Showing 20 of 4108 posts • Page 169 of 206
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ವಾರ್ಷಿಕ ಪೂರ್ಣ ಪ್ರಮಾಣದ ಏರೋಡ್ರೋಮ್ ತುರ್ತು ವ್ಯಾಯಾಮವನ್ನು (ಎಫ್ಎಸ್ಎಇಇ) ಯಶಸ್ವಿಯಾಗಿ ನಡೆಸಿತು.
ಬಿಲ್ಲವ ಹೆಣ್ಣು ಮಕ್ಕಳನ್ನು ಹಾಗೂ ಭಜನೆ ಸಂಕೀರ್ತನೆ ಮಾಡುವವರನ್ನು ನಿಂದಿಸಿರುವ ಆರೋಪದಡಿ ನಿನ್ನೆ ಮಧ್ಯಾಹ್ನ ಬಂಧಿತರಾಗಿದ್ದ ಪುತ್ತೂರು ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರಿಗೆ ಇಂದು ಸಂಜೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ.
ಕರ್ನಾಟಕ ವಿಧಾನ ಪರಿಷತ್ – 11 ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆ – 2024 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತ ನಿಷ್ಪಕ್ಷಪಾತ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಸಲಿದ್ದು,
ತಾಲ್ಲೂಕು ಆಡಳಿತ ಮತ್ತು ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮಹರ್ಷಿ ವಾಲ್ಮೀಕಿ ಪ್ರತಿಮೆಯನ್ನು ತೆರವುಗೊಳಿಸಿರುವುದನ್ನು ವಿರೋಧಿಸಿ ವಾಲ್ಮೀಕಿ ಸಮುದಾಯದ ಸದಸ್ಯರು ಶುಕ್ರವಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿರುವ ಕೆಎಂಸಿ ಹಾಸ್ಪಿಟಲ್ ಸ್ತನ ಕ್ಯಾನ್ಸರ್ ಜಾಗೃತಿ ಮಾಸವನ್ನು ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸ್ತನ ಕ್ಷೇಮ ಕೇಂದ್ರ(ಬ್ರೆಸ್ಟ್ ವೆಲ್ನೆಸ್ ಸೆಂಟರ್) ಆರಂಭಿಸಿದೆ.
ಪಂಜ ಉಪವಲಯ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಅವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕ್ರೀಡೆಯು ಕೇವಲ ಸ್ಪರ್ಧೆಗಷ್ಟೇ ಸೀಮಿತವಲ್ಲ. ದೈಹಿಕ, ಮಾನಸಿಕ ಆರೋಗ್ಯ, ಮೆದುಳಿನ ಚುರುಕುತನಕ್ಕೆ ಅತ್ಯಂತ ಉಪಕಾರಿ.
ಸ್ಥಳೀಯ ಪ್ರಾಧಿಕಾರದ ವಿಧಾನ ಪರಿಷತ್ ಉಪ ಚುನಾವಣೆಯ ಸುಳ್ಯ ಮಂಡಲ ಚುನಾವಣಾ ಪ್ರಚಾರ ಸಭೆಯು ಪೆರುವಾಜೆ ಜೆ.ಡಿ ಆಡಿಟೋರಿಯಂ ನಲ್ಲಿ ನಡೆಯಿತು.
ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆದು ಅಲ್ಲಿಯೇ ಉತ್ತಮ ಉದ್ಯೊಗಾವಕಾಶವಿದ್ದರೂ, ತನ್ನ ತಾಯ್ನಾಡಿನ ಬಳುವಳಿ – ಕೌಟುಂಬಿಕ ಉದ್ಯಮಕ್ಕೆ ಮರಳಿ, ಅನುಕರಣೀಯ ಮಾದರಿ ನಿರ್ಮಿಸಿದ ಕೀರ್ತಿ ಆನಂದ ಜಿ ಪೈಯವರದ್ದು ಎಂದು ವಿಶ್ವಕೊಂಕಣಿ ಕೇಂದ್ರದ ಅಧ್ಯಕ್ಷರಾದ ಸಿ ಎ ನಂದಗೋಪಾಲ ಶೆಣೈಯವರು ಅಭಿಪ್ರಾಯ ಪಟ್ಟರು.
ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿರುದ್ಧ ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಜಾವೇ ಹಿಂಪಡೆದಿದೆ.
ಅರಣ್ಯ ಇಲಾಖೆ ಉಪ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎಂಬವರಿಂದ ಬಿಲ್ಲವ ಯುವತಿ ಮತ್ತು ಭಜನೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ಹಿಂದೂಪರ ಸಂಘಟನೆಗಳಿಂದ ಪುತ್ತೂರು ಡಿವೈಎಸ್ಪಿ ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸಿಒಡಿಪಿಯ ಮದರ್ ಥೆರೆಸಾ ಸಭಾಂಗಣದಲ್ಲಿ 17 ಅಕ್ಟೋಬರ್ 2024 ರಂದು ಶ್ರೀಮಾನ್ ಮೈಕಲ್ ಡಿ ಸೋಜ ಮತ್ತು ಕುಟುಂಬದವರಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವು ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಅರಣ್ಯ ಇಲಾಖೆಯ ಪುತ್ತೂರು ಉಪ ವಲಯ ಅರಣ್ಯಾಧಿಕಾರಿ ಸಂಜೀವ ಕಾಣಿಯೂರು ಬಿಲ್ಲವ ಜಾತಿಯ ಹೆಣ್ಣು ಮಕ್ಕಳ ಬಗ್ಗೆ ಮತ್ತು ಹಿಂದು ಯುವಕರ ಬಗ್ಗೆ ಅಶ್ಲೀಲ, ಮಾನಹಾನಿ ಮಾಡುವ ಮತ್ತು ಸಮಾಜದಲ್ಲಿ ವರ್ಗ ಸಂಘರ್ಷಕ್ಕೆ ಎಡೆ ಮಾಡಿಕೊಡುವಂತಹ ಮತ್ತು ಸಮಾಜದ ಶಾಂತಿಗೆ ಧಕ್ಕೆ ಉಂಟಾಗುವ ರೀತಿಯಲ್ಲಿ ಮಾತನಾಡಿರುವ ಕುರಿತು ಮೂಡುಬಿದಿರೆ ಪೋಲೀಸರಿಗೆ ಹಿಂದೂ ಜಾಗರಣ ವೇದಿಕೆ ದೂರು ನೀಡಿದೆ.
ತುಳುನಾಡಿನ ಜಾನಪದೀಯ ಕ್ರೀಡೆ ಕಂಬಳದ ಋತು ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇವೆ. ಈ ಬಾರಿ ಮೊದಲ ಕಂಬಳ ಬೆಂಗಳೂರಿನಲ್ಲಿ ನಡೆದರೆ, ಕೊನೆಯ ಕಂಬಳ ಮಲೆನಾಡು ಶಿವಮೊಗ್ಗದಲ್ಲಿ ನಡೆಯಲಿದೆ.
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ, ಸುರತ್ಕಲ್ ತನ್ನ ಬಹು ನಿರೀಕ್ಷಿತ ವಾರ್ಷಿಕ ತಾಂತ್ರಿಕ ಉತ್ಸವವಾದ ದಿ ಇಂಜಿನಿಯರ್ 2024 ಅನ್ನು ಇಂದು (17.10.2024) NITK ಸುರತ್ಕಲ್ ಕ್ಯಾಂಪಸ್ನಲ್ಲಿ ಪ್ರಾರಂಭಿಸಿತು. ಈ ವರ್ಷದ ಥೀಮ್, “ಎನ್ಚ್ಯಾಂಟೆಡ್ ಕಾಸ್ಮೊಸ್”, ವಿಶಾಲವಾದ ಬ್ರಹ್ಮಾಂಡದ ನಾವೀನ್ಯತೆ, ಕುತೂಹಲ ಮತ್ತು ಅನ್ವೇಷಣೆಯನ್ನು ಪ್ರೇರೇಪಿಸುವ ಗುರಿಯನ್ನು ಹೊಂದಿದೆ.
