Showing 20 of 3840 posts • Page 156 of 192
ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆದು ಅಲ್ಲಿಯೇ ಉತ್ತಮ ಉದ್ಯೊಗಾವಕಾಶವಿದ್ದರೂ, ತನ್ನ ತಾಯ್ನಾಡಿನ ಬಳುವಳಿ – ಕೌಟುಂಬಿಕ ಉದ್ಯಮಕ್ಕೆ ಮರಳಿ, ಅನುಕರಣೀಯ ಮಾದರಿ ನಿರ್ಮಿಸಿದ ಕೀರ್ತಿ ಆನಂದ ಜಿ ಪೈಯವರದ್ದು ಎಂದು ವಿಶ್ವಕೊಂಕಣಿ ಕೇಂದ್ರದ ಅಧ್ಯಕ್ಷರಾದ ಸಿ ಎ ನಂದಗೋಪಾಲ ಶೆಣೈಯವರು ಅಭಿಪ್ರಾಯ ಪಟ್ಟರು.
ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿರುದ್ಧ ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಜಾವೇ ಹಿಂಪಡೆದಿದೆ.
ಅರಣ್ಯ ಇಲಾಖೆ ಉಪ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎಂಬವರಿಂದ ಬಿಲ್ಲವ ಯುವತಿ ಮತ್ತು ಭಜನೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ಹಿಂದೂಪರ ಸಂಘಟನೆಗಳಿಂದ ಪುತ್ತೂರು ಡಿವೈಎಸ್ಪಿ ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸಿಒಡಿಪಿಯ ಮದರ್ ಥೆರೆಸಾ ಸಭಾಂಗಣದಲ್ಲಿ 17 ಅಕ್ಟೋಬರ್ 2024 ರಂದು ಶ್ರೀಮಾನ್ ಮೈಕಲ್ ಡಿ ಸೋಜ ಮತ್ತು ಕುಟುಂಬದವರಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವು ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಅರಣ್ಯ ಇಲಾಖೆಯ ಪುತ್ತೂರು ಉಪ ವಲಯ ಅರಣ್ಯಾಧಿಕಾರಿ ಸಂಜೀವ ಕಾಣಿಯೂರು ಬಿಲ್ಲವ ಜಾತಿಯ ಹೆಣ್ಣು ಮಕ್ಕಳ ಬಗ್ಗೆ ಮತ್ತು ಹಿಂದು ಯುವಕರ ಬಗ್ಗೆ ಅಶ್ಲೀಲ, ಮಾನಹಾನಿ ಮಾಡುವ ಮತ್ತು ಸಮಾಜದಲ್ಲಿ ವರ್ಗ ಸಂಘರ್ಷಕ್ಕೆ ಎಡೆ ಮಾಡಿಕೊಡುವಂತಹ ಮತ್ತು ಸಮಾಜದ ಶಾಂತಿಗೆ ಧಕ್ಕೆ ಉಂಟಾಗುವ ರೀತಿಯಲ್ಲಿ ಮಾತನಾಡಿರುವ ಕುರಿತು ಮೂಡುಬಿದಿರೆ ಪೋಲೀಸರಿಗೆ ಹಿಂದೂ ಜಾಗರಣ ವೇದಿಕೆ ದೂರು ನೀಡಿದೆ.
ತುಳುನಾಡಿನ ಜಾನಪದೀಯ ಕ್ರೀಡೆ ಕಂಬಳದ ಋತು ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇವೆ. ಈ ಬಾರಿ ಮೊದಲ ಕಂಬಳ ಬೆಂಗಳೂರಿನಲ್ಲಿ ನಡೆದರೆ, ಕೊನೆಯ ಕಂಬಳ ಮಲೆನಾಡು ಶಿವಮೊಗ್ಗದಲ್ಲಿ ನಡೆಯಲಿದೆ.
