Showing 20 of 4135 posts • Page 168 of 207
ಮಾಣಿ ಗ್ರಾಮ ಪಂಚಾಯತ್ತಿನ ನೂತನ ಅಧ್ಯಕ್ಷರಾಗಿ ಧಾರ್ಮಿಕ ಸಾಮಾಜಿಕ ಮುಂದಾಳು ಸುದೀಪ್ ಕುಮಾರ್ ಶೆಟ್ಟಿಯವರು ಅಧಿಕಾರ ವಹಿಸಿಕೊಂಡರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ಸಿನ ಅಧ್ಯಕ್ಷರಾಗಿ, ಮಾಣಿ ಯುವಕ ಮಂಡಲದ ಅಧ್ಯಕ್ಷರಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುತ್ತಾರೆ.
ಮಂಗಳೂರು ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಮೆಸೆಂಜರ್ ಮೂಲಕ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ನಡೆದಿದ್ದು,
ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ೨೪ ಅಕ್ಟೋಬರ್ ೨೦೨೪ ರಂದು ಲಡಾಖ್ನ ಮನಮೋಹಕ ಪ್ರದೇಶವನ್ನು ಕೇಂದ್ರೀಕರಿಸಿದ ಮತ್ತು ಶೈಕ್ಷಣಿಕ ಕಲಾ ಸಂಯೋಜಿತ ಪ್ರಾಜೆಕ್ಟ್ ಪ್ರದರ್ಶನವನ್ನು ಆಯೋಜಿಸಲಾಯಿತು.
ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ “ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ ಸಮಾರಂಭ ನವಂಬರ್ 1 ರಂದು ಶುಕ್ರವಾರ ಸಂಜೆ 5 ಗಂಟೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ.
“ತುಳುನಾಡಿನ ದೈವ ದೇವರುಗಳ ಅನುಗ್ರಹದಿಂದ ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟ ನಿರ್ವಸತಿಗರಿಗೆ ಉದ್ಯೋಗ ದೊರಕುವ ಕಠಿಣ ಸಮಸ್ಯೆಯು ಇತ್ಯರ್ಥವಾಗಿದೆ” ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಬೀದಿಬದಿ ವ್ಯಾಪಾರಿಗಳಿಗೆ ಸ್ಟೇಟ್ ಬ್ಯಾಂಕ್ ಸಮೀಪ ಪ್ರತ್ಯೇಕ ವಲಯ ನಿರ್ಮಾಣ ಮಾಡಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲಗುತ್ತು ನೇತೃತ್ವದಲ್ಲಿ ಕಲಾವಿದರಿಗೆ ನಿರ್ಮಾಣ ಮಾಡುತ್ತಿರುವ, ಪಟ್ಟ ಯಕ್ಷಾಶ್ರಯ 31ನೇ ಮನೆ ಸರಪಾಡಿಯಲ್ಲಿ ಹಸ್ತಾಂತರಗೊಂಡಿತು.
ಸೈಟ್ ತೋರಿಸುವುದಾಗಿ ಹೇಳಿ ಬಿಲ್ಡರ್ ನಿಂದ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಮಹಿಳೆ ನೀಡಿದ ದೂರಿನಡಿ ಮಂಗಳೂರಿನ ಬಿಲ್ಡರ್ ರಶೀದ್ ವಿರುದ್ದ ಎಫ್ಐಆರ್ ದಾಖಲಾಗಿದೆ.
ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ , ಕಲಾ ಸಂಘದ ಆಶ್ರಯದಲ್ಲಿ “ಮಾನವ ಕಳ್ಳಸಾಗಣೆ” ಎಂಬ ವಿಷಯದ ಕುರಿತಾಗಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ತರಗತಿ ನಡೆಯುತ್ತಿದ್ದಾಗಲೇ ಕ್ಲಾಸ್ ರೂಂಗೆ ಹಾವು ನುಗ್ಗಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನಲ್ಲಿ ನಡೆದಿದೆ.
ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ ಅಂತ ಯುವಕನಿಗೆ ಬೆದರಿಕೆ ಸಂದೇಶ ಬಂದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ನಲ್ಲಿ ನಡೆದಿತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ದೂರಿನ ಹಿನ್ನೆಲೆ ಇಡ್ಯಾ ಗ್ರಾಮದ ಶಾರೀಕ್ ಎಂಬಾತನನ್ನು ಬಂಧಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಪಟಾಕಿ ಮಾರಾಟಗಾರರ ಸಂಘ ಮಂಗಳೂರು ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ಹಸಿರು ಪಟಾಕಿ ಮಾರಾಟ ಕೇಂದ್ರಗಳನ್ನು ಈ ಬಾರಿ ತೆರೆಯಲಾಗುವುದು ಎಂದು ಮಂಗಳೂರಿನಲ್ಲಿ ಸಂಘದ ವತಿಯಿಂದ ಕರೆದ ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರತಿನಿಧಿಗಳು ಮಾಹಿತಿ ನೀಡಿದ್ದಾರೆ.
ಮಂಗಳೂರು ವಿವಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾಧ್ಯಮ ಸಂಶೋಧನೆ ವಿಧಾನಗಳ ಕುರಿತು ಒಂದು ದಿನದ ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1600 ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಬೆಳ್ಮ ಗ್ರಾಮದ ಕಲ್ಲಪಾಡಿ ಎಂಬಲ್ಲಿ ಆಟೋ ರಿಕ್ಷಾ ಮತ್ತು ಪಿಕಪ್ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 11 ವರ್ಷದ ಶಾಲಾ ಬಾಲಕಿ ಆಯಿಷಾ ವಾಹಿಬಾ ಮೃತಪಟ್ಟಿದ್ದಾಳೆ.
ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮಲ್ಲಿಕಟ್ಟೆಯ ಪಿಡಬ್ಲ್ಯೂಡಿ ಪರಿಶೀಲನಾ ಬಂಗಲೆ ಆವರಣದಿಂದ ಬೆಲೆಬಾಳುವ ಮರಗಳನ್ನು ಅನಧಿಕೃತವಾಗಿ ತೆರವುಗೊಳಿಸಿದ್ದಕ್ಕಾಗಿ ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ (ಎನ್ಇಸಿಎಫ್) ನೀಡಿದ ದೂರಿನ ನಂತರ ಅರಣ್ಯ ಇಲಾಖೆ ಪಿಡಬ್ಲ್ಯೂಡಿ ಗುತ್ತಿಗೆದಾರನ ವಿರುದ್ಧ ತ್ವರಿತ ಕ್ರಮ ಕೈಗೊಂಡಿದೆ.
ವಿಧಾನ ಪರಿಷತ್ ಉಪಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು ಸಾಧಿಸಿದೆ.
ತುಳು ಭಾಷೆ ಉತ್ತೇಜನ ಹಾಗೂ ಬೆಳವಣಿಗೆಗೆ ಪೂರಕವಾಗಿ ಮಂಗಳೂರು ವಿಶ್ವವಿದ್ಯಾಲಯ ಆರಂಭಿಸಿರುವ ತುಳು ಸ್ನಾತಕೋತ್ತರ ಪ್ರವೇಶ ಶುಲ್ಕವನ್ನು ಏಕಾಏಕಿ ಏರಿಕೆ ಮಾಡಿರುವುದನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದು, ಸರ್ಕಾರ ಕೂಡಲೇ ಶುಲ್ಕ ಕಡಿತಗೊಳಿಸುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.