ ದೀಪಾವಳಿಗೆ ಹಣತೆ ತಯಾರಿಸಿದ್ದಾರೆ.
ದೇಶದೆಲ್ಲೆಡೆ ದೀಪಾವಳಿಯ ಸಂಭ್ರಮ ಈ ಸಂಭ್ರಮದ ಪ್ರಯುಕ್ತ ಮಂಗಳೂರು ಶಕ್ತಿ ನಗರದಲ್ಲಿ ಇರುವ ಸಾನಿಧ್ಯ ಭಿನ್ನ ಸಾಮರ್ಥ್ಯದ ಮಕ್ಕಳ ವಸತಿಯುತ ಶಾಲೆಯಲ್ಲಿ ದೀಪಾವಳಿ ಹಬ್ಬವನ್ನ ಆಚರಣೆ ಮಾಡಲಾಯಿತ್ತು.
ಕೇಂದ್ರ ಗೃಹ ಸಚಿವ ಅಮಿತ್ ಶಾರವರು ತಂಡಗಳನ್ನು ರಚಿಸಿ 2047ರೊಳಗೆ ಹಿಂದಿಯನ್ನು ರಾಷ್ಟ್ರ ಭಾಷೆ ಮಾಡುವ ಪರಿಕಲ್ಪನೆ ಒಕ್ಕೂಟ ವ್ಯವಸ್ಥೆಯ ಮೇಲಿನ ಹಲ್ಲೆಯಾಗಿದ್ದು, ಕರ್ನಾಟಕ ರಾಜ್ಯೋತ್ಸವದ ಈ ಸಂದರ್ಭದಲ್ಲಿ ಈ ಬಗ್ಗೆ ಜನಜಾಗೃತಿಯಾಗಬೇಕಿದೆ ಎಂದು ಕೆಪಿಸಿಸಿ ವಕ್ತಾರೆ ಯು.ಟಿ. ಫರ್ಜಾನ ಹೇಳಿದ್ದಾರೆ.
ಸ್ಯಾಂಡೀಸ್ ಕಂಪನಿ ಪ್ರಾಯೋಜಕತ್ವದಲ್ಲಿ ಎರಡನೇ ವರ್ಷದ ಮಂಗಳೂರು ಯುವ ದಸರಾ-2024 ಸ್ಟಾರ್ ಮ್ಯೂಸಿಕಲ್ ನೈಟ್ ನ.2ರಂದು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ದೀಪಾವಳಿ ಸಂಭ್ರಮದೊಂದಿಗೆ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ರೂವಾರಿ, ಶಾಸಕ ಎ.ಉಮಾನಾಥ ಕೋಟ್ಯಾನ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸ್ನೇಹಮಿಲನ-ಸಿನಿರಂಗ ಪುರಸ್ಕಾರದಲ್ಲಿ ಹಿರಿಯ ಪತ್ರಕರ್ತ, ರಂಗಚಾವಡಿ ಸಂಸ್ಥೆಯ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ ಅವರನ್ನು “ರಂಗಮಿತ್ರ ಪತ್ರಕರ್ತ” ಪ್ರಶಸ್ತಿ ನೀಡಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.
ಮಂಗಳೂರಿನ ಮೀನುಗಾರಿಕೆ ಬಂದರಿನಲ್ಲಿ ಮೂರನೇ ಹಂತದ ವಿಸ್ತರಣೆಯ ಜೊತೆಗೆ ೧ ಮತ್ತು ೨ ಹಂತದ ಜೆಟ್ಟಿಯನ್ನು ಮೇಲ್ದರ್ಜೆಗೇರಿಸುವ 37.50 ಕೋಟಿ ರೂ. ವೆಚ್ಚದ ಕಾಮಗಾರಿ ಶೀಘ್ರವೇ ಆರಂಭವಾಗಲಿದೆ.
ಕರ್ನಾಟಕ ಸರ್ಕಾರ ಕೊಡಮಾಡುವ ಜಾನಪದ ಕ್ಷೇತ್ರದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ದೈವನರ್ತಕ-ಪಾತ್ರಿ ಲೋಕಯ್ಯಸೇರಾ ಆಯ್ಕೆಯಾಗಿದ್ದಾರೆ.
ಮನೆ ಹಾಗೂ ಅಂಗನವಾಡಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಹೆಚ್.ಇ. ನಾಗರಾಜ್ ರವರ ನೇತೃತ್ವದ ಅಪರಾದ ತಂಡದ ಸಿಬ್ಬಂದಿಗಳು ಅ.೨೯ರಂದು ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಮಾಣಿ ಜಂಕ್ಷನ್ ನಲ್ಲಿ ಬಂಧಿಸಿದ್ದಾರೆ.
ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಘಟಕದ ವತಿಯಿಂದ ನ. 1ರಂದು ಬೆಳಿಗ್ಗೆ 10:30ಕ್ಕೆ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಡಾ. ಶಾಂತಾರಾಮ ಶೆಟ್ಟಿ ಬರೆದ ಕನ್ನಡ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಐಎಂಎ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಂಗಳೂರು ಘಟಕದ ಅಧ್ಯಕ್ಷ ಡಾ. ರಂಜನ್ ಹೇಳಿದ್ದಾರೆ.
ಹಿಂದೂ ಸಂಸ್ಕೃತಿ, ಸಂಸ್ಕಾರ, ಪರಂಪರೆಗಳ ಮೇಲೆ ದಾಳಿಗಳಾಗುತ್ತಿವೆ. ಇಂತಹ ಸಂದರ್ಭದಲ್ಲಿ ನಾವು ನಮ್ಮತನವನ್ನು ಉಳಿಸಿಕೊಳ್ಳುವುದಕ್ಕೆ ಹೋರಾಡಬೇಕಾದ ಸ್ಥಿತಿಯಲ್ಲಿದ್ದೇವೆ.
ಮೂಲತಃ ಉಡುಪಿ- ಮಂಗಳೂರಿನವರಾದ ಶ್ರೀ ಕಿಶೋರ ಶೆಟ್ಟಿಯವರು ಕಳೆದ ಕೆಲವು ವರ್ಷಗಳಿಂದ ಯುಎಇಯಲ್ಲಿ ನೆಲೆಸಿದ್ದಾರೆ.
ಭಾರತೀಯ ಜೀವ ವಿಮಾ ನಿಗಮ ಬದುಕಿಗೆ ಭದ್ರತೆ ಒದಗಿಸುವ ಕಾರ್ಯ ಮಾಡುತ್ತದೆ.
ಅಡ್ಡೂರು-ಪೊಳಲಿ ಸೇತುವೆ ಮತ್ತು ಉಳಾಯಿಬೆಟ್ಟು ಕಿರು ಸೇತುವೆಯ ಧಾರಣಾ ಸಾಮರ್ಥ್ಯ ಹೆಚ್ಚಿಸುವ ಹಾಗೂ ಎರಡೂ ಕಡೆ ಹೊಸ ಸೇತುವೆ ನಿರ್ಮಿಸುವ ಕುರಿತು ಅ. ೨೯ ಮಂಗಳವಾರ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಮತ್ತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಜಿಲ್ಲಾಧಿಕಾರಿಯೊಂದಿಗೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ಮಾತುಕತೆ ನಡೆಸಿದರು.
ಕೆ.ಎಸ್.ರಾವ್ ರಸ್ತೆಯ ಜೋಸ್ ಅಲುಕ್ಕಾಸ್ ಬಳಿ ರಸ್ತೆ ಮಧ್ಯದಲ್ಲಿರುವ ಕೇಬಲ್ ಛೇಂಬರ್ ವಾಹನ ಸವಾರರಿಗೆ ಅದರಲ್ಲೂ ಮುಖ್ಯವಾಗಿ ದ್ವಿಚಕ್ರ ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.
ಜಪ್ಪಿನಮೊಗರಿನಿಂದ ಮಹಾಕಾಳಿಪಡುವಾಗಿ ಮಾರ್ಗನ್ಸ್ಗೇಟ್ ವರೆಗಿನ ಚತುಷ್ಪಥ ರಸ್ತೆ ಅಭಿವೃದ್ಧಿಯ ಭಾಗವಾಗಿ ಈ ಕಾಮಗಾರಿ ನಡೆಯುತ್ತಿದೆ.
ಕೊಂಕಣಿ ಕಥೊಲಿಕ್ ಉದ್ಯಮಿಗಳ, ವೃತ್ತಿಪರರ ಮತ್ತು ಕೃಷಿಕರ ಸಂಸ್ಥೆ ‘ರಚನಾ’ ನವೆಂಬರ್ 3ರಂದು ಬೆಳ್ಳಿ ಹಬ್ಬದ ಸಂಭ್ರಮ ಆಚರಿಸಲಿದೆ.
ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿ, ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಕೇರಳ ಕಾಸರಗೋಡಿನ ನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಭಾರಿ ಸ್ಫೋಟ ಸಂಭವಿಸಿದ್ದು, ಈ ದುರಂತದಲ್ಲಿ 24 ಗಾಯಾಳುಗಳು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಣಿಜ್ಯ ಪ್ರಮಾಣದ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಸ್ಕೂಟರನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.