ಮಾದಕ ದ್ರವ್ಯ ಹಾವಳಿ ತಡೆಗೆ ಸರಕಾರ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಪ್ರಯತ್ನಗಳಿಗೆ ಪೂರಕವಾಗಿ ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತ್ಯ, ಫಾದರ್ ಮುಲ್ಲರ್ ಚಾರಿಟೇಬಲ್ ಟ್ರಸ್ಟ್, ಅಲೋಶಿಯಸ್ ಡೀಮ್ಸ್ ಯೂನಿವರ್ಸಿಟಿ, ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಮತ್ತು ಕ್ಯಾಥೋಲಿಕ್ ಶಿಕ್ಷಣ ಮಂಡಳಿ ಸಹಯೋಗದಲ್ಲಿ ಅ. 18ರಂದು ಮಧ್ಯಾಹ್ನ 2 ರಿಂದ 4:30 ರವರೆಗೆ ವಾಕಥಾನ್ ಕಾರ್ಯಕ್ರಮ ಆಯೋಜಿಸುತ್ತಿದೆ.
ನೆಲ್ಲಿತೀರ್ಥ ಸೋಮನಾಥೇಶ್ವರ ಗುಹಾಲಯದ ವಾರ್ಷಿಕ ತೀರ್ಥಸ್ನಾನವನ್ನು ಉದ್ಘಾಟಿಸುವ ಕುರಿತು ಇಂದು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಯಿತು.
ಮಂಗಳೂರಿನ ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ನಡೆದ ಶಾಲಾ ಪ್ರಾರ್ಥನೆಯಲ್ಲಿ ವಿದ್ಯಾಭಾರತಿಯ ರಾಜ್ಯಾಧ್ಯಕ್ಷರು ಮತ್ತು ಬೆಳಗಾವಿ ಸಂತಮೀರಾ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಪರಮೇಶ್ವರ ಹೆಗಡೆ ಅವರು ಭಾಗವಹಿಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಮುಂಬೈಯ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಜಾಗತಿಕ ಮಟ್ಟದ ಬಂಟ ಸಮಾಜದ ಬಂಧುಗಳ ಒಗ್ಗಟ್ಟಿನಲ್ಲಿ “ವಿಶ್ವ ಬಂಟರ ಸಮಾಗಮ”ಬೃಹತ್ ಕಾರ್ಯಕ್ರಮ ನಡೆಸುವ ಕುರಿತು ವಿಶೇಷ ಸಭೆ ಅ 15 ರಂದು ಕುರ್ಲಾ ಪೂರ್ವದ ಬಂಟರ ಭವನದ ಎನೆಕ್ಸ್ ಸಂಕಿರಣದಲ್ಲಿ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ದಸರಾ ಸಂಭ್ರಮಾಚರಣೆ ಪ್ರಯುಕ್ತ ತುಳುನಾಡ ಸಾಂಪ್ರದಾಯಿಕ ಕಲೆಯ ಗತ್ತಿನ ಪ್ರದರ್ಶನ ‘ಪಿಲಿ ಅಜನೆ’ ಕಾರ್ಯಕ್ರಮವು ಪ್ರಮೋದ್ ಕರ್ಕೇರ ನೇತೃತ್ವದಲ್ಲಿ, ರವಿರಾಜ್ ಚೌಟ ಸಹಭಾಗಿತ್ವದಲ್ಲಿ ಮಂಗಳೂರಿನ MG ರಸ್ತೆಯಲ್ಲಿರುವ ಹೊಟೇಲ್ ದೀಪಾ ಕಂಫರ್ಟ್ಸ್ ನ ಹತ್ತಿರ ನಡೆಯಿತು.