Showing 20 of 4108 posts • Page 17 of 206
ನಗರದ ಬಾವುಟಗುಡ್ಡದ ಈದ್ಧಾ ಮಸ್ಟಿದ್ದಲ್ಲಿ ದ.ಕ.ಜಿಲ್ಲಾ ಖಾಝಿ ಅಲ್ಲಾಝ್ ತ್ವಾಖಾ ಅಹ್ಮದ್ ಮುಸ್ಲಿಯಾರ್ರ ನೇತೃತ್ವದಲ್ಲಿ ಖುತುಬಾ ಪಾರಾಯಣ ಮತ್ತು ಝೀನತ್ ಬಕ್ಸ್ ಮಸ್ಟಿದ್ನ ಖತೀಬ್ ಸೈಯದ್ ಶಂಶುದ್ದೀನ್ ಬಾಸಿತ್ ಬಾ ಅಲವಿ ತಂಜಳ್ ಅಲ್ ಅನ್ಸಾರಿ ನೇತೃತ್ವದಲ್ಲಿ ಈದ್ ನಮಾಝ್ ನಡೆಯಿತು.
ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ನಿಲ್ದಾಣದಲ್ಲಿ ಪ್ಲಾಟ್ಫಾರ್ಮ್ ವಿಸ್ತರಣೆ ಕಾಮಗಾರಿ ಮುಂದುವರಿದಿರುವ ಹಿನ್ನೆಲೆಯಲ್ಲಿ, ಕೆಲವು ಪ್ರಮುಖ ರೈಲುಗಳ ಸಂಚಾರವನ್ನು ದಾದರ್ ಮತ್ತು ಠಾಣೆ ನಿಲ್ದಾಣಗಳಲ್ಲೇ ಭಾಗಶಃ ರದ್ದುಗೊಳಿಸುವ ಅವಧಿಯನ್ನು ಮಧ್ಯ ರೈಲ್ವೆಯು ಮತ್ತಷ್ಟು ವಿಸ್ತರಿಸಿದೆ.
ಗುರುವಾಯನಕೆರೆಯಿಂದ ಮೂಡಬಿದಿರೆ ಕಡೆಗೆ ಕಾರಿನಲ್ಲಿ ನಿಷೇಧಿತ MDMA ಮಾದಕವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.
ಮೇ ತಿಂಗಳ ಕೊನೆಯವಾರದಲ್ಲಿ ಕೇರಳಕ್ಕೆ ಪ್ರವೇಶಿಸಬೇಕಿದ್ದ ಮುಂಗಾರು ಮಳೆ ಈ ಬಾರಿ ಇನ್ನೂ ಎಂಟ್ರಿ ಕೊಟ್ಟಿಲ್ಲ. ಈಗಾಗಲೇ ಎಲ್ ನಿನೋ ಪ್ರಭಾವದಿಂದ ಈ ಬಾರಿ ಮುಂಗಾರು ಮಳೆಯಲ್ಲಿ ಅಭಾವ ಉಂಟಾಗಲಿದೆ ಎಂದು ಹವಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ.
ಹಲವಾರು ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕ ಭವನದಲ್ಲಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದರು.
ಮಂಗಳೂರು ನಗರದ ಕೆಲವು ಪ್ರಮುಖ ಸಿಟಿ ಬಸ್ ಮಾರ್ಗಗಳ ಬದಲಾವಣೆ ಮತ್ತು ವಿಸ್ತರಣೆಯ ಅಗತ್ಯತೆ ಕುರಿತು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬರೆದಿರುವ ಪತ್ರವನ್ನು ಜಿಲ್ಲಾಧಿಕಾರಿಗಳ ಕಚೇರಿಯು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.
ಕೇಂದ್ರ ಸರಕಾರ ಅಮೇರಿಕಾ ಮತ್ತು ಇರಾನ್ ನಡುವಿನ ಯುದ್ಧದ ನೆಪಹೇಳಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಸಿಎನ್ಜಿ ಬೆಲೆಗಳನ್ನು ಪ್ರತಿದಿನದಂತೆ ಏರಿಸುತ್ತಿದ್ದು, ಇದರಿಂದ ಇತರ ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಅಗಾಧವಾಗಿ ಏರಲಿದೆ. ಈಗಲೇ ಜೀವನ ನಡೆಸಲು ಕಷ್ಟ ಪಡುತ್ತಿರುವ ಜನಸಾಮಾನ್ಯರು ಕಂಗಾಲಾಗಲಿದ್ದಾರೆ.
ರಾಜ್ಯದಲ್ಲಿನ ಗಲಭೆಕೋರರ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂಪಡೆಯುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಸಮಿತಿಗಳ ವತಿಯಿಂದ ಇಂದು ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.
ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ ಬಿದ್ದ ಬೇಲೂರು ಮೂಲದ ಯುವಕನೋರ್ವಮೃತಪಟ್ಟ ಘಟನೆ ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ಮೇ 24ರ ರಾತ್ರಿ ಸಂಭವಿಸಿದೆ.
ತಾಲ್ಲೂಕಿನಾದ್ಯಂತ ಚಾರಣ ತಾಣಗಳು ಮತ್ತು ಪ್ರಮುಖ ಜಲಪಾತಗಳು ಜೂನ್ 1 ರಿಂದ ಪ್ರವಾಸಿಗರಿಗೆ ಮತ್ತೆ ವೀಕ್ಷಣೆಗೆ ತೆರೆದುಕೊಳ್ಳಲಿದೆ.
ಭಟ್ಕಳ ಮೂರಿನ ಧಾರ್ಮಿಕ ಕಟ್ಟೆ ತೆರವು ಮತ್ತು ಪೊಲೀಸರ ಮೇಲೆ ಹಲ್ಲೆ ಹಿನ್ನಲೆ ರಿಯಾಜ್ ಫರಂಗಿಪೇಟೆ ಹೇಳಿಕೆ ನೀಡಿದ್ದಾರೆ.
ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಉಚ್ಚಿಲ್ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೈನ್ ಅಲಿಯಾಸ್ ಟ್ಯಾಬ್ಲೆಟ್ ಆರೀಫ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊರ್ವ ಆರೋಪಿಯನ್ನು ಮೇ 25 ರಂದು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ.
ಸೋಮಂತಡ್ಕ ಅಗರಿ ಕ್ರಾಸ್ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಫೋಟೋಗ್ರಾಫರ್ ಗಣೇಶ್ ಗೌಡ(36) ಅವರು ಮೇ 25ರಂದು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಹೆಸರಾಂತ ರಿಯಲ್ ಎಸ್ಟೇಟ್ ಸಂಸ್ಥೆ ‘ಲ್ಯಾಂಡ್ ಲಿಂಕ್ಸ್’ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ನಿರ್ಮಿಸಿರುವ ವಿನೂತನ ನಾಲ್ಕು ಅತ್ಯಾಧುನಿಕ ಸಭಾಭವನಗಳನ್ನು ಮಂಗಳೂರಿನ ಮೇರಿಹಿಲ್ ನಲ್ಲಿರುವ ಪಾಲೆಮಾರ್ ಕನ್ವೆನ್ಶನ್ ಸೆಂಟರ್ ನ ಲ್ಲಿ ಏಕಕಾಲಕ್ಕೆ ಉದ್ಘಾಟಿಸಿ ಮಾತನಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ನ್ಯಾ. ಎಸ್.ಅಬ್ದುಲ್ ನಝೀರ್ ರವರು ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ನೇತೃತ್ವದಲ್ಲಿ ನಿರ್ಮಾಣವಾದ ಸಭಾಂಗಣ ಸಮುದಾಯದ ಶಿಕ್ಷಣ, ಸಂಸ್ಕೃತಿ, ಸಾಮಾಜಿಕ, ಸೌಹಾರ್ದ ಚಟುವಟಿಕೆಗಳಿಗೆ ಬಳಕೆಯಾಗಲಿ ಎಂದು ಶುಭ ಹಾರೈಸಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದ ಅರಂತೋಡಿನ ಅಡ್ತಲೆ ಎಂಬಲ್ಲಿ ಕೃಷಿತೋಟವೊಂದರಲ್ಲಿ ಮರಿ ಆನೆಯೊಂದರ ಮೃತದೇಹ ಪತ್ತೆಯಾಗಿದೆ. ಸ್ಥಳೀಯರೊಬ್ಬರಿಗೆ ಸೇರಿದ ಅಡಿಕೆ ತೋಟದಲ್ಲಿ ಆನೆ ಮರಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಹಿನ್ನಲೆಯಲ್ಲಿ ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.
ನಗರದಲ್ಲಿ ತಡರಾತ್ರಿ ಕರ್ತವ್ಯ ನಿರತರಾಗಿದ್ದ ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಭೀಕರ ಹಲ್ಲೆ ನಡೆಸಿರುವ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅನುಮಾನಾಸ್ಪದವಾಗಿ ನಿಂತಿದ್ದ ದಂಪತಿಯನ್ನು ಇಂದ್ರಾಳಿ ರೈಲ್ವೆ ಸ್ಟೇಷನ್ ಬಳಿ ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ.ಸೋಮಣ್ಣ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ನಿವಾಸಕ್ಕೆ ಭೇಟಿ ನೀಡಿದರು.