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ, ಸುರತ್ಕಲ್ ತನ್ನ ಬಹು ನಿರೀಕ್ಷಿತ ವಾರ್ಷಿಕ ತಾಂತ್ರಿಕ ಉತ್ಸವವಾದ ದಿ ಇಂಜಿನಿಯರ್ 2024 ಅನ್ನು ಇಂದು (17.10.2024) NITK ಸುರತ್ಕಲ್ ಕ್ಯಾಂಪಸ್ನಲ್ಲಿ ಪ್ರಾರಂಭಿಸಿತು. ಈ ವರ್ಷದ ಥೀಮ್, “ಎನ್ಚ್ಯಾಂಟೆಡ್ ಕಾಸ್ಮೊಸ್”, ವಿಶಾಲವಾದ ಬ್ರಹ್ಮಾಂಡದ ನಾವೀನ್ಯತೆ, ಕುತೂಹಲ ಮತ್ತು ಅನ್ವೇಷಣೆಯನ್ನು ಪ್ರೇರೇಪಿಸುವ ಗುರಿಯನ್ನು ಹೊಂದಿದೆ.
ಮಾದಕ ದ್ರವ್ಯ ಹಾವಳಿ ತಡೆಗೆ ಸರಕಾರ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಪ್ರಯತ್ನಗಳಿಗೆ ಪೂರಕವಾಗಿ ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತ್ಯ, ಫಾದರ್ ಮುಲ್ಲರ್ ಚಾರಿಟೇಬಲ್ ಟ್ರಸ್ಟ್, ಅಲೋಶಿಯಸ್ ಡೀಮ್ಸ್ ಯೂನಿವರ್ಸಿಟಿ, ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಮತ್ತು ಕ್ಯಾಥೋಲಿಕ್ ಶಿಕ್ಷಣ ಮಂಡಳಿ ಸಹಯೋಗದಲ್ಲಿ ಅ. 18ರಂದು ಮಧ್ಯಾಹ್ನ 2 ರಿಂದ 4:30 ರವರೆಗೆ ವಾಕಥಾನ್ ಕಾರ್ಯಕ್ರಮ ಆಯೋಜಿಸುತ್ತಿದೆ.
ನೆಲ್ಲಿತೀರ್ಥ ಸೋಮನಾಥೇಶ್ವರ ಗುಹಾಲಯದ ವಾರ್ಷಿಕ ತೀರ್ಥಸ್ನಾನವನ್ನು ಉದ್ಘಾಟಿಸುವ ಕುರಿತು ಇಂದು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಯಿತು.
ಮಂಗಳೂರಿನ ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ನಡೆದ ಶಾಲಾ ಪ್ರಾರ್ಥನೆಯಲ್ಲಿ ವಿದ್ಯಾಭಾರತಿಯ ರಾಜ್ಯಾಧ್ಯಕ್ಷರು ಮತ್ತು ಬೆಳಗಾವಿ ಸಂತಮೀರಾ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಪರಮೇಶ್ವರ ಹೆಗಡೆ ಅವರು ಭಾಗವಹಿಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಮುಂಬೈಯ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಜಾಗತಿಕ ಮಟ್ಟದ ಬಂಟ ಸಮಾಜದ ಬಂಧುಗಳ ಒಗ್ಗಟ್ಟಿನಲ್ಲಿ “ವಿಶ್ವ ಬಂಟರ ಸಮಾಗಮ”ಬೃಹತ್ ಕಾರ್ಯಕ್ರಮ ನಡೆಸುವ ಕುರಿತು ವಿಶೇಷ ಸಭೆ ಅ 15 ರಂದು ಕುರ್ಲಾ ಪೂರ್ವದ ಬಂಟರ ಭವನದ ಎನೆಕ್ಸ್ ಸಂಕಿರಣದಲ್ಲಿ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ದಸರಾ ಸಂಭ್ರಮಾಚರಣೆ ಪ್ರಯುಕ್ತ ತುಳುನಾಡ ಸಾಂಪ್ರದಾಯಿಕ ಕಲೆಯ ಗತ್ತಿನ ಪ್ರದರ್ಶನ ‘ಪಿಲಿ ಅಜನೆ’ ಕಾರ್ಯಕ್ರಮವು ಪ್ರಮೋದ್ ಕರ್ಕೇರ ನೇತೃತ್ವದಲ್ಲಿ, ರವಿರಾಜ್ ಚೌಟ ಸಹಭಾಗಿತ್ವದಲ್ಲಿ ಮಂಗಳೂರಿನ MG ರಸ್ತೆಯಲ್ಲಿರುವ ಹೊಟೇಲ್ ದೀಪಾ ಕಂಫರ್ಟ್ಸ್ ನ ಹತ್ತಿರ ನಡೆಯಿತು.
ರಾಜ್ಯದಲ್ಲಿ ಅಧಿಕಾರದಲ್ಲಿರುವ ಹಿಂದೂ ವಿರೋಧಿ, ಭ್ರಷ್ಟ ಕಾಂಗ್ರೆಸ್ ಸರ್ಕಾರ ಹಾಗೂ ಭ್ರಷ್ಟ ಮುಖ್ಯಮಂತ್ರಿಗಳ ವಿರುದ್ಧ ಶೀಘ್ರವೇ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ನಕಲಿ ಪಾಸ್ಪೋರ್ಟ್ ಬಳಸಿ ದುಬೈಗೆ ಪ್ರಯಾಣಿಸಲು ಯತ್ನಿಸುತ್ತಿದ್ದ ಬಾಂಗ್ಲಾದೇಶದ ಪ್ರಜೆ ಮೊಹಮ್ಮದ್ ಮಾಣಿಕ್ ಹುಸೇನ್ ಎಂಬಾತನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಪದುವಾ ಜಂಕ್ಷನ್ ಬಳಿ ನೆಟ್ಟು ಸಂರಕ್ಷಿಸಲಾಗುತ್ತಿದ್ದ ಮಿಯಾವಾಕಿ ಅರಣ್ಯವನ್ನು ಕಡಿಯದಂತೆ ಹೈಕೋರ್ಟ್ ಆದೇಶಿಸಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಿನ್ನಡೆ ಉಂಟಾಗಿದೆ.
ಕೆನರಾ ಬ್ಯಾಂಕ್ ನ ಕೊಕ್ಕಡ ಶಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ವಂಚನೆ, ಲೂಟಿಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಹಾಗೂ ವರದಿ ಬಹಿರಂಗ ಪಡಿಸಬೇಕು.ಎಲ್ಲಾ ಅನ್ಯಾಯಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಅ.14ರಂದು ಕೊಕ್ಕಡ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಅನಿರ್ಧಿಷ್ಟ ಕಾಲ ಧರಣಿ ಸತ್ಯಾಗ್ರಹ ನಡೆಯಿತು.
ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿ ಕಳ್ಳತನದ ಪ್ರಕರಣಗಳು ನಡೆಯುತ್ತಿದ್ದು, ಭಾನುವಾರ ರಾತ್ರಿ ಕಳ್ಳನೊಬ್ಬನ ಚಟುವಟಿಕೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ದಸರಾ ಶೋಭಾಯಾತ್ರೆ ವೇಳೆ ವಿದ್ಯಾರ್ಥಿಗಳ ಹೊಡೆದಾಟ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ವೇಷ ಹಾಕಲು ಇದೆ ಎಂದು ಮನೆಯಲ್ಲಿ ಹೇಳಿ ಹೋದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಳಲಿಯ (ಅಡ್ಡೂರು) ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿರುವ ಸೇತುವೆಯಲ್ಲಿ ಘನವಾಹನ ಸಂಚಾರದ ಕುರಿತಂತೆ ಎರಡು ತಿಂಗಳುಕಳೆದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳದ ಮತ್ತು ಪರ್ಯಾಯ ರಸ್ತೆಯ ವ್ಯವಸ್ಥೆಗೆ ಮುಂದಾಗದೆ ನಿರ್ಲಕ್ಷ್ಯತನ ತೋರಿದ ಜಿಲ್ಲಾಡಳಿತದ ವಿರುದ್ದ ಜನಾಕ್ರೋಶ ವ್ಯಕ್ತವಾದ ಬೆನ್ನಲೇ ಎಚ್ಚೆತ್ತ ಜಿಲ್ಲಾಡಳಿತ ಬಂಟ್ವಾಳ ತಹಶೀಲ್ದಾರರ ನೇತೃತ್ವದ ಅಧಿಕಾರಿಗಳ ದಂಡು ಸೋಮವಾರ ಪೊಳಲಿಗೆ ರವಾನಿಸಿ ಗ್ರಾಮಸ್ಥರ ಮನವೊಲಿಸಿದ್ದು,ಕೊನೆಗೂ ಮಂಗಳವಾರ ( ಅ.15) ನಡೆಯಬೇಕಾಗಿದ್ದ ಪ್ರತಿಭಟನೆಯನ್ನು ಹಿಂತೆಗೆಸುವಲ್ಲಿ ಯಶಸ್ವಿಯಾಗಿದೆ.